AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ತಾಯಿಗೆ ಕೊರೊನಾ ಲಸಿಕೆ; ಅರ್ಹರೆಲ್ಲರೂ ಲಸಿಕೆ ಪಡೆಯಿರಿ ಎಂದು ಕರೆ ನೀಡಿದ ಪ್ರಧಾನಿ

ನನ್ನ ತಾಯಿ ಕೊರೊನಾ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದ್ದಾರೆ ಎಂಬ ವಿಷಯವನ್ನು ಹಂಚಿಕೊಳ್ಳಲು ಸಂತಸವಾಗುತ್ತಿದೆ. ನೀವೂ ನಿಮ್ಮ ಸುತ್ತಮುತ್ತಲಿರುವ ಅರ್ಹ ವ್ಯಕ್ತಿಗಳಿಗೆ ಕೊರೊನಾ ಲಸಿಕೆ ಸ್ವೀಕರಿಸುವಂತೆ ಪ್ರೇರೇಪಿಸಬೇಕು ಎಂದು ಎಲ್ಲರ ಬಳಿ ಕೋರಿಕೊಳ್ಳುತ್ತೇನೆ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ನರೇಂದ್ರ ಮೋದಿ ತಾಯಿಗೆ ಕೊರೊನಾ ಲಸಿಕೆ; ಅರ್ಹರೆಲ್ಲರೂ ಲಸಿಕೆ ಪಡೆಯಿರಿ ಎಂದು ಕರೆ ನೀಡಿದ ಪ್ರಧಾನಿ
ನರೇಂದ್ರ ಮೋದಿ, ಹೀರಾಬೆನ್​ ಮೋದಿ
Skanda
| Edited By: |

Updated on: Mar 11, 2021 | 4:36 PM

Share

ದೆಹಲಿ: ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭವಾಗಿ ಎರಡು ತಿಂಗಳಾಗುತ್ತಾ ಬಂದಿದೆ. ಇತ್ತೀಚೆಗಷ್ಟೇ ಮತ್ತೊಂದು ಹಂತದ ಲಸಿಕೆ ಅಭಿಯಾನ ಆರಂಭಿಸಲಾಗಿದ್ದು, ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿ ಲಸಿಕೆ ಪಡೆಯುವ ಮೂಲಕ ಜನಸಾಮಾನ್ಯರಿಗೆ ಧೈರ್ಯ ತುಂಬಿದ್ದಾರೆ. ಇದೀಗ ಪ್ರಧಾನಿಯವರ ತಾಯಿ ಹೀರಾಬೆನ್ ಸಹ ಕೊರೊನಾ ಲಸಿಕೆ ಸ್ವೀಕರಿಸಿದ್ದು, ಈ ವಿಷಯವನ್ನು ನರೇಂದ್ರ ಮೋದಿ ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಹಂಚಿಕೊಂಡಿದ್ದಾರೆ.

ನನ್ನ ತಾಯಿ ಕೊರೊನಾ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದ್ದಾರೆ ಎಂಬ ವಿಷಯವನ್ನು ಹಂಚಿಕೊಳ್ಳಲು ಸಂತಸವಾಗುತ್ತಿದೆ. ನೀವೂ ನಿಮ್ಮ ಸುತ್ತಮುತ್ತಲಿರುವ ಅರ್ಹ ವ್ಯಕ್ತಿಗಳಿಗೆ ಕೊರೊನಾ ಲಸಿಕೆ ಸ್ವೀಕರಿಸುವಂತೆ ಪ್ರೇರೇಪಿಸಬೇಕು ಎಂದು ಎಲ್ಲರ ಬಳಿ ಕೋರಿಕೊಳ್ಳುತ್ತೇನೆ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಪ್ರಧಾನ ಮಂತ್ರಿಗಳ ಈ ಸಂದೇಶಕ್ಕೆ ಹಲವರು ಮೆಚ್ಚುಗೆ ಸೂಚಿಸಿದ್ದು, ಮೋದಿ ಮತ್ತು ಅವರ ತಾಯಿ ಜೊತೆಯಲ್ಲಿ ಇರುವ ಫೋಟೋಗಳನ್ನು ಕಮೆಂಟ್​ನಲ್ಲಿ ಹಂಚಿಕೊಂಡಿದ್ದಾರೆ.

ಕೊವ್ಯಾಕ್ಸಿನ್​ಗೆ ‘ವೈದ್ಯಕೀಯ ಪ್ರಯೋಗ ಹಂತ’ ಪಟ್ಟದಿಂದ ಮುಕ್ತಿ ಭಾರತೀಯ ಸಂಸ್ಥೆ ಭಾರತ್​ ಬಯೋಟೆಕ್​ ತಯಾರಿಸಿದ ಕೊವ್ಯಾಕ್ಸಿನ್​ ಲಸಿಕೆಗೆ ಅಂತಿಮವಾಗಿ ವೈದ್ಯಕೀಯ ಪ್ರಯೋಗ ಹಂತದಲ್ಲಿರುವ ಲಸಿಕೆ ಎಂಬ ಪಟ್ಟದಿಂದ ಮುಕ್ತಿ ಸಿಕ್ಕಿದೆ. ಕೊವ್ಯಾಕ್ಸಿನ್​ ಲಸಿಕೆ ವಿತರಣೆಗೆ ಸರ್ಕಾರ ಅನುಮತಿ ಸೂಚಿಸಿದ ಸಂದರ್ಭದಲ್ಲಿ ಇದೇ ವಿಚಾರವನ್ನಿಟ್ಟುಕೊಂಡು ಹಲವರು ಕಟುವಾಗಿ ಟೀಕಿಸಿದ್ದರು ಹಾಗೂ ಲಸಿಕೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದರು. ವೈದ್ಯಕೀಯ ಪ್ರಯೋಗ ಹಂತದಲ್ಲಿರುವ ಲಸಿಕೆಯನ್ನು ಜನರಿಗೆ ನೀಡಿದ ನಂತರ ಏನಾದರೂ ಹೆಚ್ಚೂಕಡಿಮೆ ಆದರೆ ಯಾರು ಗತಿ ಎಂಬ ಆತಂಕ ಅನೇಕರನ್ನು ಕಾಡಿತ್ತು. ಆದರೂ ಸರ್ಕಾರ, ಸಂಸ್ಥೆ ಮತ್ತು ಕೆಲ ತಜ್ಞರು ಲಸಿಕೆಯ ವಿಶ್ವಾಸಾರ್ಹತೆ ಬಗ್ಗೆ ಅನುಮಾನ ಬೇಡ ಎಂದು ಪದೇ ಪದೇ ಧೈರ್ಯ ತುಂಬುತ್ತಲೇ ಬಂದಿದ್ದರು.

ಇದೀಗ, ಕೊವ್ಯಾಕ್ಸಿನ್​ ಲಸಿಕೆಯನ್ನು ವೈದ್ಯಕೀಯ ಪ್ರಯೋಗ ಹಂತದಿಂದ ತೆಗೆಯಲು ಮಾಡಿದ್ದ ವಿಷಯ ತಜ್ಞರ ಸಮಿತಿ ಶಿಫಾರಸನ್ನು ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶನ (DCGI) ಒಪ್ಪಿಕೊಂಡಿದೆ. ಈ ಬಗ್ಗೆ ಭಾರತ್ ಬಯೋಟೆಕ್​ ಸಂಸ್ಥೆಗೆ ಮಾಹಿತಿಯನ್ನೂ ನೀಡಲಾಗಿದ್ದು, ಕೊವ್ಯಾಕ್ಸಿನ್ ಲಸಿಕೆ ವೈದ್ಯಕೀಯ ಪ್ರಯೋಗದ ಹಂತದಲ್ಲಿದೆ ಎನ್ನುವುದನ್ನು ತೆಗೆಯಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿರುವುದಾಗಿ ತಿಳಿಸಲಾಗಿದೆ.

ಇದನ್ನೂ ಓದಿ: ಜಾಹೀರಾತು ಫಲಕ ಅಳವಡಿಸಿ ಭಾರತ, ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಅರ್ಪಿಸಿದ ಕೆನಡಾ

ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೊವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ನರೇಂದ್ರ ಮೋದಿಯವರ ಫೋಟೊ ಅಳಿಸಲಿದೆ ಆರೋಗ್ಯ ಸಚಿವಾಲಯ

Follow Us
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!