AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಮಲದಲ್ಲಿ ಜನವೋ ಜನ; ದೇವರ ದರ್ಶನ ಸಿಗಲು 2 ದಿನ ಕಾಯಬೇಕು: ಟಿಟಿಡಿ

ಹಲವಾರು ರಾಜ್ಯಗಳಲ್ಲಿ ಎಸ್‌ಎಸ್‌ಸಿ ಮತ್ತು ಇಂಟರ್‌ಮೀಡಿಯೇಟ್ ಪರೀಕ್ಷೆಗಳು ಮುಕ್ತಾಯವಾದ ನಂತರ ಈ ವಾರಾಂತ್ಯದಲ್ಲಿ ತಿರುಮಲದಲ್ಲಿ ಯಾತ್ರಿಕರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ

ತಿರುಮಲದಲ್ಲಿ ಜನವೋ ಜನ; ದೇವರ ದರ್ಶನ ಸಿಗಲು 2 ದಿನ ಕಾಯಬೇಕು: ಟಿಟಿಡಿ
ತಿರುಪತಿ ಸನ್ನಿದಿಯಲ್ಲಿ ಭಕ್ತರು (ಸಂಗ್ರಹ ಚಿತ್ರ)
TV9 Web
| Edited By: |

Updated on: May 30, 2022 | 4:13 PM

Share

ತಿರುಪತಿ: ತಿರುಮಲದಲ್ಲಿ(Tirumala) ಶನಿವಾರ ಭಕ್ತರ ಸಂಖ್ಯೆ ಜಾಸ್ತಿ ಆಗಿದ್ದು ದೇವರ ಉಚಿತ ದರ್ಶನ ಸಿಗಬೇಕಾದರೆ  48ಗಂಟೆಗಳಿಗಿಂತಲೂ ಹೆಚ್ಚು ಹೊತ್ತು ಸರತಿ ಸಾಲಿನಲ್ಲಿ ಕಾಯಬೇಕಿದೆ. ಶನಿವಾರ ದೇವಾಲಯದ ಸಂಕೀರ್ಣದ ಹೊರಗೆ ಭಕ್ತಾದಿಗಳ ಉದ್ದನೆಯ ಸರತಿ ಸಾಲುಗಳು ಕಂಡುಬಂದಿದ್ದು, ದರ್ಶನಕ್ಕೆ ಎರಡು ದಿನಗಳು ಬೇಕಾಗುತ್ತದೆ ಎಂದು ಟಿಟಿಡಿ (TTD) ಮೂಲಗಳು ತಿಳಿಸಿವೆ.  ಹಲವಾರು ರಾಜ್ಯಗಳಲ್ಲಿ ಎಸ್‌ಎಸ್‌ಸಿ ಮತ್ತು ಇಂಟರ್‌ಮೀಡಿಯೇಟ್ ಪರೀಕ್ಷೆಗಳು ಮುಕ್ತಾಯವಾದ ನಂತರ ಈ ವಾರಾಂತ್ಯದಲ್ಲಿ ತಿರುಮಲದಲ್ಲಿ ಯಾತ್ರಿಕರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಅಲಿಪಿರಿ ಟೋಲ್ ಪ್ಲಾಜಾ, ಅಲಿಪಿರಿ ಮತ್ತು ಶ್ರೀವಾರಿ ಮೆಟ್ಟು ಪಾದಚಾರಿ ಮಾರ್ಗಗಳು ಶನಿವಾರ ದಿನವಿಡೀ ಭಕ್ತರಿಂದ ಕಿಕ್ಕಿರಿದು ತುಂಬಿದ್ದವು. ಯಾವುದೇ ಪೂರ್ವ ದರ್ಶನ ಕಾಯ್ದಿರಿಸದೆ ತಿರುಮಲಕ್ಕೆ ಆಗಮಿಸಿದ ಹತ್ತಾರು ಭಕ್ತರು 2 ಕಿಲೋಮೀಟರ್‌ಗೂ ಮೀರಿದ ಉಚಿತ ದರ್ಶನ ಸರತಿ ಸಾಲಿನಲ್ಲಿ ಸೇರಿದ್ದರಿಂದ ದೇವಾಲಯ ನಗರದಲ್ಲಿ ದರ್ಶನಕ್ಕೆ ನಿಂತಿದ್ದ ಜನರ ಸಾಲು ಮತ್ತಷ್ಟು ಬೆಳೆಯಿತು.

ಟಿಟಿಡಿ ಕಾರ್ಯನಿರ್ವಹಣಾಧಿಕಾರಿ ಎ.ವಿ.ಧರ್ಮ ರೆಡ್ಡಿ, ಸಿವಿಎಸ್‌ಒ ನರಸಿಂಹ ಕಿಶೋರ್ ಮತ್ತಿತರರು ದಿನವಿಡೀ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿದ್ದಾರೆ.  ವಸತಿ, ಕ್ಯೂ ಕಾಂಪ್ಲೆಕ್ಸ್, ದೇವಸ್ಥಾನ, ಲಡ್ಡು ಕೌಂಟರ್‌ಗಳು, ಅನ್ನಪ್ರಸಾದ ಕೌಂಟರ್‌ಗಳು ಇತ್ಯಾದಿಗಳಲ್ಲಿ ನಿಯೋಜನೆಗೊಂಡ ಸಿಬ್ಬಂದಿಗೆ ಯಾವುದೇ ರೀತಿಲ್ಲಿ ಭಕ್ತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಅವರು ಸೂಚಿಸಿದರು. ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ಕುಡಿಯುವ ನೀರು, ಆಹಾರ, ಹಾಲು ನಿರಂತರವಾಗಿ ಪೂರೈಕೆಯಾಗುವಂತೆ ಟಿಟಿಡಿ ಅಧಿಕಾರಿಗಳು ನೋಡಿಕೊಂಡರು. ಟಿಟಿಡಿ ಮೂಲಗಳ ಪ್ರಕಾರ ಶುಕ್ರವಾರ 73,358 ಭಕ್ತರು ದರ್ಶನ ಪಡೆದಿದ್ದಾರೆ. ಟಿಟಿಡಿ ಹುಂಡಿಯ ಆದಾಯ 4.11 ಕೋಟಿ ರೂ. ಆಗಿದೆ.

ಇದನ್ನೂ ಓದಿ
Image
Tirupati Temple: ತಿರುಪತಿ ತಿರುಮಲ ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತ; ಮೂವರಿಗೆ ಗಾಯ
Image
ಜಿಲೇಬಿ ಪ್ರಸಾದದ ಬೆಲೆಯನ್ನು ₹500ಕ್ಕೆ ಏರಿಸಿದ ತಿರುಮಲ ತಿರುಪತಿ ದೇವಸ್ಥಾನ
Image
ಟಿಟಿಡಿ ಖ್ಯಾತೆಯಿಂದ ಅಲರ್ಟ್​! ಆಂಜನೇಯ ಜನಿಸಿದ ಅಂಜನಾದ್ರಿ ಅಭಿವೃದ್ಧಿಗೆ ಸರ್ಕಾರ ಮುಂದು, ಕೋಟ್ಯಂತರ ಅನುದಾನ ಘೋಷಣೆ ಸಾಧ್ಯತೆ

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ