AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Rain: ಡಿಸೆಂಬರ್​ 1, 2ರಂದು ಗುಜರಾತ್​​ನಲ್ಲಿ ಭಾರಿ ಮಳೆ ಸಾಧ್ಯತೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದ ಐಎಂಡಿ

ನವೆಂಬರ್​ 30ರಂದು ಅಹ್ಮದಾಬಾದ್, ಆನಂದ್​, ಖೇಡಾ, ಪಂಚಮಹಲ್​, ರಾಜ್​ಕೋಟ್​​ ಸೇರಿ ದಕ್ಷಿಣ ಗುಜರಾತ್​​ನ ಎಲ್ಲ ಜಿಲ್ಲೆಗಳಲ್ಲೂ ಗುಡುಗು-ಮಿಂಚು ಸಹಿತ ಮಧ್ಯಮ ಪ್ರಮಾಣದ ಮಳೆಯಾಗುವುದು.

Gujarat Rain: ಡಿಸೆಂಬರ್​ 1, 2ರಂದು ಗುಜರಾತ್​​ನಲ್ಲಿ ಭಾರಿ ಮಳೆ ಸಾಧ್ಯತೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದ ಐಎಂಡಿ
ಮಳೆಯ ಚಿತ್ರ
TV9 Web
| Edited By: |

Updated on:Nov 29, 2021 | 4:03 PM

Share

ಈಗಾಗಲೇ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ ರಾಜ್ಯಗಳು ಭಯಂಕರ ಮಳೆಗೆ ತತ್ತರಿಸಿವೆ. ಆದರೆ ಮಳೆ ನಿಲ್ಲುವ ಲಕ್ಷಣಗಳಂತೂ ಕಾಣುತ್ತಿಲ್ಲ. ಗುಜರಾತ್​​ನಲ್ಲಿ ಡಿ.1 ಮತ್ತು 2ರಂದು ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತದ ಹವಾಮಾನ ಇಲಾಖೆ (IMD) ತಿಳಿಸಿದೆ. ಹಾಗೇ, ಗುಜರಾತ್​​ನ ಆನಂದ್, ಬರೂಚ್​, ನವ್ಸರಿ, ವಲ್ಸೇದ್​, ಅಮ್ರೇಲಿ ಮತ್ತು ಭವನಗರ ಜಿಲ್ಲೆಗಳಲ್ಲಿ ಡಿಸೆಂಬರ್​ 1ರಂದು ಆರೆಂಜ್​ ಅಲರ್ಟ್ ಘೋಷಿಸಲಾಗಿದ್ದು, ಡಿಸೆಂಬರ್​ 2ರಂದು ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. 

ಸಕ್ರಿಯ ಪಾಶ್ಚಿಮಾತ್ಯ ಅಡಚಣೆಯಿಂದಾಗಿ ಗುಜರಾತ್​​ನಲ್ಲಿ ನವೆಂಬರ್ 30ರಿಂದ ಮಳೆ ಪ್ರಾರಂಭವಾಗಲಿದೆ. ನವೆಂಬರ್​ 30ರ ಮಧ್ಯರಾತ್ರಿಯಿಂದಲೇ ವಾಯುವ್ಯ ಮತ್ತು ಅದಕ್ಕೆ ಹೊಂದಿಕೊಂಡಿರುವ ಮಧ್ಯ ಭಾರತದೆಲ್ಲೆಡೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಇನ್ನು ಗುಜರಾತ್​​ನ ಉತ್ತರ ಮತ್ತು ದಕ್ಷಿಣ ಕರಾವಳಿ ತೀರದಲ್ಲಿ ನವೆಂಬರ್​ 30ರಿಂದ ಡಿಸೆಂಬರ್​ 2ರವರೆಗೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಈ ಅಕಾಲಿಕ ಮಳೆಯಿಂದ ರೈತರ ಬೆಳೆಗಳಿಗೆ ತೊಂದರೆಯಾಗಲಿದೆ ಮತ್ತು ಕಟಾವು ಮಾಡಲೂ ಕಷ್ಟವಾಗಲಿದೆ ಎಂದು ಹೇಳಲಾಗಿದೆ.

ನವೆಂಬರ್​ 30ರಂದು ಅಹ್ಮದಾಬಾದ್, ಆನಂದ್​, ಖೇಡಾ, ಪಂಚಮಹಲ್​, ರಾಜ್​ಕೋಟ್​​ ಸೇರಿ ದಕ್ಷಿಣ ಗುಜರಾತ್​​ನ ಎಲ್ಲ ಜಿಲ್ಲೆಗಳಲ್ಲೂ ಗುಡುಗು-ಮಿಂಚು ಸಹಿತ ಮಧ್ಯಮ ಪ್ರಮಾಣದ ಮಳೆಯಾಗುವುದು. ಈ ವೇಳೆ ಗಂಟೆಗೆ 40-60 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಐಎಂಡಿ ಹೇಳಿದೆ.  ಇನ್ನು ಡಿಸೆಂಬರ್​ 1ರಂದು ಆನಂದ್, ಬರೂಚ್​, ನವ್​ಸರಿ, ವಲ್ಸಾದ್​ ಸೂರತ್​, ಡಂಗ್ಸ್​, ಅಮ್ರೇಲಿ, ಜುನಾಗಢ್​, ಗಿರ್​, ಸೋಮ್​ನಾಥ್​, ಬೋಟಾಡ್​ ಮತ್ತು ಭವನಗರ, ಡಾಹೋಡ್​, ಛೋಟಾಉದೇಪುರ್​, ಪಂಚಮಹಲ್​​ಗಳಲ್ಲಿ ಭರ್ಜರಿ ಮಳೆಯಾಗಲಿದೆ. ಹಾಗೇ, ಡಿಸೆಂಬರ್​ 2ರಂದು ಬನಸ್ಕಾಂತ, ಸಬರಕಾಂತ, ಅರಾವಳಿ, ಮಹಿಸಾಗರ, ಡಾಂಗ್ಸ್ ಮತ್ತು ತಾಪಿಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಪತ್ತೆಯಾಗಿದೆಯಾ ಒಮಿಕ್ರಾನ್​ ಸೋಂಕು?- ಸದ್ಯ ಎರಡು ರಾಜ್ಯಗಳ ಮೇಲೆ ಹೆಚ್ಚಿನ ನಿಗಾ !

Published On - 4:02 pm, Mon, 29 November 21

ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ