AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಭಾರತದಲ್ಲಿ ಭಾರೀ ಮಳೆ: 17 ರೈಲುಗಳ ಸಂಚಾರ ರದ್ದು, 12 ಮಾರ್ಗ ಬದಲಾವಣೆ

ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹಲವೆಡೆ ಭಾರೀ ಮಳೆ ಆಗಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಸಂಪೂರ್ಣ ಜನಜೀವನ ಅಸ್ತವ್ಯಸ್ತವಾಗಿದೆ. ಜತೆಗೆ ಉತ್ತರ ರೈಲ್ವೆ ಭಾನುವಾರ ಸುಮಾರು 17 ರೈಲುಗಳ ಸಂಚಾರ ರದ್ದುಗೊಳಿಸಿದ್ದು, ಸುಮಾರು 12 ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದೆ. 

ಉತ್ತರ ಭಾರತದಲ್ಲಿ ಭಾರೀ ಮಳೆ: 17 ರೈಲುಗಳ ಸಂಚಾರ ರದ್ದು, 12 ಮಾರ್ಗ ಬದಲಾವಣೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jul 09, 2023 | 10:35 PM

Share

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹಲವೆಡೆ ಭಾರೀ ಮಳೆ (Heavy rains) ಆಗಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಸಂಪೂರ್ಣ ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ನಗರಗಳು ಜಲಾವೃತಗೊಂಡ ಪರಿಣಾಮ ಟ್ರಾಫಿಕ್ ಜಾಮ್​ ಉಂಟಾಗಿದೆ. ಜೊತೆಗೆ ಮುಂಗಾರು ಮಳೆಯಿಂದಾಗಿ ರೈಲ್ವೆ ಸಂಚಾರಕ್ಕೂ ಹೊಡೆತ ಬಿದ್ದಿದೆ. ಉತ್ತರ ರೈಲ್ವೆ ಭಾನುವಾರ ಸುಮಾರು 17 ರೈಲುಗಳ ಸಂಚಾರ ರದ್ದುಗೊಳಿಸಿದ್ದು, ಸುಮಾರು 12 ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದೆ.

ಭಾರೀ ಮಳೆಯಿಂದಾಗಿ ಎಲ್ಲೆಡೆ ಜಲಾವೃತಗೊಂಡ ಕಾರಣ ನಾಲ್ಕು ಸ್ಥಳಗಳಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಉತ್ತರ ರೈಲ್ವೆ ಅಧಿಕಾರಿಗಳು ತಿಳಿಸಿರುವುದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಇದನ್ನೂ ಓದಿ: ಮುಂದುವರೆದ ಮಳೆ, ನಾಳೆ ದೆಹಲಿಯಲ್ಲಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ ಸಿಎಂ ಅರವಿಂದ್ ಕೇಜ್ರಿವಾಲ್​

ದೆಹಲಿಯಲ್ಲಿ ಕಳೆದ 40 ವರ್ಷಗಳ ಬಳಿಕ ಒಂದೇ ದಿನದಲ್ಲಿ ಅತಿ ಹೆಚ್ಚು ಮಳೆಯಾದ ಪರಿಣಾಮ ರಸ್ತೆಗಳು ಮತ್ತು ಅಂಡರ್‌ಪಾಸ್​ ಮುಳುಗಿ ಹೋಗಿವೆ. ಕೆಲವೆಡೆ ಅಂಗಡಿ, ಮನೆಗಳಿಗೂ ನೀರು ನುಗ್ಗಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ದೆಹಲಿಯಿಂದ ಸಂಚರಿಸುವ ರೈಲುಗಳ ಮೇಲೆ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ.

ದೆಹಲಿ-ಸಬ್ಜಿ ಮಂಡಿ ಪ್ರದೇಶ ಮತ್ತು ನಿಲ್ದಾಣದ ತರಬೇತಿ ಪ್ರದೇಶದಲ್ಲಿ ಎಂಟು ಪಂಪ್​ಗಳ ಮೂಲಕ ಹಳಿಗಳಲ್ಲಿ ತುಂಬಿಕೊಂಡ ನೀರನ್ನು ತೆಗೆಯಲಾಗುತ್ತಿದ್ದು, ರದ್ದುಗೊಳಿಸಿದ ರೈಲುಗಳನ್ನು ಬಿಟ್ಟು ಇತರೆ ರೈಲುಗಳ ಸಂಚಾರಕ್ಕೆ ಅಗತ್ಯ ಕ್ರಮಕೈಗೊಳ್ಳಲಾಗಿದೆ.

ರದ್ದುಗೊಂಡ ರೈಲುಗಳು

ಫಿರೋಜ್‌ಪುರ ಕ್ಯಾಂಟ್ ಎಕ್ಸ್‌ಪ್ರೆಸ್, ಅಮೃತಸರ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್, ಚಂಡೀಗಢ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ಮತ್ತು ಚಂಡೀಗಢದಿಂದ ಅಮೃತಸರ ಜಂಕ್ಷನ್ ಎಕ್ಸ್‌ಪ್ರೆಸ್​ ರೈಲುಗಳನ್ನು ರದ್ದು ಮಾಡಿದರೆ, ಮುಂಬೈ ಸೆಂಟ್ರಲ್‌ಗೆ ಅಮೃತಸರ ಎಕ್ಸ್‌ಪ್ರೆಸ್, ಅಮೃತಸರ ಎಕ್ಸ್‌ಪ್ರೆಸ್, ದೌಲತ್‌ಪುರ್ ಚೌಕ್ ಎಕ್ಸ್‌ಪ್ರೆಸ್​ ರೈಲುಗಳು ಮಾರ್ಗ ಬದಲಾವಣೆ ಮಾಡಲಾಗಿದೆ. ಮಳೆಯಿಂದಾಗಿ ಹವಾಮಾನ ಹದಗೆಟ್ಟ ಹಿನ್ನೆಲೆ ಶಿಮ್ಲಾ-ಕಲ್ಕಾ ಮಾರ್ಗದ ರೈಲು ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ: West Bengal: ಹಿಂಸಾಚಾರ ಹಿನ್ನೆಲೆ ಪಶ್ಚಿಮ ಬಂಗಾಳದ 604 ಪಂಚಾಯತ್ ಬೂತ್‌ಗಳಲ್ಲಿ ಮರು ಮತದಾನ

ದೆಹಲಿ, ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 153 ಮಿಮೀ ದಾಖಲೆಯ ಮಳೆಯಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!