AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ವರುಣ ಅಬ್ಬರ; ಚಂಡಮಾರುತ ಸಂಭವ; ಬೆಂಗಳೂರಿಗೂ ರಾಚುತ್ತಾ ಮಳೆ?

Heavy rains hit Chennai and other places of TN: ತಮಿಳುನಾಡಿಗೆ ಈಶಾನ್ಯ ಮುಂಗಾರು ಪ್ರವೇಶ ಮಾಡಿದ್ದು ಭಾರೀ ಮಳೆಯಾಗಲಿದೆ. ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚೆನ್ನೈ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹೊರಡಿಸಲಾಗಿದೆ. ಇಲ್ಲೆಲ್ಲಾ ಭಾರೀ ಮಳೆಯಾಗಬಹುದು. ಚಂಡಮಾರುತ ಕೂಡ ನಿರ್ಮಾಣ ಆಗುವ ಸಾಧ್ಯತೆ ಇದೆ.

ತಮಿಳುನಾಡಿನಲ್ಲಿ ವರುಣ ಅಬ್ಬರ; ಚಂಡಮಾರುತ ಸಂಭವ; ಬೆಂಗಳೂರಿಗೂ ರಾಚುತ್ತಾ ಮಳೆ?
ಮಳೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Oct 21, 2025 | 11:20 PM

Share

ಚೆನ್ನೈ, ಅಕ್ಟೋಬರ್ 21: ತಮಿಳುನಾಡಿಗೆ ಮುಂಗಾರು (North east Monsoon) ಭರ್ಜರಿಯಾಗಿ ಅಡಿ ಇಟ್ಟಿದೆ. ಸತತ ಮಳೆ ಸುರಿಯಲು ಆರಂಭವಾಗಿದೆ. ತಮಿಳುನಾಡಿನ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಬಹುದು (heavy rainfall) ಎಂದು ರೆಡ್ ಅಲರ್ಟ್ ಹೊರಡಿಸಲಾಗಿದೆ. ಸರ್ಕಾರವು ಮುಂಜಾಗ್ರತಾ ಕ್ರಮಗಳನ್ನು ಜಾರಿಗೊಳಿಸಿದೆ. ಪರಿಹಾರ ಕಾರ್ಯಾಚರಣೆಗಳು ಹಾಗೂ ಪ್ರವಾಹ ನಿಯಂತ್ರಣ ವ್ಯವಸ್ಥೆಯನ್ನು ಸಜ್ಜುಗೊಳಿಸಲಾಗಿದೆ.

ಚೆನ್ನೈನಲ್ಲಿ ಆರೆಂಜ್ ಅಲರ್ಟ್ ಹೊರಡಿಸಲಾಗಿದೆ. ಇಲ್ಲಿ 11-20 ಸೆಂ.ಮೀ. ಮಳೆಯಾಗುವ ಸೂಚನೆ ಇದೆ. ಎಂಟು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಇದ್ದು, ಅಲ್ಲಿ 20 ಸೆಂ.ಮೀ.ಗಿಂತ ಹೆಚ್ಚು ತೀವ್ರತರವಾದ ಮಳೆಯಾಗುವ ಸಂಭವ ಇದೆ.

ಇದನ್ನೂ ಓದಿ: ಪಾಕಿಸ್ತಾನಕ್ಕೆ ಭಾರತದ ಖಡಕ್ ಸಂದೇಶವಾ? ಕಾಬೂಲ್​ನಲ್ಲಿ ಭಾರತದ ರಾಯಭಾರ ಕಚೇರಿ ಪುನಾರಂಭ

ರೆಡ್ ಅಲರ್ಟ್ ಇರುವ ಜಿಲ್ಲೆಗಳು

  1. ವಿಲುಪುರಂ
  2. ಕಡಲೂರು
  3. ಮಾಯಿಲಾಡುದುರೈ
  4. ನಾಗಪಟ್ಟಿಣಂ
  5. ತಿರುವಳ್ಳೂರ್
  6. ತಂಜಾವೂರ್
  7. ಪುದುಕ್ಕೋಟ್ಟೈ
  8. ರಾಮನಾಥಪುರಂ

ಆರೆಂಜ್ ಅಲರ್ಟ್ ಹೊರಡಿಸಲಾದ ಜಿಲ್ಲೆಗಳು

  1. ಚೆನ್ನೈ
  2. ಚಂಗಲಪಟ್ಟು
  3. ಕಾಂಚೀಪುರಂ
  4. ಕಲ್ಲಕುರಿಚ್ಚಿ
  5. ಅರಿಯಾಲೂರು
  6. ಪೇರಂಬಲೂರು
  7. ತೂತ್ತುಕುಡಿ
  8. ತಿರುನೆಲ್ವೇಲಿ
  9. ಕನ್ಯಾಕುಮಾರಿ

ಇದನ್ನೂ ಓದಿ: ಕೊಲೆಯಲ್ಲಿ ಅಂತ್ಯವಾಯಿತಾ ಸೊಸೆ-ಮಾವ ಅಕ್ರಮ ಸಂಬಂಧ? ಮಾಜಿ ಸಚಿವೆ ಮತ್ತು ಮಾಜಿ ಡಿಜಿಪಿ ವಿರುದ್ಧ ಪ್ರಕರಣ ದಾಖಲು

ಸೈಕ್ಲೋನ್ ರಚನೆಯಾಗುವ ಸಂಭವ; ಬೆಂಗಳೂರಿಗೂ ಮಳೆ?

ಈಶಾನ್ಯ ಮುಂಗಾರು ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆ ಪ್ರಕಾರ ಚಂಡಮಾರುತ ರಚನೆಯಾಗುವ ಸಂಭವ ಕಾಣುತ್ತಿದೆ. ತಮಿಳುನಾಡಿನ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಬಹುದೆಂದು ರೆಡ್ ಅಲರ್ಟ್ ಇದೆ. ಅದರಲ್ಲೂ ಚಂಗಲಪಟ್ಟು, ವಿಲುಪುರಂ, ಕಡಲೂರು, ಮಾಯಿಲದುರೈ ಜಿಲ್ಲೆಗಳಲ್ಲಿ ತೀವ್ರತರವಾದ ಮಳೆಯಾಗಬಹುದು ಎಂದು ಎಚ್ಚರಿಸಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಒತ್ತಡದಿಂದ ಚಂಡಮಾರುತ ನಿರ್ಮಾಣವಾಗುವ ಸಾಧ್ಯತೆ ಇದೆ. ತಮಿಳುನಾಡು, ಪಾಂಡಿಚೆರಿ ಮತ್ತು ಆಗ್ನೇಯ ಆಂಧ್ರ ಕರಾವಳಿಯಲ್ಲಿ ಚಂಡಮಾರುತ ಅಪ್ಪಳಿಸಬಹುದು. ಬೆಂಗಳೂರಿನವರೆಗೂ ಮಳೆಯಾಗುವ ಸಾಧ್ಯತೆ ಇಲ್ಲದಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:17 pm, Tue, 21 October 25

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್