AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​​ನಲ್ಲಿ ಭಾರೀ ಅಕಾಲಿಕ ಮಳೆ: ಸಿಡಿಲು ಬಡಿದು 20 ಜನ ಸಾವು

ಗುಜರಾತ್​​ನಲ್ಲಿ ಭಾರೀ ಮಳೆ ಉಂಟಾಗಿದ್ದು, ಸೋಮವಾರ ಸಿಡಿಲು ಬಡಿದು 20 ಜನ ಸಾವನ್ನಪ್ಪಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ತಿಳಿಸಿದ. ನೆನ್ನೆ (ನ.26) ರಾಜ್ಯದಲ್ಲಿ ಗುಡುಗು ಸಹಿತ ಅಕಾಲಿಕ ಮಳೆ ಸುರಿದಿದ್ದರಿಂದ ಸಿಡಿಲು ಬಡಿದು ಎಂಟು ಜನ ಸಾವನ್ನಪ್ಪಿದ್ದಾರೆ.

ಗುಜರಾತ್​​ನಲ್ಲಿ ಭಾರೀ ಅಕಾಲಿಕ ಮಳೆ: ಸಿಡಿಲು ಬಡಿದು 20 ಜನ ಸಾವು
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
| Edited By: |

Updated on: Nov 27, 2023 | 10:00 AM

Share

ಗಾಂಧಿನಗರ, ನ.27: ಗುಜರಾತ್​​ನಲ್ಲಿ (gujarat) ಭಾರೀ ಮಳೆ ಉಂಟಾಗಿದ್ದು, ಸೋಮವಾರ ಸಿಡಿಲು ಬಡಿದು 20 ಜನ ಸಾವನ್ನಪ್ಪಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ತಿಳಿಸಿದ. ನೆನ್ನೆ (ನ.26) ರಾಜ್ಯದಲ್ಲಿ ಗುಡುಗು ಸಹಿತ ಅಕಾಲಿಕ ಮಳೆ ಸುರಿದಿದ್ದರಿಂದ ಸಿಡಿಲು ಬಡಿದು ಎಂಟು ಜನ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 22 ವರ್ಷದ ಯುವಕ ಬೈಕ್​​ನಲ್ಲಿ ಪ್ರಯಾಣಿಸುವಾಗ ಸಿಡಿಲು ಬಡಿದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇನ್ನು ಮೆಹ್ಸಾನಾ ಜಿಲ್ಲೆಯಲ್ಲಿ ಆಟೋರಿಕ್ಷಾ ಮೇಲೆ ಮರ ಬಿದ್ದು 29 ವರ್ಷದ ಯುವಕ ಮೃತಪಟ್ಟಿದ್ದಾನೆ. ಇದರ ಜತೆಗೆ ತಾಪಿ ಜಿಲ್ಲೆಯಲ್ಲಿ ಇಬ್ಬರು ಮತ್ತು ಸಬರ್ಕಾಂತ, ಅಹಮದಾಬಾದ್, ಮೆಹ್ಸಾನಾ ಮತ್ತು ದಾಹೋದ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಕೆಲವು ಕಡೆ ಸಿಡಿಲಿನ ಅಬ್ಬರಕ್ಕೆ ದನ, ಕುರಿಗಳೂ ಸಾವನ್ನಪ್ಪಿವೆ. ಪಿಟಿಐ ಸುದ್ದಿ ಸಂಸ್ಥೆಯ ಪ್ರಕಾರ, ಗುಜರಾತ್‌ನ 251 ತಾಲೂಕುಗಳಲ್ಲಿ 220 ತಾಲೂಕುಗಳಲ್ಲಿ ಬೆಳಗ್ಗೆ 6 ರಿಂದ 10 ಗಂಟೆಗಳಲ್ಲಿ 50 ಮಿಮೀ ವರೆಗೆ ಮಳೆಯಾಗಿದೆ. ಇನ್ನು ಈ ಅಕಾಲಿಕ ಮಳೆ ಈಶಾನ್ಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳಲ್ಲಿ ಚಂಡಮಾರುತ ಉಂಟಾದ ಪರಿಣಾಮದಿಂದ ಇದಕ್ಕೆ ಕಾರಣ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಇದನ್ನೂ ಓದಿ; ಮಹಾರಾಷ್ಟ್ರ: ಸಿಡಿಲು ಬಡಿದು ಕಟ್ಟಡಕ್ಕೆ ಹೊತ್ತಿಕೊಂಡ ಬೆಂಕಿ, ಪಾಲ್ಘಡದಲ್ಲಿ ಓರ್ವ ಸಾವು

ದಕ್ಷಿಣ ಗುಜರಾತ್ ಮತ್ತು ಸೌರಾಷ್ಟ್ರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸೋಮವಾರವೂ ಮಳೆಯಾಗಲಿದೆ ಎಂದು ಹವಾಮಾನ ಮೇಲ್ವಿಚಾರಣಾ ಸಂಸ್ಥೆ ಮುನ್ಸೂಚನೆ ನೀಡಿದೆ. ಮಂಗಳವಾರದಿಂದ ರಾಜ್ಯವು ಶುಷ್ಕ ಹವಾಮಾನವನ್ನು ಅನುಭವಿಸುವ ನಿರೀಕ್ಷೆಯಿದೆ ಎಂದು IMD ವರದಿ ನೀಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ