AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಹುದ್ದೆಗೆ ಏರಿದ ಭೂಪೇಂದ್ರ ಪಟೇಲ್​ ಯಾರು?-ರೇಸ್​​ನಲ್ಲಿ ಇಲ್ಲದಿದ್ದರೂ ಹುದ್ದೆಗೇರಿದ ನಾಯಕ

Bhupendra Patel: ಭೂಪೇಂದ್ರ ಪಟೇಲ್​ ಅವರ ಹೆಸರನ್ನು ವಿಜಯ್​ ರೂಪಾನಿಯವರೇ ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಅದರಾಚೆಗೂ ಕೂಡ ಇವರು ಗುಜರಾತ್​ನ ಪ್ರಭಾವಿ ಸಮುದಾಯಕ್ಕೆ ಸೇರಿರುವುದೂ ಕೂಡ ಆಯ್ಕೆಗೆ ಇನ್ನೊಂದು ಕಾರಣ ಇರಬಹುದು.

ಸಿಎಂ ಹುದ್ದೆಗೆ ಏರಿದ ಭೂಪೇಂದ್ರ ಪಟೇಲ್​ ಯಾರು?-ರೇಸ್​​ನಲ್ಲಿ ಇಲ್ಲದಿದ್ದರೂ ಹುದ್ದೆಗೇರಿದ ನಾಯಕ
ಭೂಪೇಂದ್ರ ಪಟೇಲ್​
TV9 Web
| Edited By: |

Updated on:Sep 12, 2021 | 7:27 PM

Share

ಗುಜರಾತ್​: ವಿಜಯ್​ ರೂಪಾನಿ (Vijay Rupani) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಕುತೂಹಲಕ್ಕೆ ಕಾರಣವಾದ ಪ್ರಶ್ನೆಯಾಗಿತ್ತು. ಇದೀಗ 59 ವರ್ಷದ ಭೂಪೇಂದ್ರ ಪಟೇಲ್ (Bhupendra Patel)​ ಆ ಹುದ್ದೆಗೆ ಏರಿದ್ದಾರೆ. ನಾಳೆಯೇ ಪ್ರಮಾಣ ವಚನ ಸ್ವೀಕಾರ ಸಮಾರಂಭ ಕೂಡ ನಡೆಯಲಿದೆ ಎನ್ನಲಾಗಿದೆ. ಭೂಪೇಂದ್ರ ಪಟೇಲ್​ ಘಟ್​​ಲೋಡಿಯಾ ಕ್ಷೇತ್ರದ ಶಾಸಕರಾಗಿದ್ದಾರೆ.

ನಿನ್ನೆ ರೂಪಾಣಿ ರಾಜೀನಾಮೆ ಬೆನ್ನಲ್ಲೇ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಗಾಂಧಿನಗರದಲ್ಲಿ ನಡೆದಿತ್ತು. ಈ ಸಭೆಯಲ್ಲಿ ಭೂಪೇಂದ್ರ ಪಟೇಲ್​ ಅವರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಯಿತು. ಇವರು ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ವಿರುದ್ಧ 1,17,000 ಮತಗಳ ಅಂತರದಿಂದ ಗೆದ್ದಿದ್ದಾರೆ.

ಗುಜರಾತ್​ನ ಪ್ರಭಾವಿ ಸಮುದಾಯಕ್ಕೆ ಸೇರಿದವರು ಭೂಪೇಂದ್ರ ಪಟೇಲ್​ ಅವರ ಹೆಸರನ್ನು ವಿಜಯ್​ ರೂಪಾನಿಯವರೇ ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಅದರಾಚೆಗೂ ಕೂಡ ಇವರು ಗುಜರಾತ್​ನ ಪ್ರಭಾವಿ ಸಮುದಾಯಕ್ಕೆ ಸೇರಿರುವುದೂ ಕೂಡ ಆಯ್ಕೆಗೆ ಇನ್ನೊಂದು ಕಾರಣ ಇರಬಹುದು. ಗುಜರಾತ್​ ವಿಧಾನಸಭೆ ಚುನಾವಣೆ ಇನ್ನೊಂದೇ ವರ್ಷ ಬಾಕಿ ಇರುವಾಗ ಸಿಎಂ ಹುದ್ದೆಗೆ ಏರಿದ ಭೂಪೇಂದ್ರ ಪಟೇಲ್​​ ಪಾಟಿದಾರ್ ಸಮುದಾಯದ ಉಪ-ಜಾತಿ ಕಡವಾಕ್ಕೆ ಸೇರಿದವರು. ಸಿವಿಲ್​ ಇಂಜಿನಿಯರಿಂಗ್​ನಲ್ಲಿ ಡಿಪ್ಲೋಮಾ ಮಾಡಿದ್ದಾರೆ. ಹಾಗೇ, ಪಾಟಿದಾರ್​ ಸಂಸ್ಥೆಗಳಾದ ಸರ್ದಾರ್​ ಧಾಮ್​ ಮತ್ತು ವಿಶ್ವ ಉಮಿಯಾ ಫೌಂಡೇಶನ್​​ನ ಟ್ರಸ್ಟೀಗಳಲ್ಲೊಬ್ಬರು.

ಭೂಪೇಂದ್ರ ಪಟೇಲ್​ ಅವರು 1999ರಿಂದ 2000ರವರೆಗೆ ಮೇಮ್ನಾಗಗರ್​ ನಗರಪಾಲಿಕೆ ಅಧ್ಯಕ್ಷರಾಗಿದ್ದರು. ಹಾಗೇ, 2008ರಿಂದ 2010ರವರೆಗೆ ಅಹ್ಮದಾಬಾದ್​ ಮುನ್ಸಿಪಲ್​ ಕಾರ್ಪೋರೇಶನ್​​ನ ಶಾಲಾ ಮಂಡಳಿ ಉಪಾಧ್ಯಕ್ಷರಾಗಿದ್ದರು. ಬಳಿಕ 2010ರಿಂದ 2015ರವರೆಗೆ ತಥ್ಲೇಜ್​ ವಾರ್ಡ್​ನ ಕೌನ್ಸಿಲರ್​ ಆಗಿದ್ದರು.

ಇದನ್ನೂ ಓದಿ: Bhupendra Patel: ಗುಜರಾತ್​ ಮುಂದಿನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್​

ಎಸ್​ಸಿ ಎಸ್​ಟಿಯ 52 ಶಾಸಕರಿದ್ದರೂ ಅಧಿಕಾರ ಹಿಡಿಯಲು ಆಗಲಿಲ್ಲ: ಮಾದಾರ ಚನ್ನಯ್ಯ ಸ್ವಾಮೀಜಿ ಬೇಸರ

IPL 2021: ಪ್ಲೇ ಆಫ್ ಪ್ರವೇಶಿಸಲು ದ್ವಿತಿಯಾರ್ಧದಲ್ಲಿ ಪ್ರತಿ ತಂಡಗಳು ಎಷ್ಟು ಪಂದ್ಯ ಗೆಲ್ಲಬೇಕು?

Published On - 7:26 pm, Sun, 12 September 21

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್