AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಲ್ಲಿ ಗಾಯಗೊಂಡವರಿಗೆ ಸಹಾಯ ಮಾಡಿದವರಿಗೆ 5 ಸಾವಿರ ರೂ.ನಗದು ನೀಡುವುದಾಗಿ ತಮಿಳುನಾಡು ಸಿಎಂ ಘೋಷಣೆ

ಸಾಮಾನ್ಯವಾಗಿ ರಸ್ತೆಯಲ್ಲಿ ಯಾರಿಗಾದರೂ ಅಪಘಾತವಾದರೆ, ವಾಹನ ಡಿಕ್ಕಿಯಾಗಿ (Accident) ಬಿದ್ದಿದ್ದರೆ, ತಮ್ಮದೇ ವಾಹನ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದರೆ ಅವರಿಗೆ ಸಹಾಯ ಮಾಡಲು ಮುಂದಾಗುವವರು ತೀರ ಕಡಿಮೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆಯಾದರೂ ಅದೆಷ್ಟೋ ಮಂದಿ ಚಿಕಿತ್ಸೆ ಸಿಗಲು ತಡವಾಗಿ ಸಾಯುತ್ತಾರೆ. ಜನರಿಗೂ ಅಷ್ಟೇ ಹೀಗೆ ಅಪಘಾತದಲ್ಲಿ ಗಾಯಗೊಂಡು ರಕ್ತದ ಮಡುವಲ್ಲಿ ಬಿದ್ದವರನ್ನು ಮುಟ್ಟಲು ಭಯ. ಎಲ್ಲಿ ಕೇಸ್​ ನಮ್ಮ ತಲೆಗೆ ಸುತ್ತಿಕೊಳ್ಳುತ್ತದೋ, ಅವರು ಸತ್ತರೆ ಪೊಲೀಸರು ನಮ್ಮನ್ನು ಹಿಡಿದುಕೊಳ್ಳುತ್ತಾರೆ, […]

ಅಪಘಾತದಲ್ಲಿ ಗಾಯಗೊಂಡವರಿಗೆ ಸಹಾಯ ಮಾಡಿದವರಿಗೆ 5 ಸಾವಿರ ರೂ.ನಗದು ನೀಡುವುದಾಗಿ ತಮಿಳುನಾಡು ಸಿಎಂ ಘೋಷಣೆ
ತಮಿಳುನಾಡು ಸಿಎಂ ಸ್ಟಾಲಿನ್
Follow us
TV9 Web
| Updated By: Lakshmi Hegde

Updated on:Mar 21, 2022 | 5:43 PM

ಸಾಮಾನ್ಯವಾಗಿ ರಸ್ತೆಯಲ್ಲಿ ಯಾರಿಗಾದರೂ ಅಪಘಾತವಾದರೆ, ವಾಹನ ಡಿಕ್ಕಿಯಾಗಿ (Accident) ಬಿದ್ದಿದ್ದರೆ, ತಮ್ಮದೇ ವಾಹನ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದರೆ ಅವರಿಗೆ ಸಹಾಯ ಮಾಡಲು ಮುಂದಾಗುವವರು ತೀರ ಕಡಿಮೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆಯಾದರೂ ಅದೆಷ್ಟೋ ಮಂದಿ ಚಿಕಿತ್ಸೆ ಸಿಗಲು ತಡವಾಗಿ ಸಾಯುತ್ತಾರೆ. ಜನರಿಗೂ ಅಷ್ಟೇ ಹೀಗೆ ಅಪಘಾತದಲ್ಲಿ ಗಾಯಗೊಂಡು ರಕ್ತದ ಮಡುವಲ್ಲಿ ಬಿದ್ದವರನ್ನು ಮುಟ್ಟಲು ಭಯ. ಎಲ್ಲಿ ಕೇಸ್​ ನಮ್ಮ ತಲೆಗೆ ಸುತ್ತಿಕೊಳ್ಳುತ್ತದೋ, ಅವರು ಸತ್ತರೆ ಪೊಲೀಸರು ನಮ್ಮನ್ನು ಹಿಡಿದುಕೊಳ್ಳುತ್ತಾರೆ, ಯಾರಿಗೆ ಬೇಕು ಈ ಜಂಜಾಟ ಎಂದು ಭಾವಿಸಿ, ಪೊಲೀಸರಿಗೆ ಫೋನ್ ಮಾಡಿ ಸುಮ್ಮನೆ ನೋಡುತ್ತ ನಿಲ್ಲುತ್ತಾರೆ. ಇನ್ನು ಕೆಲವೇ ಕೆಲವರು ಮಾತ್ರ ಏನಾದರಾಗಲಿ ಎಂದು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸುತ್ತಾರೆ.

ಈ ಮಧ್ಯೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (MK Stalin) ಮಾಡಿರುವ ಘೋಷಣೆಯೊಂದು ತುಂಬ ವಿಶೇಷ ಎನ್ನಿಸಿದೆ. ರಾಜ್ಯದಲ್ಲಿ ರಸ್ತೆ, ವಾಹನ ಅಪಘಾತವಾದ ಸಂದರ್ಭದಲ್ಲಿ ತೀವ್ರವಾಗಿ ಗಾಯಗೊಂಡವರನ್ನು ಕೂಡಲೇ ಯಾರು ಆಸ್ಪತ್ರೆಗೆ ದಾಖಲು ಮಾಡುತ್ತಾರೋ, ಈ ಮೂಲಕ ಅವರಿಗೆ ಆದಷ್ಟು ಬೇಗ ಚಿಕಿತ್ಸೆ ಸಿಗಲು ಕಾರಣವಾಗುತ್ತಾರೋ ಅವರಿಗೆ ನಗದು ಬಹುಮಾನ ಮತ್ತು ಒಂದು ಶ್ಲಾಘನೆ ಪ್ರಮಾಣ ಪತ್ರ ನೀಡುವುದಾಗಿ ಘೋಷಿಸಿದ್ದಾರೆ.

ಟ್ವೀಟ್ ಮಾಡಿರುವ ಎಂ.ಕೆ.ಸ್ಟಾಲಿನ್​, ಯಾರೇ ಅಪಘಾತಕ್ಕೀಡಾಗಲಿ, ಅವರಿಗೂ ಒಂದು ಗೋಲ್ಡನ್​ ಪೀರಿಯಡ್​ ಅಂತಿರುತ್ತದೆ. ಈ ಅವಧಿಯಲ್ಲಿ ಅವರಿಗೆ ಸೂಕ್ತ ಚಿಕಿತ್ಸೆ ಸಿಕ್ಕರೆ, ಜೀವಕ್ಕೆ ಅಪಾಯ ಆಗುವ ಸಂದರ್ಭ ಕಡಿಮೆ ಇರುತ್ತದೆ. ಆದರೆ ಅದೆಷ್ಟೋ ಜನರು ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಡವಾಗಿಯೇ ಸಾಯುತ್ತಾರೆ. ಹೀಗೆ ಅಪಘಾತಕ್ಕೆ ಒಳಗಾದವರನ್ನು ಆ ಗೋಲ್ಡನ್​ ಪೀರಿಯಡ್​​ನಲ್ಲಿ ಯಾರು ಆಸ್ಪತ್ರೆಗೆ ದಾಖಲಿಸುತ್ತಾರೋ ಅವರಿಗೆ 5 ಸಾವಿರ ರೂಪಾಯಿ ನಗದು ಬಹುಮಾನ, ಪ್ರಮಾಣ ಪತ್ರ ಕೊಡುವುದಾಗಿ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಎಂ.ಕೆ.ಸ್ಟಾಲಿನ್​ ಹೀಗಿದ್ದೇ ಒಂದು ವಿಶೇಷ ಯೋಜನೆ ಘೋಷಿಸಿದ್ದರು. ಅದರಡಿಯಲ್ಲಿ ರಾಜ್ಯದಲ್ಲಿ ಅಪಘಾತಕ್ಕೀಡಾಗಿ ತೀವ್ರ ಗಾಯಗೊಂಡವರಿಗೆ ಮೊದಲ 48 ತಾಸುಗಳ ಚಿಕಿತ್ಸೆಯನ್ನು ನೀಡಲಾಗುವುದು ಎಂದು ಹೇಳಿದ್ದರು. 408 ಖಾಸಗಿ ಮತ್ತು 201 ಸರ್ಕಾರಿ ಆಸ್ಪತ್ರೆಗಳು ಸೇರಿ ಒಟ್ಟು 609 ಆಸ್ಪತ್ರೆಗಳಲ್ಲಿ ಈ ಸೌಲಭ್ಯ ಲಭ್ಯವಿರಲಿದೆ ಎಂದಿದ್ದರು. ಮುಖ್ಯಮಂತ್ರಿಗಳ ಸಮಗ್ರ ಆರೋಗ್ಯ ವಿಮಾ ಯೋಜನೆ (CMCHIS) ಸದಸ್ಯರು ಮತ್ತು ಸದಸ್ಯರಲ್ಲದವರಿಗೂ ಇದು ಅನ್ವಯ ಎಂದು ಹೇಳಿದ್ದರು.

ಇದನ್ನೂ ಓದಿ: China Plane Crash: ವಿಮಾನ ವೇಗವಾಗಿ ಕೆಳಗೆ ಬಿದ್ದ ವಿಡಿಯೋ ವೈರಲ್​; ಪ್ರಯಾಣಿಕರು ಬದುಕುಳಿದ ಯಾವುದೇ ಕುರುಹೂ ಇಲ್ಲ

Published On - 5:42 pm, Mon, 21 March 22

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ