AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಮಲದಲ್ಲಿ ಜನವೋ ಜನ; ದೇವರ ದರ್ಶನ ಸಿಗಲು 2 ದಿನ ಕಾಯಬೇಕು: ಟಿಟಿಡಿ

ಹಲವಾರು ರಾಜ್ಯಗಳಲ್ಲಿ ಎಸ್‌ಎಸ್‌ಸಿ ಮತ್ತು ಇಂಟರ್‌ಮೀಡಿಯೇಟ್ ಪರೀಕ್ಷೆಗಳು ಮುಕ್ತಾಯವಾದ ನಂತರ ಈ ವಾರಾಂತ್ಯದಲ್ಲಿ ತಿರುಮಲದಲ್ಲಿ ಯಾತ್ರಿಕರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ

ತಿರುಮಲದಲ್ಲಿ ಜನವೋ ಜನ; ದೇವರ ದರ್ಶನ ಸಿಗಲು 2 ದಿನ ಕಾಯಬೇಕು: ಟಿಟಿಡಿ
ತಿರುಪತಿ ಸನ್ನಿದಿಯಲ್ಲಿ ಭಕ್ತರು (ಸಂಗ್ರಹ ಚಿತ್ರ)
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: May 30, 2022 | 4:13 PM

Share

ತಿರುಪತಿ: ತಿರುಮಲದಲ್ಲಿ(Tirumala) ಶನಿವಾರ ಭಕ್ತರ ಸಂಖ್ಯೆ ಜಾಸ್ತಿ ಆಗಿದ್ದು ದೇವರ ಉಚಿತ ದರ್ಶನ ಸಿಗಬೇಕಾದರೆ  48ಗಂಟೆಗಳಿಗಿಂತಲೂ ಹೆಚ್ಚು ಹೊತ್ತು ಸರತಿ ಸಾಲಿನಲ್ಲಿ ಕಾಯಬೇಕಿದೆ. ಶನಿವಾರ ದೇವಾಲಯದ ಸಂಕೀರ್ಣದ ಹೊರಗೆ ಭಕ್ತಾದಿಗಳ ಉದ್ದನೆಯ ಸರತಿ ಸಾಲುಗಳು ಕಂಡುಬಂದಿದ್ದು, ದರ್ಶನಕ್ಕೆ ಎರಡು ದಿನಗಳು ಬೇಕಾಗುತ್ತದೆ ಎಂದು ಟಿಟಿಡಿ (TTD) ಮೂಲಗಳು ತಿಳಿಸಿವೆ.  ಹಲವಾರು ರಾಜ್ಯಗಳಲ್ಲಿ ಎಸ್‌ಎಸ್‌ಸಿ ಮತ್ತು ಇಂಟರ್‌ಮೀಡಿಯೇಟ್ ಪರೀಕ್ಷೆಗಳು ಮುಕ್ತಾಯವಾದ ನಂತರ ಈ ವಾರಾಂತ್ಯದಲ್ಲಿ ತಿರುಮಲದಲ್ಲಿ ಯಾತ್ರಿಕರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಅಲಿಪಿರಿ ಟೋಲ್ ಪ್ಲಾಜಾ, ಅಲಿಪಿರಿ ಮತ್ತು ಶ್ರೀವಾರಿ ಮೆಟ್ಟು ಪಾದಚಾರಿ ಮಾರ್ಗಗಳು ಶನಿವಾರ ದಿನವಿಡೀ ಭಕ್ತರಿಂದ ಕಿಕ್ಕಿರಿದು ತುಂಬಿದ್ದವು. ಯಾವುದೇ ಪೂರ್ವ ದರ್ಶನ ಕಾಯ್ದಿರಿಸದೆ ತಿರುಮಲಕ್ಕೆ ಆಗಮಿಸಿದ ಹತ್ತಾರು ಭಕ್ತರು 2 ಕಿಲೋಮೀಟರ್‌ಗೂ ಮೀರಿದ ಉಚಿತ ದರ್ಶನ ಸರತಿ ಸಾಲಿನಲ್ಲಿ ಸೇರಿದ್ದರಿಂದ ದೇವಾಲಯ ನಗರದಲ್ಲಿ ದರ್ಶನಕ್ಕೆ ನಿಂತಿದ್ದ ಜನರ ಸಾಲು ಮತ್ತಷ್ಟು ಬೆಳೆಯಿತು.

ಟಿಟಿಡಿ ಕಾರ್ಯನಿರ್ವಹಣಾಧಿಕಾರಿ ಎ.ವಿ.ಧರ್ಮ ರೆಡ್ಡಿ, ಸಿವಿಎಸ್‌ಒ ನರಸಿಂಹ ಕಿಶೋರ್ ಮತ್ತಿತರರು ದಿನವಿಡೀ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿದ್ದಾರೆ.  ವಸತಿ, ಕ್ಯೂ ಕಾಂಪ್ಲೆಕ್ಸ್, ದೇವಸ್ಥಾನ, ಲಡ್ಡು ಕೌಂಟರ್‌ಗಳು, ಅನ್ನಪ್ರಸಾದ ಕೌಂಟರ್‌ಗಳು ಇತ್ಯಾದಿಗಳಲ್ಲಿ ನಿಯೋಜನೆಗೊಂಡ ಸಿಬ್ಬಂದಿಗೆ ಯಾವುದೇ ರೀತಿಲ್ಲಿ ಭಕ್ತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಅವರು ಸೂಚಿಸಿದರು. ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ಕುಡಿಯುವ ನೀರು, ಆಹಾರ, ಹಾಲು ನಿರಂತರವಾಗಿ ಪೂರೈಕೆಯಾಗುವಂತೆ ಟಿಟಿಡಿ ಅಧಿಕಾರಿಗಳು ನೋಡಿಕೊಂಡರು. ಟಿಟಿಡಿ ಮೂಲಗಳ ಪ್ರಕಾರ ಶುಕ್ರವಾರ 73,358 ಭಕ್ತರು ದರ್ಶನ ಪಡೆದಿದ್ದಾರೆ. ಟಿಟಿಡಿ ಹುಂಡಿಯ ಆದಾಯ 4.11 ಕೋಟಿ ರೂ. ಆಗಿದೆ.

ಇದನ್ನೂ ಓದಿ
Image
Tirupati Temple: ತಿರುಪತಿ ತಿರುಮಲ ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತ; ಮೂವರಿಗೆ ಗಾಯ
Image
ಜಿಲೇಬಿ ಪ್ರಸಾದದ ಬೆಲೆಯನ್ನು ₹500ಕ್ಕೆ ಏರಿಸಿದ ತಿರುಮಲ ತಿರುಪತಿ ದೇವಸ್ಥಾನ
Image
ಟಿಟಿಡಿ ಖ್ಯಾತೆಯಿಂದ ಅಲರ್ಟ್​! ಆಂಜನೇಯ ಜನಿಸಿದ ಅಂಜನಾದ್ರಿ ಅಭಿವೃದ್ಧಿಗೆ ಸರ್ಕಾರ ಮುಂದು, ಕೋಟ್ಯಂತರ ಅನುದಾನ ಘೋಷಣೆ ಸಾಧ್ಯತೆ

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!