AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಹುದ್ದೆಗೆ ಏರಿದ ಭೂಪೇಂದ್ರ ಪಟೇಲ್​ ಯಾರು?-ರೇಸ್​​ನಲ್ಲಿ ಇಲ್ಲದಿದ್ದರೂ ಹುದ್ದೆಗೇರಿದ ನಾಯಕ

Bhupendra Patel: ಭೂಪೇಂದ್ರ ಪಟೇಲ್​ ಅವರ ಹೆಸರನ್ನು ವಿಜಯ್​ ರೂಪಾನಿಯವರೇ ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಅದರಾಚೆಗೂ ಕೂಡ ಇವರು ಗುಜರಾತ್​ನ ಪ್ರಭಾವಿ ಸಮುದಾಯಕ್ಕೆ ಸೇರಿರುವುದೂ ಕೂಡ ಆಯ್ಕೆಗೆ ಇನ್ನೊಂದು ಕಾರಣ ಇರಬಹುದು.

ಸಿಎಂ ಹುದ್ದೆಗೆ ಏರಿದ ಭೂಪೇಂದ್ರ ಪಟೇಲ್​ ಯಾರು?-ರೇಸ್​​ನಲ್ಲಿ ಇಲ್ಲದಿದ್ದರೂ ಹುದ್ದೆಗೇರಿದ ನಾಯಕ
ಭೂಪೇಂದ್ರ ಪಟೇಲ್​
TV9 Web
| Edited By: |

Updated on:Sep 12, 2021 | 7:27 PM

Share

ಗುಜರಾತ್​: ವಿಜಯ್​ ರೂಪಾನಿ (Vijay Rupani) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಕುತೂಹಲಕ್ಕೆ ಕಾರಣವಾದ ಪ್ರಶ್ನೆಯಾಗಿತ್ತು. ಇದೀಗ 59 ವರ್ಷದ ಭೂಪೇಂದ್ರ ಪಟೇಲ್ (Bhupendra Patel)​ ಆ ಹುದ್ದೆಗೆ ಏರಿದ್ದಾರೆ. ನಾಳೆಯೇ ಪ್ರಮಾಣ ವಚನ ಸ್ವೀಕಾರ ಸಮಾರಂಭ ಕೂಡ ನಡೆಯಲಿದೆ ಎನ್ನಲಾಗಿದೆ. ಭೂಪೇಂದ್ರ ಪಟೇಲ್​ ಘಟ್​​ಲೋಡಿಯಾ ಕ್ಷೇತ್ರದ ಶಾಸಕರಾಗಿದ್ದಾರೆ.

ನಿನ್ನೆ ರೂಪಾಣಿ ರಾಜೀನಾಮೆ ಬೆನ್ನಲ್ಲೇ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಗಾಂಧಿನಗರದಲ್ಲಿ ನಡೆದಿತ್ತು. ಈ ಸಭೆಯಲ್ಲಿ ಭೂಪೇಂದ್ರ ಪಟೇಲ್​ ಅವರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಯಿತು. ಇವರು ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ವಿರುದ್ಧ 1,17,000 ಮತಗಳ ಅಂತರದಿಂದ ಗೆದ್ದಿದ್ದಾರೆ.

ಗುಜರಾತ್​ನ ಪ್ರಭಾವಿ ಸಮುದಾಯಕ್ಕೆ ಸೇರಿದವರು ಭೂಪೇಂದ್ರ ಪಟೇಲ್​ ಅವರ ಹೆಸರನ್ನು ವಿಜಯ್​ ರೂಪಾನಿಯವರೇ ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಅದರಾಚೆಗೂ ಕೂಡ ಇವರು ಗುಜರಾತ್​ನ ಪ್ರಭಾವಿ ಸಮುದಾಯಕ್ಕೆ ಸೇರಿರುವುದೂ ಕೂಡ ಆಯ್ಕೆಗೆ ಇನ್ನೊಂದು ಕಾರಣ ಇರಬಹುದು. ಗುಜರಾತ್​ ವಿಧಾನಸಭೆ ಚುನಾವಣೆ ಇನ್ನೊಂದೇ ವರ್ಷ ಬಾಕಿ ಇರುವಾಗ ಸಿಎಂ ಹುದ್ದೆಗೆ ಏರಿದ ಭೂಪೇಂದ್ರ ಪಟೇಲ್​​ ಪಾಟಿದಾರ್ ಸಮುದಾಯದ ಉಪ-ಜಾತಿ ಕಡವಾಕ್ಕೆ ಸೇರಿದವರು. ಸಿವಿಲ್​ ಇಂಜಿನಿಯರಿಂಗ್​ನಲ್ಲಿ ಡಿಪ್ಲೋಮಾ ಮಾಡಿದ್ದಾರೆ. ಹಾಗೇ, ಪಾಟಿದಾರ್​ ಸಂಸ್ಥೆಗಳಾದ ಸರ್ದಾರ್​ ಧಾಮ್​ ಮತ್ತು ವಿಶ್ವ ಉಮಿಯಾ ಫೌಂಡೇಶನ್​​ನ ಟ್ರಸ್ಟೀಗಳಲ್ಲೊಬ್ಬರು.

ಭೂಪೇಂದ್ರ ಪಟೇಲ್​ ಅವರು 1999ರಿಂದ 2000ರವರೆಗೆ ಮೇಮ್ನಾಗಗರ್​ ನಗರಪಾಲಿಕೆ ಅಧ್ಯಕ್ಷರಾಗಿದ್ದರು. ಹಾಗೇ, 2008ರಿಂದ 2010ರವರೆಗೆ ಅಹ್ಮದಾಬಾದ್​ ಮುನ್ಸಿಪಲ್​ ಕಾರ್ಪೋರೇಶನ್​​ನ ಶಾಲಾ ಮಂಡಳಿ ಉಪಾಧ್ಯಕ್ಷರಾಗಿದ್ದರು. ಬಳಿಕ 2010ರಿಂದ 2015ರವರೆಗೆ ತಥ್ಲೇಜ್​ ವಾರ್ಡ್​ನ ಕೌನ್ಸಿಲರ್​ ಆಗಿದ್ದರು.

ಇದನ್ನೂ ಓದಿ: Bhupendra Patel: ಗುಜರಾತ್​ ಮುಂದಿನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್​

ಎಸ್​ಸಿ ಎಸ್​ಟಿಯ 52 ಶಾಸಕರಿದ್ದರೂ ಅಧಿಕಾರ ಹಿಡಿಯಲು ಆಗಲಿಲ್ಲ: ಮಾದಾರ ಚನ್ನಯ್ಯ ಸ್ವಾಮೀಜಿ ಬೇಸರ

IPL 2021: ಪ್ಲೇ ಆಫ್ ಪ್ರವೇಶಿಸಲು ದ್ವಿತಿಯಾರ್ಧದಲ್ಲಿ ಪ್ರತಿ ತಂಡಗಳು ಎಷ್ಟು ಪಂದ್ಯ ಗೆಲ್ಲಬೇಕು?

Published On - 7:26 pm, Sun, 12 September 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!