AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹೈದರಾಬಾದ್​​ನಲ್ಲಿ ಧಾರಾಕಾರ ಮಳೆ; ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಇಬ್ಬರು

ವಿಪರೀತ ಮಳೆಯಿಂದಾಗಿ ಹೈದರಾಬಾದ್​​ನಲ್ಲಿ ವಾಹನ ಮತ್ತು ಜನಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಜನರು ಸಾಧ್ಯವಾದಷ್ಟು ಮನೆಯಲ್ಲೇ ಇರಬೇಕು ಎಂದು ಗ್ರೇಟರ್​ ಹೈದರಾಬಾದ್​ ಮುನ್ಸಿಪಲ್​ ಕಾರ್ಪೋರೇಶನ್​ ಎಚ್ಚರಿಕೆ ನೀಡಿದೆ.

Video: ಹೈದರಾಬಾದ್​​ನಲ್ಲಿ ಧಾರಾಕಾರ ಮಳೆ; ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಇಬ್ಬರು
ಮಳೆಯಿಂದ ರಸ್ತೆಗಳು ಜಲಾವೃತಗೊಂಡಿರುವ ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 09, 2021 | 10:47 AM

Share

ಹೈದರಾಬಾದ್​​ ಮತ್ತು ತೆಲಂಗಾಣದ ಮೇಡ್ಚಲ್-ಮಲ್ಕಾಜಗಿರಿ ಮತ್ತು ರಂಗಾರೆಡ್ಡಿ ಜಿಲ್ಲೆಗಳಲ್ಲಿ ನಿನ್ನೆಯಿಂದ ವಿಪರೀತ ಮಳೆ (Heavy Rainfall)ಯಾಗುತ್ತಿದೆ. ನಿನ್ನೆ ಸಂಜೆ ಸುರಿದ ಭರ್ಜರಿ ಮಳೆಗೆ ರಸ್ತೆಗಳಲ್ಲೆಲ್ಲ ನೀರು ತುಂಬಿದೆ. ಮನೆಗಳು, ವಿವಿಧ ಕಚೇರಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.  ಧಾರಾಕಾರವಾಗಿ ಸುರಿದ ಮಳೆಯಿಂದ ಚರಂಡಿಗಳೆಲ್ಲ ತುಂಬಿ ಹರಿದಿದೆ. ಇದರಿಂದಾಗಿ ಇಬ್ಬರು ಚರಂಡಿಯ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಅವರನ್ನು ಹುಡುಕುವ ಕಾರ್ಯ ನಡೆಯುತ್ತಿದೆ ಎಂದು ಎಸಿಪಿ ಕೆ.ಪುರುಶೋತ್ತಮ್ ತಿಳಿಸಿದ್ದಾರೆ.  ಹಾಗೇ, ಓಲ್ಡ್​ ಸಿಟಿ ಏರಿಯಾದಲ್ಲಿ ನಿಲ್ಲಿಸಿದ್ದ ಟೆಂಪೋ ಟ್ರಕ್​ವೊಂದು ಕೊಚ್ಚಿಕೊಂಡು ಹೋಗಿದೆ. ಇಲ್ಲಿನ ರೆಸ್ಟೋರೆಂಟ್​ವೊಂದರಲ್ಲಿ ಕೂಡ ನೀರು ತುಂಬಿದೆ.

ವಿಪರೀತ ಮಳೆಯಿಂದಾಗಿ ಹೈದರಾಬಾದ್​​ನಲ್ಲಿ ವಾಹನ ಮತ್ತು ಜನಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಜನರು ಸಾಧ್ಯವಾದಷ್ಟು ಮನೆಯಲ್ಲೇ ಇರಬೇಕು. ಮಳೆ ಅಧಿಕವಾಗಿ, ಹೊರಗೆಲ್ಲ ಅಸ್ತವ್ಯಸ್ತವಾಗಿದ್ದು, ಮನೆಯಿಂದ ಹೊರಬರಬೇಡಿ ಎಂದು ಗ್ರೇಟರ್​ ಹೈದರಾಬಾದ್​​ನ ಮುನ್ಸಿಪಲ್​ ಕಾರ್ಪೋರೇಶನ್​​ನ ಜಾರಿ, ಜಾಗರೂಕತೆ ಮತ್ತು ವಿಪತ್ತು (EVDM)ವಿಭಾಗ ಎಚ್ಚರಿಕೆ ನೀಡಿದೆ.  ಸದ್ಯ ರಂಗಾರೆಡ್ಡಿ, ಮೇಡ್ಚಲ್-ಮಲ್ಕಾಜಗಿರಿ,​ ಜುಬಿಲಿ ಹಿಲ್ಸ್​, ಅಂಬರ್‌ಪೇಟೆ, ನಾಂಪಲ್ಲಿ, ಹಳೆಯ ಮಲಕಪೇಟೆ, ಯಾಕುತ್ಪೂರ, ಎಲ್‌ಬಿ ನಗರ ಮತ್ತು ವನಸ್ಥಾಲಿಪುರಗಳಲ್ಲಿ ಭಾರೀ ಮಳೆಯಾಗಿದೆ.  ಹೈದರಾಬಾದ್​​ನಲ್ಲಿ ಇಂದು ಕೂಡ ಅತ್ಯಧಿಕ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಇದನ್ನೂ ಓದಿ: ನಿರ್ಮಾಪಕ ಇಮ್ತಿಯಾಜ್​ ಖತ್ರಿ ಮನೆ ಮೇಲೆ ಎನ್​ಸಿಬಿ ದಾಳಿ; ಬಾಲಿವುಡ್​ ಸೆಲೆಬ್ರಿಟಿಗಳಿಗೆ ನಡುಕ ಶುರು

ಸಿಎಂ ಬೊಮ್ಮಾಯಿ ಅ.11ರಂದು ತಿರುಪತಿಯಲ್ಲಿ ವಾಸ್ತವ್ಯ, ತಿಮ್ಮಪ್ಪನ ದರ್ಶನ; ವೇಂಕಟೇಶ್ವರ ಭಕ್ತಿ ಚಾನೆಲ್ ಇನ್ನು ಕನ್ನಡದಲ್ಲೂ ಪ್ರಸಾರ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?