AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RD Chief Guest: ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲು ನಿರಾಕರಿಸಿದ ನಾಯಕರು ಯಾರು ಯಾರು ಗೊತ್ತಾ?

ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಬೇಕಿದ್ದ ಬ್ರಿಟನ್​ ಪ್ರಧಾನಿ ಬೋರಿಸ್​ ಜಾನ್ಸನ್​ ತಮ್ಮ ಪ್ರವಾಸ ರದ್ದು ಮಾಡಿದ್ದರು. ಈ ಮೊದಲು ಕೂಡ ಸಾಕಷ್ಟು ಪ್ರಮುಖ ನಾಯಕರು ಭಾರತ ಪ್ರವಾಸ ರದ್ದು ಮಾಡಿದ್ದರು. ಆ ಬಗ್ಗೆ ಇಲ್ಲಿದೆ ಮಾಹಿತಿ.

RD Chief Guest: ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲು ನಿರಾಕರಿಸಿದ ನಾಯಕರು ಯಾರು ಯಾರು ಗೊತ್ತಾ?
ಸಾಂಕೇತಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Jan 16, 2021 | 6:48 PM

Share

ನವದೆಹಲಿ: ಜನವರಿ 26ರಂದು ವಿದೇಶದ ಪ್ರಮುಖ ನಾಯಕರು ದೆಹಲಿಗೆ ಆಗಮಿಸಿ, ಭವ್ಯ ಗಣರಾಜ್ಯೋತ್ಸವ ಪರೇಡ್​ ಕಾರ್ಯಕ್ರಮ ಕಣ್ತುಂಬಿಕೊಂಡು ಹೋಗುವುದು ಈ ಮೊದಲಿನಿಂದಲೂ ನಡೆದುಕೊಂಡು ಬಂದ ವಾಡಿಕೆ. ಆದರೆ, ಈ 55 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಯಾರೊಬ್ಬರೂ ಅತಿಥಿಯಾಗಿ ಬರುತ್ತಿಲ್ಲ.

ಬ್ರಿಟನ್​ನಲ್ಲಿ ಕೊರೊನಾ ವೈರಸ್​ ಎರಡನೇ ಅಲೆ ಕಾಣಿಸಿಕೊಂಡಿದೆ. ಹೀಗಾಗಿ, ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಬೇಕಿದ್ದ ಬ್ರಿಟನ್​ ಪ್ರಧಾನಿ ಬೋರಿಸ್​ ಜಾನ್ಸನ್​ ತಮ್ಮ ಪ್ರವಾಸ ರದ್ದು ಮಾಡಿದ್ದರು. ಹೀಗಾಗಿ ಮುಖ್ಯ ಅತಿಥಿ ಇಲ್ಲದೆ ಈ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದೆ.

ಬೋರಿಸ್​ ಜಾನ್ಸನ್​ ಮಾದರಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬರಲು ಅನೇಕ ನಾಯಕರು ಈ ಮೊದಲು ನಿರಾಕರಿಸಿದ್ದರು. ಆ ಬಗ್ಗೆ ಇಲ್ಲಿದೆ ವಿವರ..

1966ರ ಜನವರಿ 11ರಂದು ಪ್ರಧಾನಿ ಲಾಲ್​ ಬಹದ್ಧೂರ್​ ಶಾಸ್ತ್ರಿ ಮೃತಪಟ್ಟಿದ್ದರು. ಈ ವೇಳೆ ಇಂದಿರಾ ಗಾಂಧಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಈ ಬೆಳವಣಿಗೆ ನಡುವೆ ಗಣರಾಜ್ಯೋತ್ಸವಕ್ಕೆ ಯಾರೊಬ್ಬರೂ ಮುಖ್ಯ ಅತಿಥಿಯಾಗಿ ಆಗಮಿಸಿರಲಿಲ್ಲ.

ಡೊನಾಲ್ಡ್​ ಟ್ರಂಪ್​: 2019ರ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಂದಿನ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ಗೆ ಆಹ್ವಾನ ನೀಡಿತ್ತು. ಆದರೆ, ಪೂರ್ವ ನಿಗದಿತ ಕಾರ್ಯಕ್ರಮಗಳಿಂದಾಗಿ ಕಾರ್ಯಕ್ರಮಕ್ಕೆ ಬರಲು ಅವರು ನಿರಾಕರಿಸಿದ್ದರು.

ಒಮನ್​ ಸುಲ್ತಾನ: ಒಮನ್​ ಸುಲ್ತಾನ ಖಬೂಸ್​ ಬಿಸ್​ ಸಯೀದ್​ ಅಲ್​ 2013ರಲ್ಲಿ ಗಣ ರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಬೇಕಿತ್ತು. ಆದರೆ, ಸಂವಹನ ಸಮಸ್ಯೆಯಿಂದಾಗಿ ಅವರು ಆಗಮನ ನಿರಾಕರಿಸಿದ್ದರು.

ಬಿಲ್​ ಕ್ಲಿಂಟನ್​: 1995ರಲ್ಲಿ ಅಂದಿನ ಅಮೆರಿಕ ಅಧ್ಯಕ್ಷ ಬಿಲ್​ ಕ್ಲಿಂಟನ್​ಗೆ ಭಾರತ ಸರ್ಕಾರ ಆಹ್ವಾನ ನೀಡಿತ್ತು. ಆದರೆ, ಈ ಆಹ್ವಾನವನ್ನು ಅವರು ತಿರಸ್ಕರಿಸಿದ್ದರು.

Army Day 2021 | ‘ನೆಲದ ಋಣಕ್ಕೆ ಗಂಡು-ಹೆಣ್ಣು ಭೇದವುಂಟೇ’-ಇಲ್ಲಿದೆ ಗಣರಾಜ್ಯೋತ್ಸವ ಪರೇಡ್ ಮುನ್ನಡೆಸಿದ ಕ್ಯಾಪ್ಟನ್ ತಾನಿಯಾ ಶೇರ್ಗಿಲ್ ಕಥೆ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More