AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heeralal Samariya: ಕೇಂದ್ರ ಮಾಹಿತಿ ಆಯೋಗದ ಮುಖ್ಯ ಆಯುಕ್ತರಾಗಿ ಹೀರಾಲಾಲ್ ಸಾಮರಿಯಾ ಅಧಿಕಾರ ಸ್ವೀಕಾರ

ಕೇಂದ್ರ ಮಾಹಿತಿ ಆಯೋಗದ ನೂತನ ಮುಖ್ಯ ಆಯುಕ್ತರಾಗಿ ಹೀರಾಲಾಲ್ ಸಾಮರಿಯಾ(Heeralal Samariya)  ಅಧಿಕಾರವಹಿಸಿಕೊಂಡಿದ್ದಾರೆ. ವೈಕೆ ಸಿನ್ಹಾ ಅವರ ಅಧಿಕಾರಾವಧಿ ಅಕ್ಟೋಬರ್ 3 ರಂದು ಕೊನೆಗೊಂಡ ನಂತರ ಈ ಉನ್ನತ ಹುದ್ದೆ ಖಾಲಿಯಾಗಿತ್ತು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾಮರಿಯಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

Heeralal Samariya: ಕೇಂದ್ರ ಮಾಹಿತಿ ಆಯೋಗದ ಮುಖ್ಯ ಆಯುಕ್ತರಾಗಿ ಹೀರಾಲಾಲ್ ಸಾಮರಿಯಾ ಅಧಿಕಾರ ಸ್ವೀಕಾರ
ಹೀರಾಲಾಲ್ ಸಾಮರಿಯಾImage Credit source: NDTV
ನಯನಾ ರಾಜೀವ್
|

Updated on: Nov 06, 2023 | 12:08 PM

Share

ಕೇಂದ್ರ ಮಾಹಿತಿ ಆಯೋಗದ ನೂತನ ಮುಖ್ಯ ಆಯುಕ್ತರಾಗಿ ಹೀರಾಲಾಲ್ ಸಾಮರಿಯಾ(Heeralal Samariya)  ಅಧಿಕಾರವಹಿಸಿಕೊಂಡಿದ್ದಾರೆ. ವೈಕೆ ಸಿನ್ಹಾ ಅವರ ಅಧಿಕಾರಾವಧಿ ಅಕ್ಟೋಬರ್ 3 ರಂದು ಕೊನೆಗೊಂಡ ನಂತರ ಈ ಉನ್ನತ ಹುದ್ದೆ ಖಾಲಿಯಾಗಿತ್ತು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾಮರಿಯಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಹೀರಾಲಾಲ್ ಸಾಮರಿಯಾ ಅವರು ದೇಶದ ಮೊದಲ ದಲಿತ ಮುಖ್ಯ ಮಾಹಿತಿ ಆಯುಕ್ತರು ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸಾಮರಿಯಾ ಅವರು ಮುಖ್ಯ ಮಾಹಿತಿ ಆಯುಕ್ತರಾಗಿ ನೇಮಕಗೊಂಡ ನಂತರ ಎಂಟು ಮಾಹಿತಿ ಆಯುಕ್ತರ ಹುದ್ದೆಗಳು ಖಾಲಿ ಇವೆ. ಸದ್ಯ ಆಯೋಗದಲ್ಲಿ ಇಬ್ಬರು ಮಾಹಿತಿ ಆಯುಕ್ತರಿದ್ದಾರೆ.

ಅಕ್ಟೋಬರ್ 30 ರಂದು ಸುಪ್ರೀಂ ಕೋರ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಿದ ನಂತರ ನೇಮಕ ಪ್ರಕ್ರಿಯೆ ನಡೆದಿತ್ತು. ರಾಜಸ್ಥಾನದ ಭರತ್‌ಪುರ ಜಿಲ್ಲೆಯ ನಿವಾಸಿ ಸಾಮರಿಯಾ, 1985ರ ಬ್ಯಾಚ್‌ನ ಐಎಎಸ್ ಅಧಿಕಾರಿ.

ಸಿಐಸಿ ಮತ್ತು ರಾಜ್ಯ ಮಾಹಿತಿ ಆಯೋಗಗಳಲ್ಲಿ (ಎಸ್‌ಐಸಿ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು.

ಇದು ಆಗದಿದ್ದಲ್ಲಿ ಮಾಹಿತಿ ಹಕ್ಕು ಕಾಯ್ದೆ ನಿಷ್ಪರಿಣಾಮಕಾರಿಯಾಗಲಿದೆ ಎಂದು ನ್ಯಾಯಾಲಯ ಅಕ್ಟೋಬರ್ 30ರಂದು ಹೇಳಿತ್ತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ಪೀಠವು ಮಂಜೂರಾದ ಹುದ್ದೆಗಳು, ರಾಜ್ಯ ಮಾಹಿತಿ ಆಯೋಗಗಳಲ್ಲಿನ ಖಾಲಿ ಹುದ್ದೆಗಳು ಮತ್ತು ಅಲ್ಲಿ ಬಾಕಿ ಉಳಿದಿರುವ ಒಟ್ಟು ಪ್ರಕರಣಗಳು ಸೇರಿದಂತೆ ಹಲವು ಅಂಶಗಳ ಕುರಿತು ಎಲ್ಲಾ ರಾಜ್ಯಗಳಿಂದ ಮಾಹಿತಿ ಸಂಗ್ರಹಿಸಲು ಡಿಒಪಿಟಿಗೆ ಸೂಚಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?