AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡು, ಆಂಧ್ರ ಪ್ರದೇಶ, ಕರ್ನಾಟಕದಲ್ಲಿ ಮುಂದುವರಿಯಲಿದೆ ಮಳೆ

ಆಂಧ್ರಪ್ರದೇಶ ಮತ್ತು ತಮಿಳುನಾಡು ಗಡಿಯಲ್ಲಿರುವ ತಡ ಮತ್ತು ಸುಲ್ಲೂರುಪೆಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆಯಾಗಿರುವುದರಿಂದ ರಸ್ತೆ ಮತ್ತು ರೈಲು ಹಳಿಗಳ ಮೇಲೆ ನೀರು ಜೋರಾಗಿ ಹರಿಯುತ್ತಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡು, ಆಂಧ್ರ ಪ್ರದೇಶ, ಕರ್ನಾಟಕದಲ್ಲಿ ಮುಂದುವರಿಯಲಿದೆ ಮಳೆ
ತಿರುಪತಿಯಲ್ಲಿ ಮಳೆಯಿಂದ ಜಲಾವೃತವಾಗಿರುವ ರಸ್ತೆಗಳು
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Nov 19, 2021 | 4:53 PM

Share

ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತಮಿಳು ಮತ್ತು ಆಂಧ್ರ ಪ್ರದೇಶ ಕರಾವಳಿಯನ್ನು ಶುಕ್ರವಾರ ಮುಂಜಾನೆ ಪ್ರವೇಶಿಸಿದೆ. ಮುಂದಿನ ಕೆಲ ದಿನಗಳಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ. ಆಂಧ್ರಪ್ರದೇಶ ಮತ್ತು ತಮಿಳುನಾಡು ಗಡಿಯಲ್ಲಿರುವ ತಡ ಮತ್ತು ಸುಲ್ಲೂರುಪೆಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆಯಾಗಿರುವುದರಿಂದ ರಸ್ತೆ ಮತ್ತು ರೈಲು ಹಳಿಗಳ ಮೇಲೆ ನೀರು ಜೋರಾಗಿ ಹರಿಯುತ್ತಿದೆ. ದಕ್ಷಿಣ ರೈಲ್ವೆಯು ಹಲವು ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದುಪಡಿಸಿದೆ. ಕೆಲ ರೈಲುಗಳ ಸಂಚಾರವನ್ನು ಭಾಗಶಃ ರದ್ದುಪಡಿಸಿದೆ, ಮಾರ್ಗ ಬದಲಾವಣೆ ಮಾಡಿದೆ.

ಪುದುಚೇರಿ ಮತ್ತು ಚೆನ್ನೈ ನಡುವೆ ಮುಂಜಾನೆ 3ರಿಂದ 4 ಗಂಟೆ ಅವಧಿಯಲ್ಲಿ ಚಂಡಮಾರುತವು ತೀರಪ್ರವೇಶ ಮಾಡಿದೆ. ಬೆಳಿಗ್ಗೆ 5.30ರಿಂದ ಚೆನ್ನೈ ಸುತ್ತಮುತ್ತಲ 60 ಕಿಮೀ ವ್ಯಾಪ್ತಿಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಪಶ್ಚಿಮ ಮತ್ತು ವಾಯವ್ಯ ಪ್ರದೇಶಕ್ಕೆ ಮಳೆಮಾರುತಗಳು ತೇಲಿಹೋಗುವ ಸಾಧ್ಯತೆಯಿದ್ದು, ತಮಿಳುನಾಡು ಮತ್ತು ಪುದುಚೇರಿಯ ಹಲವು ಪ್ರದೇಶದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ವ್ಯಾಪಕ ಮಳೆ ಸುರಿಯಲಿದೆ. ಕೃಷ್ಣಗಿರಿ, ಧರ್ಮಪುರಿ, ವೆಲ್ಲೂರು, ತಿರುಪತ್ತೂರು, ಈರೋಡ್ ಮತ್ತು ಸೇಲಂ ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ ಮಳೆ ವ್ಯಾಪಕವಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆಯ ವಲಯ ಕಚೇರಿ ತಿಳಿಸಿದೆ.

ಮಳೆಯ ಜೊತೆಗೆ ಗಂಟೆಗೆ ಸುಮಾರು 65 ಕಿಮೀ ವೇಗದವರೆಗೂ ಗಾಳಿ ಬೀಸುವ ನಿರೀಕ್ಷೆಯಿದೆ. ಆಂಧ್ರ ಪ್ರದೇಶದ ತೀರದಿಂದ ರಾಯಲಸೀಮೆ ಮತ್ತು ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ, ಉತ್ತರ ಒಳನಾಡು ಮತ್ತು ತೆಲಂಗಾಣ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಗಳಿವೆ. ತಿರುಪತಿ ಸುತ್ತಮುತ್ತ ಗುರುವಾರ ಪ್ರವಾಹ ಪರಿಸ್ಥಿತಿ ತಲೆದೋರಿದ ಹಿನ್ನೆಲೆಯಲ್ಲಿ ತಿರುಪತಿಗೆ ಹೋಗುವ ಮತ್ತು ಬರುವ ಎಲ್ಲ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ತಡ ಮತ್ತು ಸುಳೂರುಪೆಟ್ಟ ಮಧ್ಯದ ಸೇತುವೆಯಲ್ಲಿ ನೀರು ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಹಜರತ್ ನಿಜಾಮುದ್ದೀನ್​ಗೆ ಹೋಗುವ ರಾಜಧಾನಿ ಎಕ್ಸ್​ಪ್ರೆಸ್​ ರೈಲಿನ ಮಾರ್ಗಬದಲಾವಣೆ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ.

ತಮಿಳುನಾಡಿನ ಚೆನ್ನೈ ಮಹಾನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪುದುಚೇರಿ ಮತ್ತು ಕರ್ನಾಟಕ ರಾಜ್ಯಗಳಲ್ಲಿಯೂ ಶಿಕ್ಷಣ ಇಲಾಖೆ ಕೆಲ ಜಿಲ್ಲೆಗಳಲ್ಲಿ ರಜೆ ಘೋಷಿಸಿದೆ.

ಇದನ್ನೂ ಓದಿ: TTD: ತಿರುಪತಿಯಲ್ಲಿ ಭಾರಿ ಮಳೆ, ಪ್ರವಾಹದ ಸ್ಥಿತಿ ನಿರ್ಮಾಣ; ವಿಡಿಯೋ ನೋಡಿ ಇದನ್ನೂ ಓದಿ: ಬೆಂಗಳೂರಿನಲ್ಲಿ ಒಂದೇ ದಿನ 73.4 ಮಿಮೀ ಮಳೆ: ಇನ್ನೂ ಕೆಲ ದಿನ ಮುಂದುವರಿಯಲಿದೆ ಧಾರಾಕಾರ ಮಳೆ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!