AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ತಾಯಿಗೆ ಕೊರೊನಾ ಲಸಿಕೆ; ಅರ್ಹರೆಲ್ಲರೂ ಲಸಿಕೆ ಪಡೆಯಿರಿ ಎಂದು ಕರೆ ನೀಡಿದ ಪ್ರಧಾನಿ

ನನ್ನ ತಾಯಿ ಕೊರೊನಾ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದ್ದಾರೆ ಎಂಬ ವಿಷಯವನ್ನು ಹಂಚಿಕೊಳ್ಳಲು ಸಂತಸವಾಗುತ್ತಿದೆ. ನೀವೂ ನಿಮ್ಮ ಸುತ್ತಮುತ್ತಲಿರುವ ಅರ್ಹ ವ್ಯಕ್ತಿಗಳಿಗೆ ಕೊರೊನಾ ಲಸಿಕೆ ಸ್ವೀಕರಿಸುವಂತೆ ಪ್ರೇರೇಪಿಸಬೇಕು ಎಂದು ಎಲ್ಲರ ಬಳಿ ಕೋರಿಕೊಳ್ಳುತ್ತೇನೆ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ನರೇಂದ್ರ ಮೋದಿ ತಾಯಿಗೆ ಕೊರೊನಾ ಲಸಿಕೆ; ಅರ್ಹರೆಲ್ಲರೂ ಲಸಿಕೆ ಪಡೆಯಿರಿ ಎಂದು ಕರೆ ನೀಡಿದ ಪ್ರಧಾನಿ
ನರೇಂದ್ರ ಮೋದಿ, ಹೀರಾಬೆನ್​ ಮೋದಿ
Skanda
| Edited By: ರಶ್ಮಿ ಕಲ್ಲಕಟ್ಟ|

Updated on: Mar 11, 2021 | 4:36 PM

Share

ದೆಹಲಿ: ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭವಾಗಿ ಎರಡು ತಿಂಗಳಾಗುತ್ತಾ ಬಂದಿದೆ. ಇತ್ತೀಚೆಗಷ್ಟೇ ಮತ್ತೊಂದು ಹಂತದ ಲಸಿಕೆ ಅಭಿಯಾನ ಆರಂಭಿಸಲಾಗಿದ್ದು, ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿ ಲಸಿಕೆ ಪಡೆಯುವ ಮೂಲಕ ಜನಸಾಮಾನ್ಯರಿಗೆ ಧೈರ್ಯ ತುಂಬಿದ್ದಾರೆ. ಇದೀಗ ಪ್ರಧಾನಿಯವರ ತಾಯಿ ಹೀರಾಬೆನ್ ಸಹ ಕೊರೊನಾ ಲಸಿಕೆ ಸ್ವೀಕರಿಸಿದ್ದು, ಈ ವಿಷಯವನ್ನು ನರೇಂದ್ರ ಮೋದಿ ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಹಂಚಿಕೊಂಡಿದ್ದಾರೆ.

ನನ್ನ ತಾಯಿ ಕೊರೊನಾ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದ್ದಾರೆ ಎಂಬ ವಿಷಯವನ್ನು ಹಂಚಿಕೊಳ್ಳಲು ಸಂತಸವಾಗುತ್ತಿದೆ. ನೀವೂ ನಿಮ್ಮ ಸುತ್ತಮುತ್ತಲಿರುವ ಅರ್ಹ ವ್ಯಕ್ತಿಗಳಿಗೆ ಕೊರೊನಾ ಲಸಿಕೆ ಸ್ವೀಕರಿಸುವಂತೆ ಪ್ರೇರೇಪಿಸಬೇಕು ಎಂದು ಎಲ್ಲರ ಬಳಿ ಕೋರಿಕೊಳ್ಳುತ್ತೇನೆ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಪ್ರಧಾನ ಮಂತ್ರಿಗಳ ಈ ಸಂದೇಶಕ್ಕೆ ಹಲವರು ಮೆಚ್ಚುಗೆ ಸೂಚಿಸಿದ್ದು, ಮೋದಿ ಮತ್ತು ಅವರ ತಾಯಿ ಜೊತೆಯಲ್ಲಿ ಇರುವ ಫೋಟೋಗಳನ್ನು ಕಮೆಂಟ್​ನಲ್ಲಿ ಹಂಚಿಕೊಂಡಿದ್ದಾರೆ.

ಕೊವ್ಯಾಕ್ಸಿನ್​ಗೆ ‘ವೈದ್ಯಕೀಯ ಪ್ರಯೋಗ ಹಂತ’ ಪಟ್ಟದಿಂದ ಮುಕ್ತಿ ಭಾರತೀಯ ಸಂಸ್ಥೆ ಭಾರತ್​ ಬಯೋಟೆಕ್​ ತಯಾರಿಸಿದ ಕೊವ್ಯಾಕ್ಸಿನ್​ ಲಸಿಕೆಗೆ ಅಂತಿಮವಾಗಿ ವೈದ್ಯಕೀಯ ಪ್ರಯೋಗ ಹಂತದಲ್ಲಿರುವ ಲಸಿಕೆ ಎಂಬ ಪಟ್ಟದಿಂದ ಮುಕ್ತಿ ಸಿಕ್ಕಿದೆ. ಕೊವ್ಯಾಕ್ಸಿನ್​ ಲಸಿಕೆ ವಿತರಣೆಗೆ ಸರ್ಕಾರ ಅನುಮತಿ ಸೂಚಿಸಿದ ಸಂದರ್ಭದಲ್ಲಿ ಇದೇ ವಿಚಾರವನ್ನಿಟ್ಟುಕೊಂಡು ಹಲವರು ಕಟುವಾಗಿ ಟೀಕಿಸಿದ್ದರು ಹಾಗೂ ಲಸಿಕೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದರು. ವೈದ್ಯಕೀಯ ಪ್ರಯೋಗ ಹಂತದಲ್ಲಿರುವ ಲಸಿಕೆಯನ್ನು ಜನರಿಗೆ ನೀಡಿದ ನಂತರ ಏನಾದರೂ ಹೆಚ್ಚೂಕಡಿಮೆ ಆದರೆ ಯಾರು ಗತಿ ಎಂಬ ಆತಂಕ ಅನೇಕರನ್ನು ಕಾಡಿತ್ತು. ಆದರೂ ಸರ್ಕಾರ, ಸಂಸ್ಥೆ ಮತ್ತು ಕೆಲ ತಜ್ಞರು ಲಸಿಕೆಯ ವಿಶ್ವಾಸಾರ್ಹತೆ ಬಗ್ಗೆ ಅನುಮಾನ ಬೇಡ ಎಂದು ಪದೇ ಪದೇ ಧೈರ್ಯ ತುಂಬುತ್ತಲೇ ಬಂದಿದ್ದರು.

ಇದೀಗ, ಕೊವ್ಯಾಕ್ಸಿನ್​ ಲಸಿಕೆಯನ್ನು ವೈದ್ಯಕೀಯ ಪ್ರಯೋಗ ಹಂತದಿಂದ ತೆಗೆಯಲು ಮಾಡಿದ್ದ ವಿಷಯ ತಜ್ಞರ ಸಮಿತಿ ಶಿಫಾರಸನ್ನು ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶನ (DCGI) ಒಪ್ಪಿಕೊಂಡಿದೆ. ಈ ಬಗ್ಗೆ ಭಾರತ್ ಬಯೋಟೆಕ್​ ಸಂಸ್ಥೆಗೆ ಮಾಹಿತಿಯನ್ನೂ ನೀಡಲಾಗಿದ್ದು, ಕೊವ್ಯಾಕ್ಸಿನ್ ಲಸಿಕೆ ವೈದ್ಯಕೀಯ ಪ್ರಯೋಗದ ಹಂತದಲ್ಲಿದೆ ಎನ್ನುವುದನ್ನು ತೆಗೆಯಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿರುವುದಾಗಿ ತಿಳಿಸಲಾಗಿದೆ.

ಇದನ್ನೂ ಓದಿ: ಜಾಹೀರಾತು ಫಲಕ ಅಳವಡಿಸಿ ಭಾರತ, ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಅರ್ಪಿಸಿದ ಕೆನಡಾ

ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೊವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ನರೇಂದ್ರ ಮೋದಿಯವರ ಫೋಟೊ ಅಳಿಸಲಿದೆ ಆರೋಗ್ಯ ಸಚಿವಾಲಯ

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ