AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu Rain: ತಮಿಳುನಾಡಿನ ಕೆಲವಡೆ ಭಾರಿ ಮಳೆ, ಹಲವು ಪ್ರದೇಶಗಳು ಜಲಾವೃತ

ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ತಮಿಳುನಾಡಿನಲ್ಲಿ ವರುಣನ ಆಗಮನವಾಗಿದೆ. ತೂತುಕುಡಿ ಸೇರಿದಂತೆ ತಮಿಳುನಾಡಿನ ಕೆಲವು ಭಾಗಗಳಲ್ಲಿ ಶುಕ್ರವಾರ ಭಾರೀ ಮಳೆ ಸುರಿದಿದ್ದು, ಹಲವು ಪ್ರದೇಶಗಳಲ್ಲಿ ಜಲಾವೃತಗೊಂಡಿದ್ದು, ಪ್ರಯಾಣಿಕರು ತೊಂದರೆ ಎದುರಿಸುತ್ತಿದ್ದಾರೆ. ಗುರುವಾರವೂ ರಾಜ್ಯದ ಇತರೆ ಭಾಗಗಳಲ್ಲಿ ತುಂತುರು ಮಳೆಯಾಗಿದೆ.

Tamil Nadu Rain: ತಮಿಳುನಾಡಿನ ಕೆಲವಡೆ ಭಾರಿ ಮಳೆ, ಹಲವು ಪ್ರದೇಶಗಳು ಜಲಾವೃತ
ಮಳೆImage Credit source: Hindustan Times
ನಯನಾ ರಾಜೀವ್
|

Updated on: Mar 22, 2024 | 8:46 AM

Share

ತಮಿಳುನಾಡಿನ ಕೆಲವೆಡೆ ಭಾರಿ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ. ತೂತುಕುಡಿ ಸೇರಿದಂತೆ ತಮಿಳುನಾಡಿನ ಕೆಲವು ಭಾಗಗಳಲ್ಲಿ ಶುಕ್ರವಾರ ಬೆಳಗ್ಗೆಯೇ ಭಾರೀ ಮಳೆ ಸುರಿದಿದ್ದು, ಹಲವು ಪ್ರದೇಶಗಳಲ್ಲಿ ಜಲಾವೃತಗೊಂಡಿದ್ದು, ಪ್ರಯಾಣಿಕರು ತೊಂದರೆ ಎದುರಿಸುತ್ತಿದ್ದಾರೆ. ಗುರುವಾರವೂ ರಾಜ್ಯದ ಇತರೆ ಭಾಗಗಳಲ್ಲಿ ತುಂತುರು ಮಳೆಯಾಗಿದೆ.

ಭಾರತೀಯ ಹವಾಮಾನ ಇಲಾಖೆ (IMD) ಶುಕ್ರವಾರ ತಮಿಳುನಾಡು, ಪುದುಚೇರಿ ಮತ್ತು ಕೇರಳದ ಕೆಲವು ಭಾಗಗಳಲ್ಲಿ ಪ್ರತ್ಯೇಕವಾದ ಗುಡುಗಿನಿಂದ ಕೂಡಿದ ಹಗುರದಿಂದ ಸಾಧಾರಣ ಮಳೆಯಾಗುತ್ತದೆ ಎಂದು ಹೇಳಿದೆ. ಹವಾಮಾನ ಇಲಾಖೆಯು ಮುಂದಿನ ಐದು ದಿನಗಳವರೆಗೆ ರಾಯಲಸೀಮಾ ಮತ್ತು ಕೇರಳದಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣವಿರಲಿದೆ ಎನ್ನಲಾಗಿದೆ.

ತಮಿಳುನಾಡು ಮತ್ತು ಪುದುಚೇರಿಯ ಉತ್ತರ ಭಾಗಗಳು ಮುಂದಿನ ಎರಡು ದಿನಗಳವರೆಗೆ ಇದೇ ರೀತಿಯ ಪರಿಸ್ಥಿತಿ ಮುಂದುವರೆಯಲಿದೆ. ಪಶ್ಚಿಮ ಬಂಗಾಳ, ಬಿಹಾರ, ಉತ್ತರ ಪ್ರದೇಶದಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಡಾರ್ಜಿಲಿಂಗ್, ಕಾಲಿಂಪಾಂಗ್, ಜಲ್ಪೈಗುರಿ, ಕೂಚ್ ಬೆಹಾರ್ ಮತ್ತು ಅಲಿಪುರ್ದಾರ್ ಜಿಲ್ಲೆಗಳಲ್ಲಿ ನಾಳೆ ಮಳೆಯಾಗಲಿದೆ. ಡಾರ್ಜಿಲಿಂಗ್‌ನಲ್ಲಿ ಕಳೆದ ಕೆಲವು ದಿನಗಳಿಂದ ಕನಿಷ್ಠ ತಾಪಮಾನವು 9 ಡಿಗ್ರಿ ಸೆಲ್ಸಿಯಸ್‌ನಲ್ಲಿದೆ. ಮಂಗಳವಾರ ಕನಿಷ್ಠ ತಾಪಮಾನ 9.6 ಡಿಗ್ರಿ ಸೆಲ್ಸಿಯಸ್, ಗರಿಷ್ಠ 18.4 ಡಿಗ್ರಿ ಸೆಲ್ಸಿಯಸ್ ಇತ್ತು.

ಮತ್ತಷ್ಟು ಓದಿ: Karnataka Weather: ಇಂದು ಕೊಡಗು, ಮೈಸೂರು ಸೇರಿದಂತೆ ಕರ್ನಾಟಕದ 15ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ ಹವಾಮಾನ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೊಡಗು, ಮೈಸೂರು, ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಕೊಪ್ಪಳದಲ್ಲಿ 38.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಬೀದರ್​ನಲ್ಲಿ 19.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ