AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹೈದರಾಬಾದ್​​ನಲ್ಲಿ ಧಾರಾಕಾರ ಮಳೆ; ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಇಬ್ಬರು

ವಿಪರೀತ ಮಳೆಯಿಂದಾಗಿ ಹೈದರಾಬಾದ್​​ನಲ್ಲಿ ವಾಹನ ಮತ್ತು ಜನಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಜನರು ಸಾಧ್ಯವಾದಷ್ಟು ಮನೆಯಲ್ಲೇ ಇರಬೇಕು ಎಂದು ಗ್ರೇಟರ್​ ಹೈದರಾಬಾದ್​ ಮುನ್ಸಿಪಲ್​ ಕಾರ್ಪೋರೇಶನ್​ ಎಚ್ಚರಿಕೆ ನೀಡಿದೆ.

Video: ಹೈದರಾಬಾದ್​​ನಲ್ಲಿ ಧಾರಾಕಾರ ಮಳೆ; ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಇಬ್ಬರು
ಮಳೆಯಿಂದ ರಸ್ತೆಗಳು ಜಲಾವೃತಗೊಂಡಿರುವ ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 09, 2021 | 10:47 AM

Share

ಹೈದರಾಬಾದ್​​ ಮತ್ತು ತೆಲಂಗಾಣದ ಮೇಡ್ಚಲ್-ಮಲ್ಕಾಜಗಿರಿ ಮತ್ತು ರಂಗಾರೆಡ್ಡಿ ಜಿಲ್ಲೆಗಳಲ್ಲಿ ನಿನ್ನೆಯಿಂದ ವಿಪರೀತ ಮಳೆ (Heavy Rainfall)ಯಾಗುತ್ತಿದೆ. ನಿನ್ನೆ ಸಂಜೆ ಸುರಿದ ಭರ್ಜರಿ ಮಳೆಗೆ ರಸ್ತೆಗಳಲ್ಲೆಲ್ಲ ನೀರು ತುಂಬಿದೆ. ಮನೆಗಳು, ವಿವಿಧ ಕಚೇರಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.  ಧಾರಾಕಾರವಾಗಿ ಸುರಿದ ಮಳೆಯಿಂದ ಚರಂಡಿಗಳೆಲ್ಲ ತುಂಬಿ ಹರಿದಿದೆ. ಇದರಿಂದಾಗಿ ಇಬ್ಬರು ಚರಂಡಿಯ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಅವರನ್ನು ಹುಡುಕುವ ಕಾರ್ಯ ನಡೆಯುತ್ತಿದೆ ಎಂದು ಎಸಿಪಿ ಕೆ.ಪುರುಶೋತ್ತಮ್ ತಿಳಿಸಿದ್ದಾರೆ.  ಹಾಗೇ, ಓಲ್ಡ್​ ಸಿಟಿ ಏರಿಯಾದಲ್ಲಿ ನಿಲ್ಲಿಸಿದ್ದ ಟೆಂಪೋ ಟ್ರಕ್​ವೊಂದು ಕೊಚ್ಚಿಕೊಂಡು ಹೋಗಿದೆ. ಇಲ್ಲಿನ ರೆಸ್ಟೋರೆಂಟ್​ವೊಂದರಲ್ಲಿ ಕೂಡ ನೀರು ತುಂಬಿದೆ.

ವಿಪರೀತ ಮಳೆಯಿಂದಾಗಿ ಹೈದರಾಬಾದ್​​ನಲ್ಲಿ ವಾಹನ ಮತ್ತು ಜನಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಜನರು ಸಾಧ್ಯವಾದಷ್ಟು ಮನೆಯಲ್ಲೇ ಇರಬೇಕು. ಮಳೆ ಅಧಿಕವಾಗಿ, ಹೊರಗೆಲ್ಲ ಅಸ್ತವ್ಯಸ್ತವಾಗಿದ್ದು, ಮನೆಯಿಂದ ಹೊರಬರಬೇಡಿ ಎಂದು ಗ್ರೇಟರ್​ ಹೈದರಾಬಾದ್​​ನ ಮುನ್ಸಿಪಲ್​ ಕಾರ್ಪೋರೇಶನ್​​ನ ಜಾರಿ, ಜಾಗರೂಕತೆ ಮತ್ತು ವಿಪತ್ತು (EVDM)ವಿಭಾಗ ಎಚ್ಚರಿಕೆ ನೀಡಿದೆ.  ಸದ್ಯ ರಂಗಾರೆಡ್ಡಿ, ಮೇಡ್ಚಲ್-ಮಲ್ಕಾಜಗಿರಿ,​ ಜುಬಿಲಿ ಹಿಲ್ಸ್​, ಅಂಬರ್‌ಪೇಟೆ, ನಾಂಪಲ್ಲಿ, ಹಳೆಯ ಮಲಕಪೇಟೆ, ಯಾಕುತ್ಪೂರ, ಎಲ್‌ಬಿ ನಗರ ಮತ್ತು ವನಸ್ಥಾಲಿಪುರಗಳಲ್ಲಿ ಭಾರೀ ಮಳೆಯಾಗಿದೆ.  ಹೈದರಾಬಾದ್​​ನಲ್ಲಿ ಇಂದು ಕೂಡ ಅತ್ಯಧಿಕ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಇದನ್ನೂ ಓದಿ: ನಿರ್ಮಾಪಕ ಇಮ್ತಿಯಾಜ್​ ಖತ್ರಿ ಮನೆ ಮೇಲೆ ಎನ್​ಸಿಬಿ ದಾಳಿ; ಬಾಲಿವುಡ್​ ಸೆಲೆಬ್ರಿಟಿಗಳಿಗೆ ನಡುಕ ಶುರು

ಸಿಎಂ ಬೊಮ್ಮಾಯಿ ಅ.11ರಂದು ತಿರುಪತಿಯಲ್ಲಿ ವಾಸ್ತವ್ಯ, ತಿಮ್ಮಪ್ಪನ ದರ್ಶನ; ವೇಂಕಟೇಶ್ವರ ಭಕ್ತಿ ಚಾನೆಲ್ ಇನ್ನು ಕನ್ನಡದಲ್ಲೂ ಪ್ರಸಾರ

Follow Us
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!