AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್: ಅಂಬಾಲಾದ ಬೀದಿಯಲ್ಲಿ ಮಳೆ ನೀರಿನೊಂದಿಗೆ ಬಂತು ಮೊಸಳೆ!

ಮೊಸಳೆಯನ್ನು ಕಂಡೊಂಡನೆ ಜನರು ಮನೆಗೆ ಬಾಗಿಲು ಹಾಕಿ ಮಹಡಿಯಲ್ಲಿ ನಿಂತು ನೋಡುತ್ತಿರುವ ದೃಶ್ಯ ಕಂಡು ಬಂತು. ಮೊಸಳೆ ಬೀದಿಯಲ್ಲಿ ಮಳೆ ನೀರಲ್ಲಿ  ತೆವಳುತ್ತಿದ್ದುದನ್ನು ಕಂಡು ಜನರು ಯಾರೂ ಬೀದಿಗೆ ಇಳಿದಿಲ್ಲ

ಪಂಜಾಬ್: ಅಂಬಾಲಾದ ಬೀದಿಯಲ್ಲಿ ಮಳೆ ನೀರಿನೊಂದಿಗೆ ಬಂತು ಮೊಸಳೆ!
ಅಂಬಾಲಾ ಬೀದಿಯಲ್ಲಿ ಮೊಸಳೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jul 10, 2023 | 8:49 PM

Share

ಭಾರೀ ಮಳೆಯ ನಂತರ, ಉತ್ತರ ಭಾರತದ ಬಹುತೇಕ ರಾಜ್ಯಗಳು ಪ್ರವಾಹದಂತಹ ಪರಿಸ್ಥಿತಿಗಳನ್ನು ಎದುರಿಸುತ್ತಿವೆ. ಪಂಜಾಬ್  (Punjab), ಹರ್ಯಾಣ ಮತ್ತು ಹಿಮಾಚಲ ಪ್ರದೇಶದಲ್ಲಿ  (Himachal Pradesh) ಬಹುತೇಕ ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿವೆ. ಅವುಗಳ ನೀರು ನಗರಗಳು ಮತ್ತು ಹಳ್ಳಿಗಳ ಬೀದಿಗಳಲ್ಲಿ ಹರಿದಿದ್ದಿ ಈ ನೀರಿನೊಂದಿಗೆ ಇಂತಹ ಹಲವು ಜೀವಿಗಳು ಕೂಡಾ ನಾಡಿಗೆ ಕಾಲಿಟ್ಟಿವೆ. ಅಂಬಾಲದ ಬೀದಿಗಳಲ್ಲಿ ಇತ್ತೀಚಿನ ದಿನಗಳಲ್ಲಿ ಇದೇ ರೀತಿಯ ದೃಶ್ಯ ಕಂಡುಬಂದಿದ್ದು ಜನರು ಭಯಭೀತರಾಗಿದ್ದಾರೆ. ಪ್ರವಾಹದ ನೀರಿನಲ್ಲಿ ಮೊಸಳೆಯೊಂದು ಇಲ್ಲಿನ ಬೀದಿಗಳಲ್ಲಿ ಕಾಣಿಸಿಕೊಂಡಿದೆ. ಈ ಮೊಸಳೆ ರಸ್ತೆಯಲ್ಲಿ ಸುತ್ತಾಡುತ್ತಿರುವುದನ್ನು ಕಂಡು ಜನರು ಗಾಬರಿಗೊಂಡಿದ್ದಾರೆ.

ಮೊಸಳೆಯನ್ನು ಕಂಡೊಂಡನೆ ಜನರು ಮನೆಗೆ ಬಾಗಿಲು ಹಾಕಿ ಮಹಡಿಯಲ್ಲಿ ನಿಂತು ನೋಡುತ್ತಿರುವ ದೃಶ್ಯ ಕಂಡು ಬಂತು. ಮೊಸಳೆ ಬೀದಿಯಲ್ಲಿ ಮಳೆ ನೀರಲ್ಲಿ  ತೆವಳುತ್ತಿದ್ದುದನ್ನು ಕಂಡು ಜನರು ಯಾರೂ  ಬೀದಿಗೆ ಇಳಿದಿಲ್ಲ ಎಂದು ಟಿವಿ9 ಪಂಜಾಬಿ ವರದಿ ಮಾಡಿದೆ.

ಮೊಸಳೆ ನದಿಗೆ ಮರಳಿದೆ ಎಂದು ಆಡಳಿತವು ಯಾವಾಗ ಘೋಷಿಸುತ್ತದೆ ಎಂದು ಇವರು  ಕಾಯುತ್ತಿದ್ದು, ಮೊಸಳೆ ಇಲ್ಲ ಎಂದು ಖಚಿತ ಮಾಹಿತಿ ಲಭಿಸಿದ ನಂತರವೇ ಇವರು ದೈನಂದಿನ ಕೆಲಸಕ್ಕೆ ಮರಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಹಿಮಾಚಲ ಪ್ರದೇಶದ ಸಿಎಂಗೆ ದೂರವಾಣಿ ಕರೆ ಮಾಡಿ ಪ್ರವಾಹ ಪೀಡಿತ ರಾಜ್ಯದ ಸ್ಥಿತಿಗತಿ ವಿಚಾರಿಸಿದ ಪ್ರಧಾನಿ ಮೋದಿ

ಭಾರೀ ಮಳೆಯಿಂದಾಗಿ ಪ್ರವಾಹದಂಥಾ ಪರಿಸ್ಥಿತಿ

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ನಂತರ, ಪಂಜಾಬ್, ಹರ್ಯಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ಪ್ರವಾಹದಂತಹ ಪರಿಸ್ಥಿತಿ ಇದೆ.ತುರ್ತು ಪರಿಸ್ಥಿತಿಯ ಹೊರತು ಜನರು ಮನೆಯಿಂದ ಹೊರಗೆ ಬರಬಾರದು ಎಂದು ಆಡಳಿತ ಮಂಡಳಿ ಮನವಿ ಮಾಡಿದೆ. ಆಡಳಿತ ಮತ್ತು ಸರ್ಕಾರಗಳು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ನಿರಂತರವಾಗಿ ತೊಡಗಿಸಿಕೊಂಡಿವೆ. ಪ್ರವಾಹ ಪೀಡಿತ ಜನರನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲಾಗುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ