AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಬ್ಲಿಘಿ ಜಮಾತ್​​​ನಲ್ಲಿ ಪಾಲ್ಗೊಂಡಿದ್ದ ವಿದೇಶಿಯರು ತವರಿಗೆ ಮರಳಲು ನೆರವಾಗಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ

ದೇಶದಲ್ಲಿ ಕೊರೊನಾ ವೈರಸ್​ ಹರಡಿದ್ದೇ ತಬ್ಲಿಘಿಯಿಂದ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 36 ವಿದೇಶಿಗರ ವಿರುದ್ಧ ಚಾರ್ಜ್​​ಶೀಟ್​ ಕೂಡ ಸಲ್ಲಿಕೆ ಆಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್​ ಡಿಸೆಂಬರ್ 15ರಂದು ಪ್ರಕರಣವನ್ನು ಖುಲಾಸೆ ಮಾಡಿತ್ತು.

ತಬ್ಲಿಘಿ ಜಮಾತ್​​​ನಲ್ಲಿ ಪಾಲ್ಗೊಂಡಿದ್ದ ವಿದೇಶಿಯರು ತವರಿಗೆ ಮರಳಲು ನೆರವಾಗಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ
ಸುಪ್ರೀಂ ಕೋರ್ಟ್
ರಾಜೇಶ್ ದುಗ್ಗುಮನೆ
| Edited By: |

Updated on: Dec 21, 2020 | 7:19 PM

Share

ನವದೆಹಲಿ: ತಬ್ಲಿಘಿ ಜಮಾತ್​​ನಲ್ಲಿ ಪಾಲ್ಗೊಂಡಿದ್ದ 36 ವಿದೇಶಿಯರ ಮೇಲಿದ್ದ ಮೊಕದ್ದಮೆಯನ್ನು ದೆಹಲಿ ಹೈಕೋರ್ಟ್​​ ಖುಲಾಸೆಗೊಳಿಸಿದ ಬೆನ್ನಲ್ಲೇ ಸುಪ್ರೀಂಕೋರ್ಟ್​ ಕೇಂದ್ರ ಸರ್ಕಾರಕ್ಕೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಈ 36 ವಿದೇಶಿಯರು ಅವರ ದೇಶಗಳಿಗೆ ಹಿಂದಿರುಗಲು ಸಹಾಯ ಮಾಡಿ ಎಂದು ನಿರ್ದೇಶನ ನೀಡಿದೆ.

ಮಾರ್ಚ್​​ನಲ್ಲಿ ಕೊರೊನಾ ವೈರಸ್​ ಭಾರತದಲ್ಲಿ ನಿಧಾನವಾಗಿ ಹಬ್ಬಲು ಆರಂಭಿಸಿತ್ತು. ಆದಾಗ್ಯೂ ದೆಹಲಿಯಲ್ಲಿ ತಬ್ಲಿಘಿ ಜಮಾತ್​ ಕಾರ್ಯಕ್ರಮ ನಡೆಸಲಾಗಿತ್ತು. ಇಲ್ಲಿ ಪಾಲ್ಗೊಂಡಿದ್ದ ಅನೇಕರಿಗೆ ಕೊರೊನಾ ವೈರಸ್​ ಹಬ್ಬಿತ್ತು. ಈ ದೇಶದಲ್ಲಿ ಕೊರೊನಾ ವೈರಸ್​ ಹರಡಿದ್ದೇ ಇವರಿಂದ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 36 ವಿದೇಶಿಗರ ವಿರುದ್ಧ ಚಾರ್ಜ್​​ಶೀಟ್​ ಕೂಡ ಸಲ್ಲಿಕೆ ಆಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್​ ಡಿಸೆಂಬರ್ 15ರಂದು ಪ್ರಕರಣವನ್ನು ಖುಲಾಸೆ ಮಾಡಿತ್ತು.

ದೋಷಮುಕ್ತಗೊಂಡವರು ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್​ನ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿತು. ವಿದೇಶಿಗರ ಪರವಾಗಿ ವಾದ ಮಂಡಿಸಿದ ವಕೀಲೆ ಮೇನಕಾ ಗುರುಸ್ವಾಮಿ, ವಿದೇಶಿಯರು ಸುಗಮವಾಗಿ ನಿರ್ಗಮಿಸಲು ನ್ಯಾಯಪೀಠ ಹಸ್ತಕ್ಷೇಪ ಮಾಡಬೇಕು ಎಂದು ಕೋರಿದರು. ಈ ವಿನಂತಿಗೆ ಪ್ರಕ್ರಿಯಿಸಿದ ನ್ಯಾಯಾಲಯ, ಇದಕ್ಕಾಗಿ ನಾವು ನೋಡೆಲ್ ಅಧಿಕಾರಿ ನೇಮಕ ಮಾಡುತ್ತೇವೆ. ಈ ವಿದೇಶಿಯರು ನೋಡೆಲ್​ ಅಧಿಕಾರಿಯನ್ನು ಸಂಪರ್ಕಿಸಿ, ಅವರ ನೆರವಿನೊಂದಿಗೆ ವಿದೇಶಕ್ಕೆ ಮರಳಬಹುದು ಎಂದು ಭರವಸೆ ನೀಡಿತು.

ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ತಬ್ಲಿಘಿ ಜಮಾತ್​ನಲ್ಲಿ ಪಾಲ್ಗೊಂಡಿದ್ದ 36 ವಿದೇಶಿಯರು ಆರೋಪ ಮುಕ್ತ

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ