AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹೈದರಾಬಾದ್​​ನಲ್ಲಿ ಧಾರಾಕಾರ ಮಳೆ; ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಇಬ್ಬರು

ವಿಪರೀತ ಮಳೆಯಿಂದಾಗಿ ಹೈದರಾಬಾದ್​​ನಲ್ಲಿ ವಾಹನ ಮತ್ತು ಜನಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಜನರು ಸಾಧ್ಯವಾದಷ್ಟು ಮನೆಯಲ್ಲೇ ಇರಬೇಕು ಎಂದು ಗ್ರೇಟರ್​ ಹೈದರಾಬಾದ್​ ಮುನ್ಸಿಪಲ್​ ಕಾರ್ಪೋರೇಶನ್​ ಎಚ್ಚರಿಕೆ ನೀಡಿದೆ.

Video: ಹೈದರಾಬಾದ್​​ನಲ್ಲಿ ಧಾರಾಕಾರ ಮಳೆ; ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಇಬ್ಬರು
ಮಳೆಯಿಂದ ರಸ್ತೆಗಳು ಜಲಾವೃತಗೊಂಡಿರುವ ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 09, 2021 | 10:47 AM

Share

ಹೈದರಾಬಾದ್​​ ಮತ್ತು ತೆಲಂಗಾಣದ ಮೇಡ್ಚಲ್-ಮಲ್ಕಾಜಗಿರಿ ಮತ್ತು ರಂಗಾರೆಡ್ಡಿ ಜಿಲ್ಲೆಗಳಲ್ಲಿ ನಿನ್ನೆಯಿಂದ ವಿಪರೀತ ಮಳೆ (Heavy Rainfall)ಯಾಗುತ್ತಿದೆ. ನಿನ್ನೆ ಸಂಜೆ ಸುರಿದ ಭರ್ಜರಿ ಮಳೆಗೆ ರಸ್ತೆಗಳಲ್ಲೆಲ್ಲ ನೀರು ತುಂಬಿದೆ. ಮನೆಗಳು, ವಿವಿಧ ಕಚೇರಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.  ಧಾರಾಕಾರವಾಗಿ ಸುರಿದ ಮಳೆಯಿಂದ ಚರಂಡಿಗಳೆಲ್ಲ ತುಂಬಿ ಹರಿದಿದೆ. ಇದರಿಂದಾಗಿ ಇಬ್ಬರು ಚರಂಡಿಯ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಅವರನ್ನು ಹುಡುಕುವ ಕಾರ್ಯ ನಡೆಯುತ್ತಿದೆ ಎಂದು ಎಸಿಪಿ ಕೆ.ಪುರುಶೋತ್ತಮ್ ತಿಳಿಸಿದ್ದಾರೆ.  ಹಾಗೇ, ಓಲ್ಡ್​ ಸಿಟಿ ಏರಿಯಾದಲ್ಲಿ ನಿಲ್ಲಿಸಿದ್ದ ಟೆಂಪೋ ಟ್ರಕ್​ವೊಂದು ಕೊಚ್ಚಿಕೊಂಡು ಹೋಗಿದೆ. ಇಲ್ಲಿನ ರೆಸ್ಟೋರೆಂಟ್​ವೊಂದರಲ್ಲಿ ಕೂಡ ನೀರು ತುಂಬಿದೆ.

ವಿಪರೀತ ಮಳೆಯಿಂದಾಗಿ ಹೈದರಾಬಾದ್​​ನಲ್ಲಿ ವಾಹನ ಮತ್ತು ಜನಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಜನರು ಸಾಧ್ಯವಾದಷ್ಟು ಮನೆಯಲ್ಲೇ ಇರಬೇಕು. ಮಳೆ ಅಧಿಕವಾಗಿ, ಹೊರಗೆಲ್ಲ ಅಸ್ತವ್ಯಸ್ತವಾಗಿದ್ದು, ಮನೆಯಿಂದ ಹೊರಬರಬೇಡಿ ಎಂದು ಗ್ರೇಟರ್​ ಹೈದರಾಬಾದ್​​ನ ಮುನ್ಸಿಪಲ್​ ಕಾರ್ಪೋರೇಶನ್​​ನ ಜಾರಿ, ಜಾಗರೂಕತೆ ಮತ್ತು ವಿಪತ್ತು (EVDM)ವಿಭಾಗ ಎಚ್ಚರಿಕೆ ನೀಡಿದೆ.  ಸದ್ಯ ರಂಗಾರೆಡ್ಡಿ, ಮೇಡ್ಚಲ್-ಮಲ್ಕಾಜಗಿರಿ,​ ಜುಬಿಲಿ ಹಿಲ್ಸ್​, ಅಂಬರ್‌ಪೇಟೆ, ನಾಂಪಲ್ಲಿ, ಹಳೆಯ ಮಲಕಪೇಟೆ, ಯಾಕುತ್ಪೂರ, ಎಲ್‌ಬಿ ನಗರ ಮತ್ತು ವನಸ್ಥಾಲಿಪುರಗಳಲ್ಲಿ ಭಾರೀ ಮಳೆಯಾಗಿದೆ.  ಹೈದರಾಬಾದ್​​ನಲ್ಲಿ ಇಂದು ಕೂಡ ಅತ್ಯಧಿಕ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಇದನ್ನೂ ಓದಿ: ನಿರ್ಮಾಪಕ ಇಮ್ತಿಯಾಜ್​ ಖತ್ರಿ ಮನೆ ಮೇಲೆ ಎನ್​ಸಿಬಿ ದಾಳಿ; ಬಾಲಿವುಡ್​ ಸೆಲೆಬ್ರಿಟಿಗಳಿಗೆ ನಡುಕ ಶುರು

ಸಿಎಂ ಬೊಮ್ಮಾಯಿ ಅ.11ರಂದು ತಿರುಪತಿಯಲ್ಲಿ ವಾಸ್ತವ್ಯ, ತಿಮ್ಮಪ್ಪನ ದರ್ಶನ; ವೇಂಕಟೇಶ್ವರ ಭಕ್ತಿ ಚಾನೆಲ್ ಇನ್ನು ಕನ್ನಡದಲ್ಲೂ ಪ್ರಸಾರ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ