AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹೈದರಾಬಾದ್​​ನಲ್ಲಿ ಧಾರಾಕಾರ ಮಳೆ; ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಇಬ್ಬರು

ವಿಪರೀತ ಮಳೆಯಿಂದಾಗಿ ಹೈದರಾಬಾದ್​​ನಲ್ಲಿ ವಾಹನ ಮತ್ತು ಜನಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಜನರು ಸಾಧ್ಯವಾದಷ್ಟು ಮನೆಯಲ್ಲೇ ಇರಬೇಕು ಎಂದು ಗ್ರೇಟರ್​ ಹೈದರಾಬಾದ್​ ಮುನ್ಸಿಪಲ್​ ಕಾರ್ಪೋರೇಶನ್​ ಎಚ್ಚರಿಕೆ ನೀಡಿದೆ.

Video: ಹೈದರಾಬಾದ್​​ನಲ್ಲಿ ಧಾರಾಕಾರ ಮಳೆ; ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಇಬ್ಬರು
ಮಳೆಯಿಂದ ರಸ್ತೆಗಳು ಜಲಾವೃತಗೊಂಡಿರುವ ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 09, 2021 | 10:47 AM

Share

ಹೈದರಾಬಾದ್​​ ಮತ್ತು ತೆಲಂಗಾಣದ ಮೇಡ್ಚಲ್-ಮಲ್ಕಾಜಗಿರಿ ಮತ್ತು ರಂಗಾರೆಡ್ಡಿ ಜಿಲ್ಲೆಗಳಲ್ಲಿ ನಿನ್ನೆಯಿಂದ ವಿಪರೀತ ಮಳೆ (Heavy Rainfall)ಯಾಗುತ್ತಿದೆ. ನಿನ್ನೆ ಸಂಜೆ ಸುರಿದ ಭರ್ಜರಿ ಮಳೆಗೆ ರಸ್ತೆಗಳಲ್ಲೆಲ್ಲ ನೀರು ತುಂಬಿದೆ. ಮನೆಗಳು, ವಿವಿಧ ಕಚೇರಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.  ಧಾರಾಕಾರವಾಗಿ ಸುರಿದ ಮಳೆಯಿಂದ ಚರಂಡಿಗಳೆಲ್ಲ ತುಂಬಿ ಹರಿದಿದೆ. ಇದರಿಂದಾಗಿ ಇಬ್ಬರು ಚರಂಡಿಯ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಅವರನ್ನು ಹುಡುಕುವ ಕಾರ್ಯ ನಡೆಯುತ್ತಿದೆ ಎಂದು ಎಸಿಪಿ ಕೆ.ಪುರುಶೋತ್ತಮ್ ತಿಳಿಸಿದ್ದಾರೆ.  ಹಾಗೇ, ಓಲ್ಡ್​ ಸಿಟಿ ಏರಿಯಾದಲ್ಲಿ ನಿಲ್ಲಿಸಿದ್ದ ಟೆಂಪೋ ಟ್ರಕ್​ವೊಂದು ಕೊಚ್ಚಿಕೊಂಡು ಹೋಗಿದೆ. ಇಲ್ಲಿನ ರೆಸ್ಟೋರೆಂಟ್​ವೊಂದರಲ್ಲಿ ಕೂಡ ನೀರು ತುಂಬಿದೆ.

ವಿಪರೀತ ಮಳೆಯಿಂದಾಗಿ ಹೈದರಾಬಾದ್​​ನಲ್ಲಿ ವಾಹನ ಮತ್ತು ಜನಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಜನರು ಸಾಧ್ಯವಾದಷ್ಟು ಮನೆಯಲ್ಲೇ ಇರಬೇಕು. ಮಳೆ ಅಧಿಕವಾಗಿ, ಹೊರಗೆಲ್ಲ ಅಸ್ತವ್ಯಸ್ತವಾಗಿದ್ದು, ಮನೆಯಿಂದ ಹೊರಬರಬೇಡಿ ಎಂದು ಗ್ರೇಟರ್​ ಹೈದರಾಬಾದ್​​ನ ಮುನ್ಸಿಪಲ್​ ಕಾರ್ಪೋರೇಶನ್​​ನ ಜಾರಿ, ಜಾಗರೂಕತೆ ಮತ್ತು ವಿಪತ್ತು (EVDM)ವಿಭಾಗ ಎಚ್ಚರಿಕೆ ನೀಡಿದೆ.  ಸದ್ಯ ರಂಗಾರೆಡ್ಡಿ, ಮೇಡ್ಚಲ್-ಮಲ್ಕಾಜಗಿರಿ,​ ಜುಬಿಲಿ ಹಿಲ್ಸ್​, ಅಂಬರ್‌ಪೇಟೆ, ನಾಂಪಲ್ಲಿ, ಹಳೆಯ ಮಲಕಪೇಟೆ, ಯಾಕುತ್ಪೂರ, ಎಲ್‌ಬಿ ನಗರ ಮತ್ತು ವನಸ್ಥಾಲಿಪುರಗಳಲ್ಲಿ ಭಾರೀ ಮಳೆಯಾಗಿದೆ.  ಹೈದರಾಬಾದ್​​ನಲ್ಲಿ ಇಂದು ಕೂಡ ಅತ್ಯಧಿಕ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಇದನ್ನೂ ಓದಿ: ನಿರ್ಮಾಪಕ ಇಮ್ತಿಯಾಜ್​ ಖತ್ರಿ ಮನೆ ಮೇಲೆ ಎನ್​ಸಿಬಿ ದಾಳಿ; ಬಾಲಿವುಡ್​ ಸೆಲೆಬ್ರಿಟಿಗಳಿಗೆ ನಡುಕ ಶುರು

ಸಿಎಂ ಬೊಮ್ಮಾಯಿ ಅ.11ರಂದು ತಿರುಪತಿಯಲ್ಲಿ ವಾಸ್ತವ್ಯ, ತಿಮ್ಮಪ್ಪನ ದರ್ಶನ; ವೇಂಕಟೇಶ್ವರ ಭಕ್ತಿ ಚಾನೆಲ್ ಇನ್ನು ಕನ್ನಡದಲ್ಲೂ ಪ್ರಸಾರ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!