AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹೈದರಾಬಾದ್​​ನಲ್ಲಿ ಧಾರಾಕಾರ ಮಳೆ; ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಇಬ್ಬರು

ವಿಪರೀತ ಮಳೆಯಿಂದಾಗಿ ಹೈದರಾಬಾದ್​​ನಲ್ಲಿ ವಾಹನ ಮತ್ತು ಜನಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಜನರು ಸಾಧ್ಯವಾದಷ್ಟು ಮನೆಯಲ್ಲೇ ಇರಬೇಕು ಎಂದು ಗ್ರೇಟರ್​ ಹೈದರಾಬಾದ್​ ಮುನ್ಸಿಪಲ್​ ಕಾರ್ಪೋರೇಶನ್​ ಎಚ್ಚರಿಕೆ ನೀಡಿದೆ.

Video: ಹೈದರಾಬಾದ್​​ನಲ್ಲಿ ಧಾರಾಕಾರ ಮಳೆ; ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಇಬ್ಬರು
ಮಳೆಯಿಂದ ರಸ್ತೆಗಳು ಜಲಾವೃತಗೊಂಡಿರುವ ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 09, 2021 | 10:47 AM

Share

ಹೈದರಾಬಾದ್​​ ಮತ್ತು ತೆಲಂಗಾಣದ ಮೇಡ್ಚಲ್-ಮಲ್ಕಾಜಗಿರಿ ಮತ್ತು ರಂಗಾರೆಡ್ಡಿ ಜಿಲ್ಲೆಗಳಲ್ಲಿ ನಿನ್ನೆಯಿಂದ ವಿಪರೀತ ಮಳೆ (Heavy Rainfall)ಯಾಗುತ್ತಿದೆ. ನಿನ್ನೆ ಸಂಜೆ ಸುರಿದ ಭರ್ಜರಿ ಮಳೆಗೆ ರಸ್ತೆಗಳಲ್ಲೆಲ್ಲ ನೀರು ತುಂಬಿದೆ. ಮನೆಗಳು, ವಿವಿಧ ಕಚೇರಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.  ಧಾರಾಕಾರವಾಗಿ ಸುರಿದ ಮಳೆಯಿಂದ ಚರಂಡಿಗಳೆಲ್ಲ ತುಂಬಿ ಹರಿದಿದೆ. ಇದರಿಂದಾಗಿ ಇಬ್ಬರು ಚರಂಡಿಯ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಅವರನ್ನು ಹುಡುಕುವ ಕಾರ್ಯ ನಡೆಯುತ್ತಿದೆ ಎಂದು ಎಸಿಪಿ ಕೆ.ಪುರುಶೋತ್ತಮ್ ತಿಳಿಸಿದ್ದಾರೆ.  ಹಾಗೇ, ಓಲ್ಡ್​ ಸಿಟಿ ಏರಿಯಾದಲ್ಲಿ ನಿಲ್ಲಿಸಿದ್ದ ಟೆಂಪೋ ಟ್ರಕ್​ವೊಂದು ಕೊಚ್ಚಿಕೊಂಡು ಹೋಗಿದೆ. ಇಲ್ಲಿನ ರೆಸ್ಟೋರೆಂಟ್​ವೊಂದರಲ್ಲಿ ಕೂಡ ನೀರು ತುಂಬಿದೆ.

ವಿಪರೀತ ಮಳೆಯಿಂದಾಗಿ ಹೈದರಾಬಾದ್​​ನಲ್ಲಿ ವಾಹನ ಮತ್ತು ಜನಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಜನರು ಸಾಧ್ಯವಾದಷ್ಟು ಮನೆಯಲ್ಲೇ ಇರಬೇಕು. ಮಳೆ ಅಧಿಕವಾಗಿ, ಹೊರಗೆಲ್ಲ ಅಸ್ತವ್ಯಸ್ತವಾಗಿದ್ದು, ಮನೆಯಿಂದ ಹೊರಬರಬೇಡಿ ಎಂದು ಗ್ರೇಟರ್​ ಹೈದರಾಬಾದ್​​ನ ಮುನ್ಸಿಪಲ್​ ಕಾರ್ಪೋರೇಶನ್​​ನ ಜಾರಿ, ಜಾಗರೂಕತೆ ಮತ್ತು ವಿಪತ್ತು (EVDM)ವಿಭಾಗ ಎಚ್ಚರಿಕೆ ನೀಡಿದೆ.  ಸದ್ಯ ರಂಗಾರೆಡ್ಡಿ, ಮೇಡ್ಚಲ್-ಮಲ್ಕಾಜಗಿರಿ,​ ಜುಬಿಲಿ ಹಿಲ್ಸ್​, ಅಂಬರ್‌ಪೇಟೆ, ನಾಂಪಲ್ಲಿ, ಹಳೆಯ ಮಲಕಪೇಟೆ, ಯಾಕುತ್ಪೂರ, ಎಲ್‌ಬಿ ನಗರ ಮತ್ತು ವನಸ್ಥಾಲಿಪುರಗಳಲ್ಲಿ ಭಾರೀ ಮಳೆಯಾಗಿದೆ.  ಹೈದರಾಬಾದ್​​ನಲ್ಲಿ ಇಂದು ಕೂಡ ಅತ್ಯಧಿಕ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಇದನ್ನೂ ಓದಿ: ನಿರ್ಮಾಪಕ ಇಮ್ತಿಯಾಜ್​ ಖತ್ರಿ ಮನೆ ಮೇಲೆ ಎನ್​ಸಿಬಿ ದಾಳಿ; ಬಾಲಿವುಡ್​ ಸೆಲೆಬ್ರಿಟಿಗಳಿಗೆ ನಡುಕ ಶುರು

ಸಿಎಂ ಬೊಮ್ಮಾಯಿ ಅ.11ರಂದು ತಿರುಪತಿಯಲ್ಲಿ ವಾಸ್ತವ್ಯ, ತಿಮ್ಮಪ್ಪನ ದರ್ಶನ; ವೇಂಕಟೇಶ್ವರ ಭಕ್ತಿ ಚಾನೆಲ್ ಇನ್ನು ಕನ್ನಡದಲ್ಲೂ ಪ್ರಸಾರ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ