Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ತಾಯಿಗೆ ಕೊರೊನಾ ಲಸಿಕೆ; ಅರ್ಹರೆಲ್ಲರೂ ಲಸಿಕೆ ಪಡೆಯಿರಿ ಎಂದು ಕರೆ ನೀಡಿದ ಪ್ರಧಾನಿ

ನನ್ನ ತಾಯಿ ಕೊರೊನಾ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದ್ದಾರೆ ಎಂಬ ವಿಷಯವನ್ನು ಹಂಚಿಕೊಳ್ಳಲು ಸಂತಸವಾಗುತ್ತಿದೆ. ನೀವೂ ನಿಮ್ಮ ಸುತ್ತಮುತ್ತಲಿರುವ ಅರ್ಹ ವ್ಯಕ್ತಿಗಳಿಗೆ ಕೊರೊನಾ ಲಸಿಕೆ ಸ್ವೀಕರಿಸುವಂತೆ ಪ್ರೇರೇಪಿಸಬೇಕು ಎಂದು ಎಲ್ಲರ ಬಳಿ ಕೋರಿಕೊಳ್ಳುತ್ತೇನೆ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ನರೇಂದ್ರ ಮೋದಿ ತಾಯಿಗೆ ಕೊರೊನಾ ಲಸಿಕೆ; ಅರ್ಹರೆಲ್ಲರೂ ಲಸಿಕೆ ಪಡೆಯಿರಿ ಎಂದು ಕರೆ ನೀಡಿದ ಪ್ರಧಾನಿ
ನರೇಂದ್ರ ಮೋದಿ, ಹೀರಾಬೆನ್​ ಮೋದಿ
Follow us
Skanda
| Updated By: ರಶ್ಮಿ ಕಲ್ಲಕಟ್ಟ

Updated on: Mar 11, 2021 | 4:36 PM

ದೆಹಲಿ: ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭವಾಗಿ ಎರಡು ತಿಂಗಳಾಗುತ್ತಾ ಬಂದಿದೆ. ಇತ್ತೀಚೆಗಷ್ಟೇ ಮತ್ತೊಂದು ಹಂತದ ಲಸಿಕೆ ಅಭಿಯಾನ ಆರಂಭಿಸಲಾಗಿದ್ದು, ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿ ಲಸಿಕೆ ಪಡೆಯುವ ಮೂಲಕ ಜನಸಾಮಾನ್ಯರಿಗೆ ಧೈರ್ಯ ತುಂಬಿದ್ದಾರೆ. ಇದೀಗ ಪ್ರಧಾನಿಯವರ ತಾಯಿ ಹೀರಾಬೆನ್ ಸಹ ಕೊರೊನಾ ಲಸಿಕೆ ಸ್ವೀಕರಿಸಿದ್ದು, ಈ ವಿಷಯವನ್ನು ನರೇಂದ್ರ ಮೋದಿ ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಹಂಚಿಕೊಂಡಿದ್ದಾರೆ.

ನನ್ನ ತಾಯಿ ಕೊರೊನಾ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದ್ದಾರೆ ಎಂಬ ವಿಷಯವನ್ನು ಹಂಚಿಕೊಳ್ಳಲು ಸಂತಸವಾಗುತ್ತಿದೆ. ನೀವೂ ನಿಮ್ಮ ಸುತ್ತಮುತ್ತಲಿರುವ ಅರ್ಹ ವ್ಯಕ್ತಿಗಳಿಗೆ ಕೊರೊನಾ ಲಸಿಕೆ ಸ್ವೀಕರಿಸುವಂತೆ ಪ್ರೇರೇಪಿಸಬೇಕು ಎಂದು ಎಲ್ಲರ ಬಳಿ ಕೋರಿಕೊಳ್ಳುತ್ತೇನೆ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಪ್ರಧಾನ ಮಂತ್ರಿಗಳ ಈ ಸಂದೇಶಕ್ಕೆ ಹಲವರು ಮೆಚ್ಚುಗೆ ಸೂಚಿಸಿದ್ದು, ಮೋದಿ ಮತ್ತು ಅವರ ತಾಯಿ ಜೊತೆಯಲ್ಲಿ ಇರುವ ಫೋಟೋಗಳನ್ನು ಕಮೆಂಟ್​ನಲ್ಲಿ ಹಂಚಿಕೊಂಡಿದ್ದಾರೆ.

ಕೊವ್ಯಾಕ್ಸಿನ್​ಗೆ ‘ವೈದ್ಯಕೀಯ ಪ್ರಯೋಗ ಹಂತ’ ಪಟ್ಟದಿಂದ ಮುಕ್ತಿ ಭಾರತೀಯ ಸಂಸ್ಥೆ ಭಾರತ್​ ಬಯೋಟೆಕ್​ ತಯಾರಿಸಿದ ಕೊವ್ಯಾಕ್ಸಿನ್​ ಲಸಿಕೆಗೆ ಅಂತಿಮವಾಗಿ ವೈದ್ಯಕೀಯ ಪ್ರಯೋಗ ಹಂತದಲ್ಲಿರುವ ಲಸಿಕೆ ಎಂಬ ಪಟ್ಟದಿಂದ ಮುಕ್ತಿ ಸಿಕ್ಕಿದೆ. ಕೊವ್ಯಾಕ್ಸಿನ್​ ಲಸಿಕೆ ವಿತರಣೆಗೆ ಸರ್ಕಾರ ಅನುಮತಿ ಸೂಚಿಸಿದ ಸಂದರ್ಭದಲ್ಲಿ ಇದೇ ವಿಚಾರವನ್ನಿಟ್ಟುಕೊಂಡು ಹಲವರು ಕಟುವಾಗಿ ಟೀಕಿಸಿದ್ದರು ಹಾಗೂ ಲಸಿಕೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದರು. ವೈದ್ಯಕೀಯ ಪ್ರಯೋಗ ಹಂತದಲ್ಲಿರುವ ಲಸಿಕೆಯನ್ನು ಜನರಿಗೆ ನೀಡಿದ ನಂತರ ಏನಾದರೂ ಹೆಚ್ಚೂಕಡಿಮೆ ಆದರೆ ಯಾರು ಗತಿ ಎಂಬ ಆತಂಕ ಅನೇಕರನ್ನು ಕಾಡಿತ್ತು. ಆದರೂ ಸರ್ಕಾರ, ಸಂಸ್ಥೆ ಮತ್ತು ಕೆಲ ತಜ್ಞರು ಲಸಿಕೆಯ ವಿಶ್ವಾಸಾರ್ಹತೆ ಬಗ್ಗೆ ಅನುಮಾನ ಬೇಡ ಎಂದು ಪದೇ ಪದೇ ಧೈರ್ಯ ತುಂಬುತ್ತಲೇ ಬಂದಿದ್ದರು.

ಇದೀಗ, ಕೊವ್ಯಾಕ್ಸಿನ್​ ಲಸಿಕೆಯನ್ನು ವೈದ್ಯಕೀಯ ಪ್ರಯೋಗ ಹಂತದಿಂದ ತೆಗೆಯಲು ಮಾಡಿದ್ದ ವಿಷಯ ತಜ್ಞರ ಸಮಿತಿ ಶಿಫಾರಸನ್ನು ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶನ (DCGI) ಒಪ್ಪಿಕೊಂಡಿದೆ. ಈ ಬಗ್ಗೆ ಭಾರತ್ ಬಯೋಟೆಕ್​ ಸಂಸ್ಥೆಗೆ ಮಾಹಿತಿಯನ್ನೂ ನೀಡಲಾಗಿದ್ದು, ಕೊವ್ಯಾಕ್ಸಿನ್ ಲಸಿಕೆ ವೈದ್ಯಕೀಯ ಪ್ರಯೋಗದ ಹಂತದಲ್ಲಿದೆ ಎನ್ನುವುದನ್ನು ತೆಗೆಯಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿರುವುದಾಗಿ ತಿಳಿಸಲಾಗಿದೆ.

ಇದನ್ನೂ ಓದಿ: ಜಾಹೀರಾತು ಫಲಕ ಅಳವಡಿಸಿ ಭಾರತ, ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಅರ್ಪಿಸಿದ ಕೆನಡಾ

ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೊವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ನರೇಂದ್ರ ಮೋದಿಯವರ ಫೋಟೊ ಅಳಿಸಲಿದೆ ಆರೋಗ್ಯ ಸಚಿವಾಲಯ

ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ