AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh Rain: ಮಳೆಗೆ ನಲುಗಿದ ರಾಯಲಸೀಮೆ ಪ್ರಾಂತ್ಯ; ಒಟ್ಟು 17 ಮಂದಿ ಸಾವು, 100ಕ್ಕೂ ಅಧಿಕ ಜನ ನಾಪತ್ತೆ

ಆಂಧ್ರ ಪ್ರದೇಶದ ರಾಯಲಸೀಮೆ ಪ್ರಾಂತ್ಯ ಮಳೆಗೆ ನಲುಗಿದ್ದು, ಚಿತ್ತೂರು, ಕಡಪ, ಕರ್ನೂಲು, ಅನಂತಪುರ ಜಿಲ್ಲೆಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಇದುವರೆಗೆ ಒಟ್ಟಾರೆ 17 ಮಂದಿ ದುರ್ಮರಣಕ್ಕೀಡಾಗಿದ್ದು, 100 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ,

Andhra Pradesh Rain: ಮಳೆಗೆ ನಲುಗಿದ ರಾಯಲಸೀಮೆ ಪ್ರಾಂತ್ಯ; ಒಟ್ಟು 17 ಮಂದಿ ಸಾವು, 100ಕ್ಕೂ ಅಧಿಕ ಜನ ನಾಪತ್ತೆ
ಮಳೆಯಿಂದ ಕೊಚ್ಚಿ ಹೋಗಿರುವ ಬಸ್
TV9 Web
| Edited By: |

Updated on: Nov 20, 2021 | 8:29 AM

Share

ಆಂಧ್ರ ಪ್ರದೇಶದ ರಾಯಲಸೀಮೆ ಪ್ರಾಂತ್ಯ ಮಳೆಗೆ ನಲುಗಿದ್ದು, ಚಿತ್ತೂರು, ಕಡಪ, ಕರ್ನೂಲು, ಅನಂತಪುರ ಜಿಲ್ಲೆಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಇದುವರೆಗೆ ಒಟ್ಟಾರೆ 17 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು 100 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಪ್ರವಾಹದಿಂದಾಗಿ ಕಡಪ ಜಿಲ್ಲೆಯಲ್ಲಿ ಪ್ರವಾಹದಲ್ಲಿ ಮೂರು ಬಸ್​ಗಳು ಸಿಲುಕಿಕೊಂಡಿದ್ದು, ಇದರಿಂದಾಗಿ ಕನಿಷ್ಠ 12 ಜನರು ದುರ್ಮರಣಕ್ಕೀಡಾಗಿದ್ದಾರೆ. 18 ಜನ ನಾಪತ್ತೆಯಾಗಿದ್ದು, ಹುಡುಕಾಟ ನಡೆದಿದೆ ಎಂದು ಮೂಲಗಳು ತಿಳಿಸಿವೆ. ನಿನ್ನೆ (ಶುಕ್ರವಾರ, ನವೆಂಬರ್ 19) ಸುರಿದ ಭಾರಿ ಮಳೆಗೆ ಪರ್ವಾಹ ಪರಿಸ್ಥಿತಿ ಉಂಟಾಗಿದೆ. ರಾಜಾಂಪೇಟ್ ಪ್ರದೇಶದಲ್ಲಿ ಪರಿಹಾರ ಕಾರ್ಯಾವಚರಣೆ ನಡೆಯುತ್ತಿದ್ದು, ಇದುವರೆಗೆ 12 ಮೃತ ದೇಹಗಳನ್ನು ಹೊರತೆಗೆಯಲಾಗಿದೆ.  ಮಂದಪಲ್ಲೆ, ಅಕೆಪಡು ಹಾಗೂ ನಂದಲೂರ್ ಗ್ರಾಮದಲ್ಲಿ ಬಸ್​ಗಳು ಸಿಲುಕಿಕೊಂಡಿದ್ದವು. ಚಾಲಕರು, ನಿರ್ವಾಹಕರು ಮತ್ತು ಪ್ರಯಾಣಿಕರು ಬಸ್​ನ ಟಾಪ್ ಮೇಲೆ ಹತ್ತಿ ಜೀವ ಉಳಿಸಿಕೊಳ್ಳು ಪ್ರಯತ್ನಿಸಿದರು. ಪ್ರವಾಹಕ್ಕೆ ಕೊಚ್ಚಿಹೋದವರಲ್ಲಿ ಕೆಲವರನ್ನು ಸ್ಥಳೀಯರ ಸಹಾಯದಿಂದ ರಕ್ಷಿಸಲಾಗಿದೆ. ಅದಾಗ್ಯೂ ಮೂವತ್ತಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಚೆಯ್ಯೇರು ನದಿ ತುಂಬಿ ಹರಿಯುತ್ತಿದ್ದು, ಇದರಿಂದಾಗಿ ಅನ್ನಮಯ್ಯ ಅಣೆಕಟ್ಟು ಭರ್ತಿಯಾಗಿದೆ. ಇದರಿಂದ ನೀರನ್ನು ಹೊರಬಿಡಲಾಗುತ್ತಿದ್ದು, ಸಮೀಪದ ಗ್ರಾಮಗಳಾದ ಗುಂಡ್ಲೂರು, ಶೇಷಮಂಬಾಪುರಮ್, ಮಂದಪಲ್ಲಿ, ನಂದಲೂರ್, ರಾಜಂಪೇಟ್ ಮತ್ತು ಇತರ ಸ್ಥಳಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.  ಪ್ರವಾಹದಿಂದಾಗಿ ಕೊಚ್ಚಿ ಹೋದ ಬಸ್ ಹಾಗೂ ಉಳಿದ ಎರಡು ಬಸ್​ಗಳ ಟಾಪ್​ ಮೇಲೆ ಜನರು ಜೀವ ಉಳಿಸಿಕೊಳ್ಳಲು ಹತ್ತಿರುವ ವಿಡಿಯೋಗಳು ವೈರಲ್ ಆಗಿವೆ.

ಮತ್ತೊಂದು ಘಟನೆಯಲ್ಲಿ ಅನಂತಪುರ ಜಿಲ್ಲೆಯ ವೆಲ್ದುರ್ತಿ ಗ್ರಾಮದಲ್ಲಿ ಚಿತ್ರಾವತಿ ನದಿಯ ಪ್ರವಾಹದಿಂದ ಸಿಲುಕಿಕೊಂಡಿದ್ದ 10 ಮಂದಿಯನ್ನು ಭಾರತೀಯ ವಾಯು ಸೇನೆಯ ಹೆಲಿಕಾಪ್ಟರ್​​ಗಳ ಮುಖಾಂತರ ರಕ್ಷಿಸಲಾಗಿದೆ. ಎನ್​ಡಿಆರ್​ಎಫ್, ಎಸ್​ಡಿಆರ್​ಎಫ್, ಅಗ್ನಿ ಶಾಮಕ ದಳ ಸೇರಿದಂತೆ ಇತರ ಇಲಾಖೆಗಳೂ ಕಾರ್ಯಾಚರಣೆಯಲ್ಲಿ ಭಾಗವಹಿಸಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂದರ್ಭದ ವಿಡಿಯೋ ಇಲ್ಲಿದೆ.

ತಿರುಪತಿಯಲ್ಲೂ ಮಳೆಯಿಂದಾಗಿ ಯಾತ್ರಾರ್ಥಿಗಳು ಸಿಲುಕಿಕೊಂಡಿದ್ದು, ಘಾಟ್​ಗಳು ಕ್ಲೋಸ್ ಆಗಿವೆ. ಮಳೆಯಲ್ಲಿ ಸಿಕ್ಕಿಹಾಕಿಕೊಂಡಿರುವ ಸುಮಾರು 15,000 ಯಾತ್ರಾರ್ಥಿಗಳಿಗೆ ದೇವಸ್ಥಾನದ ಆಡಳಿತ ಮಂಡಳಿ ಉಚಿತ ಆಹಾರ ಮತ್ತು ವಸತಿ ನೀಡುತ್ತಿದೆ. ಇಂದು ದೇವಸ್ಥಾನವನ್ನು ದರ್ಶನಕ್ಕೆ ಕ್ಲೋಸ್ ಮಾಡಲಾಗಿದ್ದು, ನಾಳೆ ತೆರೆಯುವ ನಿರೀಕ್ಷೆ ಇದೆ.

ಇದನ್ನೂ ಓದಿ:

Tirupathi: ತಿರುಪತಿಯಲ್ಲಿ ಪ್ರವಾಹದ ಪರಿಸ್ಥಿತಿ, ಗುಡ್ಡಗಳಿಂದ ಭೋರ್ಗರೆಯುತ್ತಿರುವ ನೀರು; ವಿಡಿಯೋ ನೋಡಿ

Karnataka Rain: ಕರ್ನಾಟಕದಲ್ಲಿ ಇಂದಿನಿಂದ 4 ದಿನ ಮಳೆ ಆರ್ಭಟ; ಹಲವೆಡೆ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ