AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Rain: ಡಿಸೆಂಬರ್​ 1, 2ರಂದು ಗುಜರಾತ್​​ನಲ್ಲಿ ಭಾರಿ ಮಳೆ ಸಾಧ್ಯತೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದ ಐಎಂಡಿ

ನವೆಂಬರ್​ 30ರಂದು ಅಹ್ಮದಾಬಾದ್, ಆನಂದ್​, ಖೇಡಾ, ಪಂಚಮಹಲ್​, ರಾಜ್​ಕೋಟ್​​ ಸೇರಿ ದಕ್ಷಿಣ ಗುಜರಾತ್​​ನ ಎಲ್ಲ ಜಿಲ್ಲೆಗಳಲ್ಲೂ ಗುಡುಗು-ಮಿಂಚು ಸಹಿತ ಮಧ್ಯಮ ಪ್ರಮಾಣದ ಮಳೆಯಾಗುವುದು.

Gujarat Rain: ಡಿಸೆಂಬರ್​ 1, 2ರಂದು ಗುಜರಾತ್​​ನಲ್ಲಿ ಭಾರಿ ಮಳೆ ಸಾಧ್ಯತೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದ ಐಎಂಡಿ
ಮಳೆಯ ಚಿತ್ರ
TV9 Web
| Edited By: |

Updated on:Nov 29, 2021 | 4:03 PM

Share

ಈಗಾಗಲೇ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ ರಾಜ್ಯಗಳು ಭಯಂಕರ ಮಳೆಗೆ ತತ್ತರಿಸಿವೆ. ಆದರೆ ಮಳೆ ನಿಲ್ಲುವ ಲಕ್ಷಣಗಳಂತೂ ಕಾಣುತ್ತಿಲ್ಲ. ಗುಜರಾತ್​​ನಲ್ಲಿ ಡಿ.1 ಮತ್ತು 2ರಂದು ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತದ ಹವಾಮಾನ ಇಲಾಖೆ (IMD) ತಿಳಿಸಿದೆ. ಹಾಗೇ, ಗುಜರಾತ್​​ನ ಆನಂದ್, ಬರೂಚ್​, ನವ್ಸರಿ, ವಲ್ಸೇದ್​, ಅಮ್ರೇಲಿ ಮತ್ತು ಭವನಗರ ಜಿಲ್ಲೆಗಳಲ್ಲಿ ಡಿಸೆಂಬರ್​ 1ರಂದು ಆರೆಂಜ್​ ಅಲರ್ಟ್ ಘೋಷಿಸಲಾಗಿದ್ದು, ಡಿಸೆಂಬರ್​ 2ರಂದು ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. 

ಸಕ್ರಿಯ ಪಾಶ್ಚಿಮಾತ್ಯ ಅಡಚಣೆಯಿಂದಾಗಿ ಗುಜರಾತ್​​ನಲ್ಲಿ ನವೆಂಬರ್ 30ರಿಂದ ಮಳೆ ಪ್ರಾರಂಭವಾಗಲಿದೆ. ನವೆಂಬರ್​ 30ರ ಮಧ್ಯರಾತ್ರಿಯಿಂದಲೇ ವಾಯುವ್ಯ ಮತ್ತು ಅದಕ್ಕೆ ಹೊಂದಿಕೊಂಡಿರುವ ಮಧ್ಯ ಭಾರತದೆಲ್ಲೆಡೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಇನ್ನು ಗುಜರಾತ್​​ನ ಉತ್ತರ ಮತ್ತು ದಕ್ಷಿಣ ಕರಾವಳಿ ತೀರದಲ್ಲಿ ನವೆಂಬರ್​ 30ರಿಂದ ಡಿಸೆಂಬರ್​ 2ರವರೆಗೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಈ ಅಕಾಲಿಕ ಮಳೆಯಿಂದ ರೈತರ ಬೆಳೆಗಳಿಗೆ ತೊಂದರೆಯಾಗಲಿದೆ ಮತ್ತು ಕಟಾವು ಮಾಡಲೂ ಕಷ್ಟವಾಗಲಿದೆ ಎಂದು ಹೇಳಲಾಗಿದೆ.

ನವೆಂಬರ್​ 30ರಂದು ಅಹ್ಮದಾಬಾದ್, ಆನಂದ್​, ಖೇಡಾ, ಪಂಚಮಹಲ್​, ರಾಜ್​ಕೋಟ್​​ ಸೇರಿ ದಕ್ಷಿಣ ಗುಜರಾತ್​​ನ ಎಲ್ಲ ಜಿಲ್ಲೆಗಳಲ್ಲೂ ಗುಡುಗು-ಮಿಂಚು ಸಹಿತ ಮಧ್ಯಮ ಪ್ರಮಾಣದ ಮಳೆಯಾಗುವುದು. ಈ ವೇಳೆ ಗಂಟೆಗೆ 40-60 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಐಎಂಡಿ ಹೇಳಿದೆ.  ಇನ್ನು ಡಿಸೆಂಬರ್​ 1ರಂದು ಆನಂದ್, ಬರೂಚ್​, ನವ್​ಸರಿ, ವಲ್ಸಾದ್​ ಸೂರತ್​, ಡಂಗ್ಸ್​, ಅಮ್ರೇಲಿ, ಜುನಾಗಢ್​, ಗಿರ್​, ಸೋಮ್​ನಾಥ್​, ಬೋಟಾಡ್​ ಮತ್ತು ಭವನಗರ, ಡಾಹೋಡ್​, ಛೋಟಾಉದೇಪುರ್​, ಪಂಚಮಹಲ್​​ಗಳಲ್ಲಿ ಭರ್ಜರಿ ಮಳೆಯಾಗಲಿದೆ. ಹಾಗೇ, ಡಿಸೆಂಬರ್​ 2ರಂದು ಬನಸ್ಕಾಂತ, ಸಬರಕಾಂತ, ಅರಾವಳಿ, ಮಹಿಸಾಗರ, ಡಾಂಗ್ಸ್ ಮತ್ತು ತಾಪಿಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಪತ್ತೆಯಾಗಿದೆಯಾ ಒಮಿಕ್ರಾನ್​ ಸೋಂಕು?- ಸದ್ಯ ಎರಡು ರಾಜ್ಯಗಳ ಮೇಲೆ ಹೆಚ್ಚಿನ ನಿಗಾ !

Published On - 4:02 pm, Mon, 29 November 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ