AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಭಾರತದಲ್ಲಿ ಭಾರೀ ಮಳೆ: 17 ರೈಲುಗಳ ಸಂಚಾರ ರದ್ದು, 12 ಮಾರ್ಗ ಬದಲಾವಣೆ

ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹಲವೆಡೆ ಭಾರೀ ಮಳೆ ಆಗಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಸಂಪೂರ್ಣ ಜನಜೀವನ ಅಸ್ತವ್ಯಸ್ತವಾಗಿದೆ. ಜತೆಗೆ ಉತ್ತರ ರೈಲ್ವೆ ಭಾನುವಾರ ಸುಮಾರು 17 ರೈಲುಗಳ ಸಂಚಾರ ರದ್ದುಗೊಳಿಸಿದ್ದು, ಸುಮಾರು 12 ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದೆ. 

ಉತ್ತರ ಭಾರತದಲ್ಲಿ ಭಾರೀ ಮಳೆ: 17 ರೈಲುಗಳ ಸಂಚಾರ ರದ್ದು, 12 ಮಾರ್ಗ ಬದಲಾವಣೆ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Jul 09, 2023 | 10:35 PM

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹಲವೆಡೆ ಭಾರೀ ಮಳೆ (Heavy rains) ಆಗಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಸಂಪೂರ್ಣ ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ನಗರಗಳು ಜಲಾವೃತಗೊಂಡ ಪರಿಣಾಮ ಟ್ರಾಫಿಕ್ ಜಾಮ್​ ಉಂಟಾಗಿದೆ. ಜೊತೆಗೆ ಮುಂಗಾರು ಮಳೆಯಿಂದಾಗಿ ರೈಲ್ವೆ ಸಂಚಾರಕ್ಕೂ ಹೊಡೆತ ಬಿದ್ದಿದೆ. ಉತ್ತರ ರೈಲ್ವೆ ಭಾನುವಾರ ಸುಮಾರು 17 ರೈಲುಗಳ ಸಂಚಾರ ರದ್ದುಗೊಳಿಸಿದ್ದು, ಸುಮಾರು 12 ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದೆ.

ಭಾರೀ ಮಳೆಯಿಂದಾಗಿ ಎಲ್ಲೆಡೆ ಜಲಾವೃತಗೊಂಡ ಕಾರಣ ನಾಲ್ಕು ಸ್ಥಳಗಳಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಉತ್ತರ ರೈಲ್ವೆ ಅಧಿಕಾರಿಗಳು ತಿಳಿಸಿರುವುದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಇದನ್ನೂ ಓದಿ: ಮುಂದುವರೆದ ಮಳೆ, ನಾಳೆ ದೆಹಲಿಯಲ್ಲಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ ಸಿಎಂ ಅರವಿಂದ್ ಕೇಜ್ರಿವಾಲ್​

ದೆಹಲಿಯಲ್ಲಿ ಕಳೆದ 40 ವರ್ಷಗಳ ಬಳಿಕ ಒಂದೇ ದಿನದಲ್ಲಿ ಅತಿ ಹೆಚ್ಚು ಮಳೆಯಾದ ಪರಿಣಾಮ ರಸ್ತೆಗಳು ಮತ್ತು ಅಂಡರ್‌ಪಾಸ್​ ಮುಳುಗಿ ಹೋಗಿವೆ. ಕೆಲವೆಡೆ ಅಂಗಡಿ, ಮನೆಗಳಿಗೂ ನೀರು ನುಗ್ಗಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ದೆಹಲಿಯಿಂದ ಸಂಚರಿಸುವ ರೈಲುಗಳ ಮೇಲೆ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ.

ದೆಹಲಿ-ಸಬ್ಜಿ ಮಂಡಿ ಪ್ರದೇಶ ಮತ್ತು ನಿಲ್ದಾಣದ ತರಬೇತಿ ಪ್ರದೇಶದಲ್ಲಿ ಎಂಟು ಪಂಪ್​ಗಳ ಮೂಲಕ ಹಳಿಗಳಲ್ಲಿ ತುಂಬಿಕೊಂಡ ನೀರನ್ನು ತೆಗೆಯಲಾಗುತ್ತಿದ್ದು, ರದ್ದುಗೊಳಿಸಿದ ರೈಲುಗಳನ್ನು ಬಿಟ್ಟು ಇತರೆ ರೈಲುಗಳ ಸಂಚಾರಕ್ಕೆ ಅಗತ್ಯ ಕ್ರಮಕೈಗೊಳ್ಳಲಾಗಿದೆ.

ರದ್ದುಗೊಂಡ ರೈಲುಗಳು

ಫಿರೋಜ್‌ಪುರ ಕ್ಯಾಂಟ್ ಎಕ್ಸ್‌ಪ್ರೆಸ್, ಅಮೃತಸರ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್, ಚಂಡೀಗಢ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ಮತ್ತು ಚಂಡೀಗಢದಿಂದ ಅಮೃತಸರ ಜಂಕ್ಷನ್ ಎಕ್ಸ್‌ಪ್ರೆಸ್​ ರೈಲುಗಳನ್ನು ರದ್ದು ಮಾಡಿದರೆ, ಮುಂಬೈ ಸೆಂಟ್ರಲ್‌ಗೆ ಅಮೃತಸರ ಎಕ್ಸ್‌ಪ್ರೆಸ್, ಅಮೃತಸರ ಎಕ್ಸ್‌ಪ್ರೆಸ್, ದೌಲತ್‌ಪುರ್ ಚೌಕ್ ಎಕ್ಸ್‌ಪ್ರೆಸ್​ ರೈಲುಗಳು ಮಾರ್ಗ ಬದಲಾವಣೆ ಮಾಡಲಾಗಿದೆ. ಮಳೆಯಿಂದಾಗಿ ಹವಾಮಾನ ಹದಗೆಟ್ಟ ಹಿನ್ನೆಲೆ ಶಿಮ್ಲಾ-ಕಲ್ಕಾ ಮಾರ್ಗದ ರೈಲು ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ: West Bengal: ಹಿಂಸಾಚಾರ ಹಿನ್ನೆಲೆ ಪಶ್ಚಿಮ ಬಂಗಾಳದ 604 ಪಂಚಾಯತ್ ಬೂತ್‌ಗಳಲ್ಲಿ ಮರು ಮತದಾನ

ದೆಹಲಿ, ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 153 ಮಿಮೀ ದಾಖಲೆಯ ಮಳೆಯಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್