AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RD Chief Guest: ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲು ನಿರಾಕರಿಸಿದ ನಾಯಕರು ಯಾರು ಯಾರು ಗೊತ್ತಾ?

ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಬೇಕಿದ್ದ ಬ್ರಿಟನ್​ ಪ್ರಧಾನಿ ಬೋರಿಸ್​ ಜಾನ್ಸನ್​ ತಮ್ಮ ಪ್ರವಾಸ ರದ್ದು ಮಾಡಿದ್ದರು. ಈ ಮೊದಲು ಕೂಡ ಸಾಕಷ್ಟು ಪ್ರಮುಖ ನಾಯಕರು ಭಾರತ ಪ್ರವಾಸ ರದ್ದು ಮಾಡಿದ್ದರು. ಆ ಬಗ್ಗೆ ಇಲ್ಲಿದೆ ಮಾಹಿತಿ.

RD Chief Guest: ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲು ನಿರಾಕರಿಸಿದ ನಾಯಕರು ಯಾರು ಯಾರು ಗೊತ್ತಾ?
ಸಾಂಕೇತಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Jan 16, 2021 | 6:48 PM

Share

ನವದೆಹಲಿ: ಜನವರಿ 26ರಂದು ವಿದೇಶದ ಪ್ರಮುಖ ನಾಯಕರು ದೆಹಲಿಗೆ ಆಗಮಿಸಿ, ಭವ್ಯ ಗಣರಾಜ್ಯೋತ್ಸವ ಪರೇಡ್​ ಕಾರ್ಯಕ್ರಮ ಕಣ್ತುಂಬಿಕೊಂಡು ಹೋಗುವುದು ಈ ಮೊದಲಿನಿಂದಲೂ ನಡೆದುಕೊಂಡು ಬಂದ ವಾಡಿಕೆ. ಆದರೆ, ಈ 55 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಯಾರೊಬ್ಬರೂ ಅತಿಥಿಯಾಗಿ ಬರುತ್ತಿಲ್ಲ.

ಬ್ರಿಟನ್​ನಲ್ಲಿ ಕೊರೊನಾ ವೈರಸ್​ ಎರಡನೇ ಅಲೆ ಕಾಣಿಸಿಕೊಂಡಿದೆ. ಹೀಗಾಗಿ, ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಬೇಕಿದ್ದ ಬ್ರಿಟನ್​ ಪ್ರಧಾನಿ ಬೋರಿಸ್​ ಜಾನ್ಸನ್​ ತಮ್ಮ ಪ್ರವಾಸ ರದ್ದು ಮಾಡಿದ್ದರು. ಹೀಗಾಗಿ ಮುಖ್ಯ ಅತಿಥಿ ಇಲ್ಲದೆ ಈ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದೆ.

ಬೋರಿಸ್​ ಜಾನ್ಸನ್​ ಮಾದರಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬರಲು ಅನೇಕ ನಾಯಕರು ಈ ಮೊದಲು ನಿರಾಕರಿಸಿದ್ದರು. ಆ ಬಗ್ಗೆ ಇಲ್ಲಿದೆ ವಿವರ..

1966ರ ಜನವರಿ 11ರಂದು ಪ್ರಧಾನಿ ಲಾಲ್​ ಬಹದ್ಧೂರ್​ ಶಾಸ್ತ್ರಿ ಮೃತಪಟ್ಟಿದ್ದರು. ಈ ವೇಳೆ ಇಂದಿರಾ ಗಾಂಧಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಈ ಬೆಳವಣಿಗೆ ನಡುವೆ ಗಣರಾಜ್ಯೋತ್ಸವಕ್ಕೆ ಯಾರೊಬ್ಬರೂ ಮುಖ್ಯ ಅತಿಥಿಯಾಗಿ ಆಗಮಿಸಿರಲಿಲ್ಲ.

ಡೊನಾಲ್ಡ್​ ಟ್ರಂಪ್​: 2019ರ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಂದಿನ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ಗೆ ಆಹ್ವಾನ ನೀಡಿತ್ತು. ಆದರೆ, ಪೂರ್ವ ನಿಗದಿತ ಕಾರ್ಯಕ್ರಮಗಳಿಂದಾಗಿ ಕಾರ್ಯಕ್ರಮಕ್ಕೆ ಬರಲು ಅವರು ನಿರಾಕರಿಸಿದ್ದರು.

ಒಮನ್​ ಸುಲ್ತಾನ: ಒಮನ್​ ಸುಲ್ತಾನ ಖಬೂಸ್​ ಬಿಸ್​ ಸಯೀದ್​ ಅಲ್​ 2013ರಲ್ಲಿ ಗಣ ರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಬೇಕಿತ್ತು. ಆದರೆ, ಸಂವಹನ ಸಮಸ್ಯೆಯಿಂದಾಗಿ ಅವರು ಆಗಮನ ನಿರಾಕರಿಸಿದ್ದರು.

ಬಿಲ್​ ಕ್ಲಿಂಟನ್​: 1995ರಲ್ಲಿ ಅಂದಿನ ಅಮೆರಿಕ ಅಧ್ಯಕ್ಷ ಬಿಲ್​ ಕ್ಲಿಂಟನ್​ಗೆ ಭಾರತ ಸರ್ಕಾರ ಆಹ್ವಾನ ನೀಡಿತ್ತು. ಆದರೆ, ಈ ಆಹ್ವಾನವನ್ನು ಅವರು ತಿರಸ್ಕರಿಸಿದ್ದರು.

Army Day 2021 | ‘ನೆಲದ ಋಣಕ್ಕೆ ಗಂಡು-ಹೆಣ್ಣು ಭೇದವುಂಟೇ’-ಇಲ್ಲಿದೆ ಗಣರಾಜ್ಯೋತ್ಸವ ಪರೇಡ್ ಮುನ್ನಡೆಸಿದ ಕ್ಯಾಪ್ಟನ್ ತಾನಿಯಾ ಶೇರ್ಗಿಲ್ ಕಥೆ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!