AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಟ್​ಬುಲ್​ನಿಂದ ಡೆಲಿವರಿ ಮ್ಯಾನ್ ದಾಳಿ; ಕಾಪಾಡಿ ಎಂದು ಅಳುತ್ತಾ ಕಾರಿನ ಮೇಲೆ ಹತ್ತಿದ ಯುವಕ

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಭಯಾನಕ ಘಟನೆಯೊಂದರಲ್ಲಿ ಎರಡು ಪಿಟ್‌ಬುಲ್ ನಾಯಿಗಳು ಛತ್ತೀಸ್‌ಗಢದ ರಾಯ್‌ಪುರದಲ್ಲಿ ಫುಡ್ ಡೆಲಿವರಿ ಮಾಡುತ್ತಿದ್ದ ವ್ಯಕ್ತಿಯ ಮೇಲೆ ದಾಳಿ ಮಾಡಿವೆ. ಖಮರ್ದಿಹ್ ಪೊಲೀಸ್ ಠಾಣೆ ವ್ಯಾಪ್ತಿಯ ಅನುಪಮ್ ನಗರದಲ್ಲಿ ಇಂದು ಈ ಘಟನೆ ನಡೆದಿದೆ.

ಪಿಟ್​ಬುಲ್​ನಿಂದ ಡೆಲಿವರಿ ಮ್ಯಾನ್ ದಾಳಿ; ಕಾಪಾಡಿ ಎಂದು ಅಳುತ್ತಾ ಕಾರಿನ ಮೇಲೆ ಹತ್ತಿದ ಯುವಕ
ಪಿಟ್​ಬುಲ್​ನಿಂದ ಡೆಲಿವರಿ ಮ್ಯಾನ್ ದಾಳಿ
ಸುಷ್ಮಾ ಚಕ್ರೆ
| Edited By: |

Updated on:Jul 18, 2024 | 4:37 PM

Share

ಎರಡು ಪಿಟ್‌ಬುಲ್‌ ನಾಯಿಗಳು ಡೆಲಿವರಿ ಬಾಯ್ ಮೇಲೆ ದಾಳಿ ಮಾಡಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆ ನಾಯಿಗಳು ಡೆಲಿವರಿ ಮ್ಯಾನ್ ಸಲ್ಮಾನ್ ಖಾನ್​ನನ್ನು ಹಿಂಬಾಲಿಸಿದಾಗ ಕಂಗಾಲಾದ ಅವರು ಕಾರಿನ ಮೇಲೆ ಹತತ್ಇ ಕುಳಿತು ಹೆಲ್ಪ್ ಹೆಲ್ಪ್ ಎಂದು ಕೂಗಿದ್ದಾರೆ. ನಾಯಿಗಳು ಕಚ್ಚಿದ್ದರಿಂದ ಅವರನ್ನು ವೈದ್ಯರ ಬಳಿ ಕರೆದುಕೊಂಡು ಹೋಗಲಾಗಿದೆ.

ವೈರಲ್ ವಿಡಿಯೋದಲ್ಲಿ ಸಲ್ಮಾನ್‌ಗೆ ನಾಯಿಗಳು ಕಚ್ಚಿದ್ದು, ನೋವಿನಿಂದ ಒದ್ದಾಡುತ್ತಿರುವುದು, ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವುದು ಕಂಡುಬಂದಿದೆ. ದುಃಖಕರವೆಂದರೆ ಅವರ ಸಹಾಯಕ್ಕೆ ಯಾರೂ ಬರಲಿಲ್ಲ. ಕೊನೆಗೂ ಆ ಮನೆಯಿಂದ ಅವರು ಹೊರಗೆ ಬರಲು ಯಶಸ್ವಿಯಾದರು. ತನ್ನನ್ನು ಉಳಿಸಿಕೊಳ್ಳಲು ಮನೆಯ ಹೊರಗೆ ನಿಲ್ಲಿಸಿದ ಕಾರಿನ ಮೇಲೆ ಹತ್ತಿ ಕುಳಿತಿದ್ದಾರೆ. ನಾಯಿಗಳು ಹೋದ ನಂತರ ವ್ಯಕ್ತಿಯೊಬ್ಬರು ನೀರಿನ ಬಾಟಲಿಯನ್ನು ಅವರಿಗೆ ನೀಡಿದ್ದಾರೆ. ಆಗ ಸಲ್ಮಾನ್ ಅವರ ಕೈ ಮತ್ತು ಕಾಲುಗಳಿಂದ ರಕ್ತ ಸುರಿಯುತ್ತಿದ್ದು, ಸಹಾಯ ಮಾಡುವಂತೆ ಮನವಿ ಮಾಡುವುದನ್ನು ಕಾಣಬಹುದು.

ಇದನ್ನೂ ಓದಿ: Viral Video: ಕೇರಳದ ದೇವಾಲಯಕ್ಕೆ ಸೀರೆಯುಟ್ಟ ವಿದೇಶಿ ಮಹಿಳೆಗೆ ನಿರ್ಬಂಧ; ವಿಡಿಯೋ ವೈರಲ್

ಈ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಒಬ್ಬ ಬಳಕೆದಾರರು, “ನಾಯಿ ಮಾಲೀಕರನ್ನು ಜೈಲಿನಲ್ಲಿಡಬೇಕು. ಡೆಲಿವರಿ ಮ್ಯಾನ್​ಗೆ ವೈದ್ಯಕೀಯ ಶುಲ್ಕವನ್ನು ಮಾಲೀಕರೇ ಪಾವತಿಸಬೇಕು” ಎಂದು ಕಾಮೆಂಟ್ ಮಾಡಿದ್ದಾರೆ. ಇಂತಹ ಕ್ರೂರ ನಾಯಿಯನ್ನು ಮನೆಯೊಳಗೆ ಕಟ್ಟಲು ಆಗುವುದಿಲ್ಲವೇ? ಎಂದು ಇನ್ನೊಬ್ಬರು ಕಮೆಂಟ್ ಮಾಡಿದ್ದಾರೆ.

ಈಟಿವಿ ಭಾರತ್ ವರದಿ ಪ್ರಕಾರ, “ಸಂಧ್ಯಾ ರಾವ್ ಎಂಬ ಮಹಿಳೆ ಇಲ್ಲಿ ವಾಸಿಸುತ್ತಿದ್ದಾರೆ. ಅವರು ವೃತ್ತಿಯಲ್ಲಿ ವೈದ್ಯರಾಗಿದ್ದಾರೆ. ಡಾ. ಸಂಧ್ಯಾ ರಾವ್ ತಮ್ಮ ಮನೆಯಲ್ಲಿ 3 ನಾಯಿಗಳನ್ನು ಸಾಕಿದ್ದಾರೆ. ಮೂರು ನಾಯಿಗಳಲ್ಲಿ ಎರಡು ನಾಯಿಗಳು ಪಿಟ್‌ಬುಲ್ ತಳಿಯಾಗಿದ್ದು, ಇಂದು ಸಂಧ್ಯಾ ರಾವ್ ಅವರ ಮನೆಗೆ ಬಂದಿದ್ದ ಡೆಲಿವರಿ ಬಾಯ್ ಮೇಲೆ 2 ಪಿಟ್‌ಬುಲ್ ನಾಯಿಗಳು ದಾಳಿ ನಡೆಸಿವೆ. ಅವು ಡೆಲಿವರಿ ಬಾಯ್‌ನ ಕೈ ಮತ್ತು ಕಾಲುಗಳಿಗೆ ಕಚ್ಚಿವೆ.”

ಇದನ್ನೂ ಓದಿ: Viral Video: ಹಸು ಎಂದುಕೊಂಡು ಎಮ್ಮೆಗೆ 10 ಕೆಜಿ ಚಿನ್ನದ ಸರ ಹಾಕಿದ ಮಾಲೀಕ; ಇಂಟರ್ನೆಟ್​ನಲ್ಲಿ ವಿಡಿಯೋ ವೈರಲ್

ಡಾ. ಸಂಧ್ಯಾ ರಾವ್ ಅವರ ಪಿಟ್ ಬುಲ್ಸ್ ಇದುವರೆಗೆ ಐದು ಜನರ ಮೇಲೆ ದಾಳಿ ನಡೆಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಮನೆ ಬಾಗಿಲು ತೆರೆದಿರುವಾಗ ನಾಯಿಗಳು ಸ್ವಚ್ಛಂದವಾಗಿ ಓಡಾಡುವುದರಿಂದ ಅಕ್ಕಪಕ್ಕದ ಮನೆಯವರು ಭಯದಲ್ಲಿ ಬದುಕುವಂತಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:10 pm, Thu, 18 July 24

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​