AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈನಲ್ಲಿ ಭಾರೀ ಮಳೆ; ನಾಳೆ ಶಾಲಾ-ಕಾಲೇಜುಗಳಿಗೆ ರಜೆ, ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ

ತಮಿಳುನಾಡಿನ ಚೆನ್ನೈನಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಹೀಗಾಗಿ, ತಮಿಳುನಾಡು ಸರ್ಕಾರವು ಅಕ್ಟೋಬರ್ 15ರಿಂದ 18ರವರೆಗೆ ಮಳೆ ಪೀಡಿತ ಪ್ರದೇಶಗಳಲ್ಲಿನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸಲಹೆಯನ್ನು ನೀಡಿದೆ. ಭಾರೀ ಮಳೆ ಮತ್ತು ಭಾರತೀಯ ಹವಾಮಾನ ಇಲಾಖೆ (IMD)ಯ ಎಚ್ಚರಿಕೆಯ ನಡುವೆ ತಮಿಳು ನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನಾಳೆ ನಾಲ್ಕು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಚೆನ್ನೈನಲ್ಲಿ ಭಾರೀ ಮಳೆ; ನಾಳೆ ಶಾಲಾ-ಕಾಲೇಜುಗಳಿಗೆ ರಜೆ, ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ
ಮಳೆ
ಸುಷ್ಮಾ ಚಕ್ರೆ
|

Updated on: Oct 14, 2024 | 7:19 PM

Share

ಚೆನ್ನೈ: ತಮಿಳುನಾಡಿನ ಚೆನ್ನೈನಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗಾಗಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅಕ್ಟೋಬರ್ 15ರ ಮಂಗಳವಾರ 4 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದಲ್ಲಿ ಇನ್ನೂ 2 ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಹಾಗೇ, ಕಂಪನಿಗಳ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡಲಾಗಿದೆ.

ತಮಿಳುನಾಡು ಸರ್ಕಾರವು ಅಕ್ಟೋಬರ್ 15 ರಿಂದ 18 ರವರೆಗೆ ಮಳೆ ಹೆಚ್ಚಾಗಿರುವ ಪ್ರದೇಶಗಳಲ್ಲಿನ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಮಾಡುವ ಸಲಹೆಯನ್ನು ನೀಡಿದೆ. ಎಲ್ಲಾ ಐಟಿ ವೃತ್ತಿಪರರಿಗೆ ಅಕ್ಟೋಬರ್ 15-18 ರವರೆಗೆ ಪೀಡಿತ ಪ್ರದೇಶದಲ್ಲಿ ಮನೆಯಿಂದಲೇ ಕೆಲಸ ಮಾಡಲು ಸಲಹೆಯನ್ನು ನೀಡಲಾಗಿದೆ. ಚೆನ್ನೈನ ಹಲವು ಭಾಗಗಳಲ್ಲಿ ಆರ್‌ಎಂಸಿ ರೆಡ್ ಅಲರ್ಟ್ ಘೋಷಿಸಿದ್ದರಿಂದ ಮತ್ತು ಮಾನ್ಸೂನ್‌ನಲ್ಲಿ ಒಂದೇ ದಿನದಲ್ಲಿ 20 ಸೆಂ.ಮೀ ಮಳೆಯಾಗಲಿದೆ ಎಂದು ಹವಾಮಾನ ಕಚೇರಿ ಮುನ್ಸೂಚನೆ ನೀಡಿದ್ದರಿಂದ ಈ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಸಾಲು ರಜೆ ಮುಕ್ತಾಯ, ಮಳೆ ಪರಿಣಾಮ: ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಟ್ರಾಫಿಕ್ ಜಾಮ್

ಇಂದು ಸಿಎಂ ಸ್ಟಾಲಿನ್ ಅವರು ರಾಜ್ಯ ಸಚಿವಾಲಯದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಆದೇಶ ಹೊರಡಿಸಿದರು. ಅಕ್ಟೋಬರ್ 15 ಮತ್ತು 18ರ ನಡುವೆ ತಮ್ಮ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡಲು (ಡಬ್ಲ್ಯುಎಫ್‌ಹೆಚ್) ಸಲಹೆ ನೀಡುವಂತೆ ಐಟಿ ಸಂಸ್ಥೆಗಳಿಗೆ ಮನವಿ ಮಾಡಿದ್ದಾರೆ.

ಪ್ರವಾಹದ ಸಂದರ್ಭದಲ್ಲಿ ಜನರನ್ನು ರಕ್ಷಿಸಲು ಮುಂಚಿತವಾಗಿ ದುರ್ಬಲ ಪ್ರದೇಶಗಳಲ್ಲಿ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸುವಂತೆ ಸಿಎಂ ಸ್ಟಾಲಿನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹವಾಮಾನ ಇಲಾಖೆಯ ಪ್ರಕಾರ, ಮಾನ್ಸೂನ್‌ನಲ್ಲಿ ಒಂದೇ ದಿನದಲ್ಲಿ 20 ಸೆಂ.ಮೀ.ವರೆಗೆ ಮಳೆಯಾಗುವ ಮುನ್ಸೂಚನೆ ಇದೆ.

ಇದನ್ನೂ ಓದಿ: ಅ. 17ರ ವರೆಗೆ ಕರ್ನಾಟಕದ 18 ಜಿಲ್ಲೆಗಳಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್ ಘೋಷಣೆ

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಹರ್ಮಾಪುರಿ, ಸೇಲಂ, ನೀಲಗಿರಿ, ಈರೋಡ್, ನಾಮಕ್ಕಲ್, ಅರಿಯಲೂರ್, ಪೆರಂಬಲೂರ್, ತಿರುಚಿರಾಪಳ್ಳಿ, ಕರೂರ್, ತಿರುಪ್ಪೂರ್, ಕೊಯಮತ್ತೂರು, ದಿಂಡಿಗಲ್, ಪುದುಕ್ಕೊಟ್ಟೈ, ನಾಗಪಟ್ಟಣಂ, ಶಿವಗಂಗೈ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ
ಗಾಜಿಯಾಬಾದ್‌ನಲ್ಲಿ ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ
ಗಾಜಿಯಾಬಾದ್‌ನಲ್ಲಿ ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್
ಪ್ರಧಾನಿ ಮೋದಿ ಮತ್ತು ನನಗೆ ಇಬ್ರಿಗೂ ‘ಹೆಂಡತಿ’ ಕಾಟ ಇಲ್ಲ : ರಾಹುಲ್ ಗಾಂಧಿ
ಪ್ರಧಾನಿ ಮೋದಿ ಮತ್ತು ನನಗೆ ಇಬ್ರಿಗೂ ‘ಹೆಂಡತಿ’ ಕಾಟ ಇಲ್ಲ : ರಾಹುಲ್ ಗಾಂಧಿ
ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ; ಹೌಹಾರಿದ ಕುಟುಂಬಸ್ಥರು!
ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ; ಹೌಹಾರಿದ ಕುಟುಂಬಸ್ಥರು!
ಒಂದೇ ಕುಟುಂಬ 6 ಜನ ಸಜೀವದಹನ; ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಎಸ್​​ಪಿ
ಒಂದೇ ಕುಟುಂಬ 6 ಜನ ಸಜೀವದಹನ; ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಎಸ್​​ಪಿ