AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಬ್ಲಿಘಿ ಜಮಾತ್​​​ನಲ್ಲಿ ಪಾಲ್ಗೊಂಡಿದ್ದ ವಿದೇಶಿಯರು ತವರಿಗೆ ಮರಳಲು ನೆರವಾಗಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ

ದೇಶದಲ್ಲಿ ಕೊರೊನಾ ವೈರಸ್​ ಹರಡಿದ್ದೇ ತಬ್ಲಿಘಿಯಿಂದ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 36 ವಿದೇಶಿಗರ ವಿರುದ್ಧ ಚಾರ್ಜ್​​ಶೀಟ್​ ಕೂಡ ಸಲ್ಲಿಕೆ ಆಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್​ ಡಿಸೆಂಬರ್ 15ರಂದು ಪ್ರಕರಣವನ್ನು ಖುಲಾಸೆ ಮಾಡಿತ್ತು.

ತಬ್ಲಿಘಿ ಜಮಾತ್​​​ನಲ್ಲಿ ಪಾಲ್ಗೊಂಡಿದ್ದ ವಿದೇಶಿಯರು ತವರಿಗೆ ಮರಳಲು ನೆರವಾಗಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ
ಸುಪ್ರೀಂ ಕೋರ್ಟ್
ರಾಜೇಶ್ ದುಗ್ಗುಮನೆ
| Edited By: |

Updated on: Dec 21, 2020 | 7:19 PM

Share

ನವದೆಹಲಿ: ತಬ್ಲಿಘಿ ಜಮಾತ್​​ನಲ್ಲಿ ಪಾಲ್ಗೊಂಡಿದ್ದ 36 ವಿದೇಶಿಯರ ಮೇಲಿದ್ದ ಮೊಕದ್ದಮೆಯನ್ನು ದೆಹಲಿ ಹೈಕೋರ್ಟ್​​ ಖುಲಾಸೆಗೊಳಿಸಿದ ಬೆನ್ನಲ್ಲೇ ಸುಪ್ರೀಂಕೋರ್ಟ್​ ಕೇಂದ್ರ ಸರ್ಕಾರಕ್ಕೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಈ 36 ವಿದೇಶಿಯರು ಅವರ ದೇಶಗಳಿಗೆ ಹಿಂದಿರುಗಲು ಸಹಾಯ ಮಾಡಿ ಎಂದು ನಿರ್ದೇಶನ ನೀಡಿದೆ.

ಮಾರ್ಚ್​​ನಲ್ಲಿ ಕೊರೊನಾ ವೈರಸ್​ ಭಾರತದಲ್ಲಿ ನಿಧಾನವಾಗಿ ಹಬ್ಬಲು ಆರಂಭಿಸಿತ್ತು. ಆದಾಗ್ಯೂ ದೆಹಲಿಯಲ್ಲಿ ತಬ್ಲಿಘಿ ಜಮಾತ್​ ಕಾರ್ಯಕ್ರಮ ನಡೆಸಲಾಗಿತ್ತು. ಇಲ್ಲಿ ಪಾಲ್ಗೊಂಡಿದ್ದ ಅನೇಕರಿಗೆ ಕೊರೊನಾ ವೈರಸ್​ ಹಬ್ಬಿತ್ತು. ಈ ದೇಶದಲ್ಲಿ ಕೊರೊನಾ ವೈರಸ್​ ಹರಡಿದ್ದೇ ಇವರಿಂದ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 36 ವಿದೇಶಿಗರ ವಿರುದ್ಧ ಚಾರ್ಜ್​​ಶೀಟ್​ ಕೂಡ ಸಲ್ಲಿಕೆ ಆಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್​ ಡಿಸೆಂಬರ್ 15ರಂದು ಪ್ರಕರಣವನ್ನು ಖುಲಾಸೆ ಮಾಡಿತ್ತು.

ದೋಷಮುಕ್ತಗೊಂಡವರು ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್​ನ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿತು. ವಿದೇಶಿಗರ ಪರವಾಗಿ ವಾದ ಮಂಡಿಸಿದ ವಕೀಲೆ ಮೇನಕಾ ಗುರುಸ್ವಾಮಿ, ವಿದೇಶಿಯರು ಸುಗಮವಾಗಿ ನಿರ್ಗಮಿಸಲು ನ್ಯಾಯಪೀಠ ಹಸ್ತಕ್ಷೇಪ ಮಾಡಬೇಕು ಎಂದು ಕೋರಿದರು. ಈ ವಿನಂತಿಗೆ ಪ್ರಕ್ರಿಯಿಸಿದ ನ್ಯಾಯಾಲಯ, ಇದಕ್ಕಾಗಿ ನಾವು ನೋಡೆಲ್ ಅಧಿಕಾರಿ ನೇಮಕ ಮಾಡುತ್ತೇವೆ. ಈ ವಿದೇಶಿಯರು ನೋಡೆಲ್​ ಅಧಿಕಾರಿಯನ್ನು ಸಂಪರ್ಕಿಸಿ, ಅವರ ನೆರವಿನೊಂದಿಗೆ ವಿದೇಶಕ್ಕೆ ಮರಳಬಹುದು ಎಂದು ಭರವಸೆ ನೀಡಿತು.

ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ತಬ್ಲಿಘಿ ಜಮಾತ್​ನಲ್ಲಿ ಪಾಲ್ಗೊಂಡಿದ್ದ 36 ವಿದೇಶಿಯರು ಆರೋಪ ಮುಕ್ತ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ