AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹೈದರಾಬಾದ್​​ನಲ್ಲಿ ಧಾರಾಕಾರ ಮಳೆ; ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಇಬ್ಬರು

ವಿಪರೀತ ಮಳೆಯಿಂದಾಗಿ ಹೈದರಾಬಾದ್​​ನಲ್ಲಿ ವಾಹನ ಮತ್ತು ಜನಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಜನರು ಸಾಧ್ಯವಾದಷ್ಟು ಮನೆಯಲ್ಲೇ ಇರಬೇಕು ಎಂದು ಗ್ರೇಟರ್​ ಹೈದರಾಬಾದ್​ ಮುನ್ಸಿಪಲ್​ ಕಾರ್ಪೋರೇಶನ್​ ಎಚ್ಚರಿಕೆ ನೀಡಿದೆ.

Video: ಹೈದರಾಬಾದ್​​ನಲ್ಲಿ ಧಾರಾಕಾರ ಮಳೆ; ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಇಬ್ಬರು
ಮಳೆಯಿಂದ ರಸ್ತೆಗಳು ಜಲಾವೃತಗೊಂಡಿರುವ ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 09, 2021 | 10:47 AM

Share

ಹೈದರಾಬಾದ್​​ ಮತ್ತು ತೆಲಂಗಾಣದ ಮೇಡ್ಚಲ್-ಮಲ್ಕಾಜಗಿರಿ ಮತ್ತು ರಂಗಾರೆಡ್ಡಿ ಜಿಲ್ಲೆಗಳಲ್ಲಿ ನಿನ್ನೆಯಿಂದ ವಿಪರೀತ ಮಳೆ (Heavy Rainfall)ಯಾಗುತ್ತಿದೆ. ನಿನ್ನೆ ಸಂಜೆ ಸುರಿದ ಭರ್ಜರಿ ಮಳೆಗೆ ರಸ್ತೆಗಳಲ್ಲೆಲ್ಲ ನೀರು ತುಂಬಿದೆ. ಮನೆಗಳು, ವಿವಿಧ ಕಚೇರಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.  ಧಾರಾಕಾರವಾಗಿ ಸುರಿದ ಮಳೆಯಿಂದ ಚರಂಡಿಗಳೆಲ್ಲ ತುಂಬಿ ಹರಿದಿದೆ. ಇದರಿಂದಾಗಿ ಇಬ್ಬರು ಚರಂಡಿಯ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಅವರನ್ನು ಹುಡುಕುವ ಕಾರ್ಯ ನಡೆಯುತ್ತಿದೆ ಎಂದು ಎಸಿಪಿ ಕೆ.ಪುರುಶೋತ್ತಮ್ ತಿಳಿಸಿದ್ದಾರೆ.  ಹಾಗೇ, ಓಲ್ಡ್​ ಸಿಟಿ ಏರಿಯಾದಲ್ಲಿ ನಿಲ್ಲಿಸಿದ್ದ ಟೆಂಪೋ ಟ್ರಕ್​ವೊಂದು ಕೊಚ್ಚಿಕೊಂಡು ಹೋಗಿದೆ. ಇಲ್ಲಿನ ರೆಸ್ಟೋರೆಂಟ್​ವೊಂದರಲ್ಲಿ ಕೂಡ ನೀರು ತುಂಬಿದೆ.

ವಿಪರೀತ ಮಳೆಯಿಂದಾಗಿ ಹೈದರಾಬಾದ್​​ನಲ್ಲಿ ವಾಹನ ಮತ್ತು ಜನಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಜನರು ಸಾಧ್ಯವಾದಷ್ಟು ಮನೆಯಲ್ಲೇ ಇರಬೇಕು. ಮಳೆ ಅಧಿಕವಾಗಿ, ಹೊರಗೆಲ್ಲ ಅಸ್ತವ್ಯಸ್ತವಾಗಿದ್ದು, ಮನೆಯಿಂದ ಹೊರಬರಬೇಡಿ ಎಂದು ಗ್ರೇಟರ್​ ಹೈದರಾಬಾದ್​​ನ ಮುನ್ಸಿಪಲ್​ ಕಾರ್ಪೋರೇಶನ್​​ನ ಜಾರಿ, ಜಾಗರೂಕತೆ ಮತ್ತು ವಿಪತ್ತು (EVDM)ವಿಭಾಗ ಎಚ್ಚರಿಕೆ ನೀಡಿದೆ.  ಸದ್ಯ ರಂಗಾರೆಡ್ಡಿ, ಮೇಡ್ಚಲ್-ಮಲ್ಕಾಜಗಿರಿ,​ ಜುಬಿಲಿ ಹಿಲ್ಸ್​, ಅಂಬರ್‌ಪೇಟೆ, ನಾಂಪಲ್ಲಿ, ಹಳೆಯ ಮಲಕಪೇಟೆ, ಯಾಕುತ್ಪೂರ, ಎಲ್‌ಬಿ ನಗರ ಮತ್ತು ವನಸ್ಥಾಲಿಪುರಗಳಲ್ಲಿ ಭಾರೀ ಮಳೆಯಾಗಿದೆ.  ಹೈದರಾಬಾದ್​​ನಲ್ಲಿ ಇಂದು ಕೂಡ ಅತ್ಯಧಿಕ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಇದನ್ನೂ ಓದಿ: ನಿರ್ಮಾಪಕ ಇಮ್ತಿಯಾಜ್​ ಖತ್ರಿ ಮನೆ ಮೇಲೆ ಎನ್​ಸಿಬಿ ದಾಳಿ; ಬಾಲಿವುಡ್​ ಸೆಲೆಬ್ರಿಟಿಗಳಿಗೆ ನಡುಕ ಶುರು

ಸಿಎಂ ಬೊಮ್ಮಾಯಿ ಅ.11ರಂದು ತಿರುಪತಿಯಲ್ಲಿ ವಾಸ್ತವ್ಯ, ತಿಮ್ಮಪ್ಪನ ದರ್ಶನ; ವೇಂಕಟೇಶ್ವರ ಭಕ್ತಿ ಚಾನೆಲ್ ಇನ್ನು ಕನ್ನಡದಲ್ಲೂ ಪ್ರಸಾರ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?