AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Rain: ಡಿಸೆಂಬರ್​ 1, 2ರಂದು ಗುಜರಾತ್​​ನಲ್ಲಿ ಭಾರಿ ಮಳೆ ಸಾಧ್ಯತೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದ ಐಎಂಡಿ

ನವೆಂಬರ್​ 30ರಂದು ಅಹ್ಮದಾಬಾದ್, ಆನಂದ್​, ಖೇಡಾ, ಪಂಚಮಹಲ್​, ರಾಜ್​ಕೋಟ್​​ ಸೇರಿ ದಕ್ಷಿಣ ಗುಜರಾತ್​​ನ ಎಲ್ಲ ಜಿಲ್ಲೆಗಳಲ್ಲೂ ಗುಡುಗು-ಮಿಂಚು ಸಹಿತ ಮಧ್ಯಮ ಪ್ರಮಾಣದ ಮಳೆಯಾಗುವುದು.

Gujarat Rain: ಡಿಸೆಂಬರ್​ 1, 2ರಂದು ಗುಜರಾತ್​​ನಲ್ಲಿ ಭಾರಿ ಮಳೆ ಸಾಧ್ಯತೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದ ಐಎಂಡಿ
ಮಳೆಯ ಚಿತ್ರ
TV9 Web
| Edited By: |

Updated on:Nov 29, 2021 | 4:03 PM

Share

ಈಗಾಗಲೇ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ ರಾಜ್ಯಗಳು ಭಯಂಕರ ಮಳೆಗೆ ತತ್ತರಿಸಿವೆ. ಆದರೆ ಮಳೆ ನಿಲ್ಲುವ ಲಕ್ಷಣಗಳಂತೂ ಕಾಣುತ್ತಿಲ್ಲ. ಗುಜರಾತ್​​ನಲ್ಲಿ ಡಿ.1 ಮತ್ತು 2ರಂದು ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತದ ಹವಾಮಾನ ಇಲಾಖೆ (IMD) ತಿಳಿಸಿದೆ. ಹಾಗೇ, ಗುಜರಾತ್​​ನ ಆನಂದ್, ಬರೂಚ್​, ನವ್ಸರಿ, ವಲ್ಸೇದ್​, ಅಮ್ರೇಲಿ ಮತ್ತು ಭವನಗರ ಜಿಲ್ಲೆಗಳಲ್ಲಿ ಡಿಸೆಂಬರ್​ 1ರಂದು ಆರೆಂಜ್​ ಅಲರ್ಟ್ ಘೋಷಿಸಲಾಗಿದ್ದು, ಡಿಸೆಂಬರ್​ 2ರಂದು ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. 

ಸಕ್ರಿಯ ಪಾಶ್ಚಿಮಾತ್ಯ ಅಡಚಣೆಯಿಂದಾಗಿ ಗುಜರಾತ್​​ನಲ್ಲಿ ನವೆಂಬರ್ 30ರಿಂದ ಮಳೆ ಪ್ರಾರಂಭವಾಗಲಿದೆ. ನವೆಂಬರ್​ 30ರ ಮಧ್ಯರಾತ್ರಿಯಿಂದಲೇ ವಾಯುವ್ಯ ಮತ್ತು ಅದಕ್ಕೆ ಹೊಂದಿಕೊಂಡಿರುವ ಮಧ್ಯ ಭಾರತದೆಲ್ಲೆಡೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಇನ್ನು ಗುಜರಾತ್​​ನ ಉತ್ತರ ಮತ್ತು ದಕ್ಷಿಣ ಕರಾವಳಿ ತೀರದಲ್ಲಿ ನವೆಂಬರ್​ 30ರಿಂದ ಡಿಸೆಂಬರ್​ 2ರವರೆಗೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಈ ಅಕಾಲಿಕ ಮಳೆಯಿಂದ ರೈತರ ಬೆಳೆಗಳಿಗೆ ತೊಂದರೆಯಾಗಲಿದೆ ಮತ್ತು ಕಟಾವು ಮಾಡಲೂ ಕಷ್ಟವಾಗಲಿದೆ ಎಂದು ಹೇಳಲಾಗಿದೆ.

ನವೆಂಬರ್​ 30ರಂದು ಅಹ್ಮದಾಬಾದ್, ಆನಂದ್​, ಖೇಡಾ, ಪಂಚಮಹಲ್​, ರಾಜ್​ಕೋಟ್​​ ಸೇರಿ ದಕ್ಷಿಣ ಗುಜರಾತ್​​ನ ಎಲ್ಲ ಜಿಲ್ಲೆಗಳಲ್ಲೂ ಗುಡುಗು-ಮಿಂಚು ಸಹಿತ ಮಧ್ಯಮ ಪ್ರಮಾಣದ ಮಳೆಯಾಗುವುದು. ಈ ವೇಳೆ ಗಂಟೆಗೆ 40-60 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಐಎಂಡಿ ಹೇಳಿದೆ.  ಇನ್ನು ಡಿಸೆಂಬರ್​ 1ರಂದು ಆನಂದ್, ಬರೂಚ್​, ನವ್​ಸರಿ, ವಲ್ಸಾದ್​ ಸೂರತ್​, ಡಂಗ್ಸ್​, ಅಮ್ರೇಲಿ, ಜುನಾಗಢ್​, ಗಿರ್​, ಸೋಮ್​ನಾಥ್​, ಬೋಟಾಡ್​ ಮತ್ತು ಭವನಗರ, ಡಾಹೋಡ್​, ಛೋಟಾಉದೇಪುರ್​, ಪಂಚಮಹಲ್​​ಗಳಲ್ಲಿ ಭರ್ಜರಿ ಮಳೆಯಾಗಲಿದೆ. ಹಾಗೇ, ಡಿಸೆಂಬರ್​ 2ರಂದು ಬನಸ್ಕಾಂತ, ಸಬರಕಾಂತ, ಅರಾವಳಿ, ಮಹಿಸಾಗರ, ಡಾಂಗ್ಸ್ ಮತ್ತು ತಾಪಿಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಪತ್ತೆಯಾಗಿದೆಯಾ ಒಮಿಕ್ರಾನ್​ ಸೋಂಕು?- ಸದ್ಯ ಎರಡು ರಾಜ್ಯಗಳ ಮೇಲೆ ಹೆಚ್ಚಿನ ನಿಗಾ !

Published On - 4:02 pm, Mon, 29 November 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ