AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಬ್ಲಿಘಿ ಜಮಾತ್​​​ನಲ್ಲಿ ಪಾಲ್ಗೊಂಡಿದ್ದ ವಿದೇಶಿಯರು ತವರಿಗೆ ಮರಳಲು ನೆರವಾಗಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ

ದೇಶದಲ್ಲಿ ಕೊರೊನಾ ವೈರಸ್​ ಹರಡಿದ್ದೇ ತಬ್ಲಿಘಿಯಿಂದ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 36 ವಿದೇಶಿಗರ ವಿರುದ್ಧ ಚಾರ್ಜ್​​ಶೀಟ್​ ಕೂಡ ಸಲ್ಲಿಕೆ ಆಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್​ ಡಿಸೆಂಬರ್ 15ರಂದು ಪ್ರಕರಣವನ್ನು ಖುಲಾಸೆ ಮಾಡಿತ್ತು.

ತಬ್ಲಿಘಿ ಜಮಾತ್​​​ನಲ್ಲಿ ಪಾಲ್ಗೊಂಡಿದ್ದ ವಿದೇಶಿಯರು ತವರಿಗೆ ಮರಳಲು ನೆರವಾಗಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ
ಸುಪ್ರೀಂ ಕೋರ್ಟ್
ರಾಜೇಶ್ ದುಗ್ಗುಮನೆ
| Edited By: |

Updated on: Dec 21, 2020 | 7:19 PM

Share

ನವದೆಹಲಿ: ತಬ್ಲಿಘಿ ಜಮಾತ್​​ನಲ್ಲಿ ಪಾಲ್ಗೊಂಡಿದ್ದ 36 ವಿದೇಶಿಯರ ಮೇಲಿದ್ದ ಮೊಕದ್ದಮೆಯನ್ನು ದೆಹಲಿ ಹೈಕೋರ್ಟ್​​ ಖುಲಾಸೆಗೊಳಿಸಿದ ಬೆನ್ನಲ್ಲೇ ಸುಪ್ರೀಂಕೋರ್ಟ್​ ಕೇಂದ್ರ ಸರ್ಕಾರಕ್ಕೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಈ 36 ವಿದೇಶಿಯರು ಅವರ ದೇಶಗಳಿಗೆ ಹಿಂದಿರುಗಲು ಸಹಾಯ ಮಾಡಿ ಎಂದು ನಿರ್ದೇಶನ ನೀಡಿದೆ.

ಮಾರ್ಚ್​​ನಲ್ಲಿ ಕೊರೊನಾ ವೈರಸ್​ ಭಾರತದಲ್ಲಿ ನಿಧಾನವಾಗಿ ಹಬ್ಬಲು ಆರಂಭಿಸಿತ್ತು. ಆದಾಗ್ಯೂ ದೆಹಲಿಯಲ್ಲಿ ತಬ್ಲಿಘಿ ಜಮಾತ್​ ಕಾರ್ಯಕ್ರಮ ನಡೆಸಲಾಗಿತ್ತು. ಇಲ್ಲಿ ಪಾಲ್ಗೊಂಡಿದ್ದ ಅನೇಕರಿಗೆ ಕೊರೊನಾ ವೈರಸ್​ ಹಬ್ಬಿತ್ತು. ಈ ದೇಶದಲ್ಲಿ ಕೊರೊನಾ ವೈರಸ್​ ಹರಡಿದ್ದೇ ಇವರಿಂದ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 36 ವಿದೇಶಿಗರ ವಿರುದ್ಧ ಚಾರ್ಜ್​​ಶೀಟ್​ ಕೂಡ ಸಲ್ಲಿಕೆ ಆಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್​ ಡಿಸೆಂಬರ್ 15ರಂದು ಪ್ರಕರಣವನ್ನು ಖುಲಾಸೆ ಮಾಡಿತ್ತು.

ದೋಷಮುಕ್ತಗೊಂಡವರು ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್​ನ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿತು. ವಿದೇಶಿಗರ ಪರವಾಗಿ ವಾದ ಮಂಡಿಸಿದ ವಕೀಲೆ ಮೇನಕಾ ಗುರುಸ್ವಾಮಿ, ವಿದೇಶಿಯರು ಸುಗಮವಾಗಿ ನಿರ್ಗಮಿಸಲು ನ್ಯಾಯಪೀಠ ಹಸ್ತಕ್ಷೇಪ ಮಾಡಬೇಕು ಎಂದು ಕೋರಿದರು. ಈ ವಿನಂತಿಗೆ ಪ್ರಕ್ರಿಯಿಸಿದ ನ್ಯಾಯಾಲಯ, ಇದಕ್ಕಾಗಿ ನಾವು ನೋಡೆಲ್ ಅಧಿಕಾರಿ ನೇಮಕ ಮಾಡುತ್ತೇವೆ. ಈ ವಿದೇಶಿಯರು ನೋಡೆಲ್​ ಅಧಿಕಾರಿಯನ್ನು ಸಂಪರ್ಕಿಸಿ, ಅವರ ನೆರವಿನೊಂದಿಗೆ ವಿದೇಶಕ್ಕೆ ಮರಳಬಹುದು ಎಂದು ಭರವಸೆ ನೀಡಿತು.

ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ತಬ್ಲಿಘಿ ಜಮಾತ್​ನಲ್ಲಿ ಪಾಲ್ಗೊಂಡಿದ್ದ 36 ವಿದೇಶಿಯರು ಆರೋಪ ಮುಕ್ತ

ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!