AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಭಾರತದಲ್ಲಿ ಭಾರೀ ಮಳೆ: 17 ರೈಲುಗಳ ಸಂಚಾರ ರದ್ದು, 12 ಮಾರ್ಗ ಬದಲಾವಣೆ

ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹಲವೆಡೆ ಭಾರೀ ಮಳೆ ಆಗಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಸಂಪೂರ್ಣ ಜನಜೀವನ ಅಸ್ತವ್ಯಸ್ತವಾಗಿದೆ. ಜತೆಗೆ ಉತ್ತರ ರೈಲ್ವೆ ಭಾನುವಾರ ಸುಮಾರು 17 ರೈಲುಗಳ ಸಂಚಾರ ರದ್ದುಗೊಳಿಸಿದ್ದು, ಸುಮಾರು 12 ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದೆ. 

ಉತ್ತರ ಭಾರತದಲ್ಲಿ ಭಾರೀ ಮಳೆ: 17 ರೈಲುಗಳ ಸಂಚಾರ ರದ್ದು, 12 ಮಾರ್ಗ ಬದಲಾವಣೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jul 09, 2023 | 10:35 PM

Share

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹಲವೆಡೆ ಭಾರೀ ಮಳೆ (Heavy rains) ಆಗಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಸಂಪೂರ್ಣ ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ನಗರಗಳು ಜಲಾವೃತಗೊಂಡ ಪರಿಣಾಮ ಟ್ರಾಫಿಕ್ ಜಾಮ್​ ಉಂಟಾಗಿದೆ. ಜೊತೆಗೆ ಮುಂಗಾರು ಮಳೆಯಿಂದಾಗಿ ರೈಲ್ವೆ ಸಂಚಾರಕ್ಕೂ ಹೊಡೆತ ಬಿದ್ದಿದೆ. ಉತ್ತರ ರೈಲ್ವೆ ಭಾನುವಾರ ಸುಮಾರು 17 ರೈಲುಗಳ ಸಂಚಾರ ರದ್ದುಗೊಳಿಸಿದ್ದು, ಸುಮಾರು 12 ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದೆ.

ಭಾರೀ ಮಳೆಯಿಂದಾಗಿ ಎಲ್ಲೆಡೆ ಜಲಾವೃತಗೊಂಡ ಕಾರಣ ನಾಲ್ಕು ಸ್ಥಳಗಳಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಉತ್ತರ ರೈಲ್ವೆ ಅಧಿಕಾರಿಗಳು ತಿಳಿಸಿರುವುದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಇದನ್ನೂ ಓದಿ: ಮುಂದುವರೆದ ಮಳೆ, ನಾಳೆ ದೆಹಲಿಯಲ್ಲಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ ಸಿಎಂ ಅರವಿಂದ್ ಕೇಜ್ರಿವಾಲ್​

ದೆಹಲಿಯಲ್ಲಿ ಕಳೆದ 40 ವರ್ಷಗಳ ಬಳಿಕ ಒಂದೇ ದಿನದಲ್ಲಿ ಅತಿ ಹೆಚ್ಚು ಮಳೆಯಾದ ಪರಿಣಾಮ ರಸ್ತೆಗಳು ಮತ್ತು ಅಂಡರ್‌ಪಾಸ್​ ಮುಳುಗಿ ಹೋಗಿವೆ. ಕೆಲವೆಡೆ ಅಂಗಡಿ, ಮನೆಗಳಿಗೂ ನೀರು ನುಗ್ಗಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ದೆಹಲಿಯಿಂದ ಸಂಚರಿಸುವ ರೈಲುಗಳ ಮೇಲೆ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ.

ದೆಹಲಿ-ಸಬ್ಜಿ ಮಂಡಿ ಪ್ರದೇಶ ಮತ್ತು ನಿಲ್ದಾಣದ ತರಬೇತಿ ಪ್ರದೇಶದಲ್ಲಿ ಎಂಟು ಪಂಪ್​ಗಳ ಮೂಲಕ ಹಳಿಗಳಲ್ಲಿ ತುಂಬಿಕೊಂಡ ನೀರನ್ನು ತೆಗೆಯಲಾಗುತ್ತಿದ್ದು, ರದ್ದುಗೊಳಿಸಿದ ರೈಲುಗಳನ್ನು ಬಿಟ್ಟು ಇತರೆ ರೈಲುಗಳ ಸಂಚಾರಕ್ಕೆ ಅಗತ್ಯ ಕ್ರಮಕೈಗೊಳ್ಳಲಾಗಿದೆ.

ರದ್ದುಗೊಂಡ ರೈಲುಗಳು

ಫಿರೋಜ್‌ಪುರ ಕ್ಯಾಂಟ್ ಎಕ್ಸ್‌ಪ್ರೆಸ್, ಅಮೃತಸರ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್, ಚಂಡೀಗಢ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ಮತ್ತು ಚಂಡೀಗಢದಿಂದ ಅಮೃತಸರ ಜಂಕ್ಷನ್ ಎಕ್ಸ್‌ಪ್ರೆಸ್​ ರೈಲುಗಳನ್ನು ರದ್ದು ಮಾಡಿದರೆ, ಮುಂಬೈ ಸೆಂಟ್ರಲ್‌ಗೆ ಅಮೃತಸರ ಎಕ್ಸ್‌ಪ್ರೆಸ್, ಅಮೃತಸರ ಎಕ್ಸ್‌ಪ್ರೆಸ್, ದೌಲತ್‌ಪುರ್ ಚೌಕ್ ಎಕ್ಸ್‌ಪ್ರೆಸ್​ ರೈಲುಗಳು ಮಾರ್ಗ ಬದಲಾವಣೆ ಮಾಡಲಾಗಿದೆ. ಮಳೆಯಿಂದಾಗಿ ಹವಾಮಾನ ಹದಗೆಟ್ಟ ಹಿನ್ನೆಲೆ ಶಿಮ್ಲಾ-ಕಲ್ಕಾ ಮಾರ್ಗದ ರೈಲು ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ: West Bengal: ಹಿಂಸಾಚಾರ ಹಿನ್ನೆಲೆ ಪಶ್ಚಿಮ ಬಂಗಾಳದ 604 ಪಂಚಾಯತ್ ಬೂತ್‌ಗಳಲ್ಲಿ ಮರು ಮತದಾನ

ದೆಹಲಿ, ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 153 ಮಿಮೀ ದಾಖಲೆಯ ಮಳೆಯಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ