AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandrayaan 3: ಚಂದ್ರಯಾನ-3 ಹಿಂದಿರುವ ಮಾಸ್ಟರ್ ಮೈಂಡ್ ವೀರಾ ಮುತ್ತುವೆಲ್ ಯಾರು ಗೊತ್ತೇ?

Scientist Veera Muthuvel: ಚಂದ್ರಯಾನ 3 ಬಾಹ್ಯಾಕಾಶ ನೌಕೆಯ ಯೋಜನಾ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಈ ಯೋಜನೆಯ ಮಾಸ್ಟರ್ ಮೈಂಡ್. ಡಾ. ಪಿ. ವೀರಾ ಮುತ್ತುವೆಲ್ ಬಗ್ಗೆ ಕೆಲವು ಕುತೂಹಲಕಾರಿ ಸಂಗತಿಗಳು ಇಲ್ಲಿವೆ.

Chandrayaan 3: ಚಂದ್ರಯಾನ-3 ಹಿಂದಿರುವ ಮಾಸ್ಟರ್ ಮೈಂಡ್ ವೀರಾ ಮುತ್ತುವೆಲ್ ಯಾರು ಗೊತ್ತೇ?
Dr P Veera Muthuvel and Chandrayaan 3
Follow us
Vinay Bhat
|

Updated on:Jul 14, 2023 | 11:42 AM

ಚಂದ್ರಯಾನ-3 (Chandrayaan 3) ಉಡಾವಣೆಗೆ ಕ್ಷಣಗಣನೆ ಶುರುವಾಗಿದೆ. ಇದಕ್ಕಾಗಿ ಇಸ್ರೋ (ISRO) ಸಕಲ ಸಿದ್ಧತೆ ಮಾಡಿಕೊಂಡಿದ್ದು, ಇಂದು (ಜುಲೈ 14) ಮಧ್ಯಾಹ್ನ 2:35ಕ್ಕೆ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ರಾಕೆಟ್ ಉಡಾವಣೆ ಆಗಲಿದೆ. ಈ ಐತಿಹಾಸಿಕ ಕ್ಷಣಕ್ಕೆ ಇಡೀ ದೇಶವೇ ಕಾದುಕುಳಿತಿದೆ. ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ವಿಜ್ಞಾನಿ ಡಾ. ಪಿ. ವೀರಾ ಮುತ್ತುವೆಲ್ (Veera Muthuvel) ಅವರು ಚಂದ್ರಯಾನ-3 ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಚಂದ್ರಯಾನ 3 ಬಾಹ್ಯಾಕಾಶ ನೌಕೆಯ ಯೋಜನಾ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಇವರು ಈ ಯೋಜನೆಯ ಮಾಸ್ಟರ್ ಮೈಂಡ್. ಡಾ. ಪಿ. ವೀರಾ ಮುತ್ತುವೆಲ್ ಬಗ್ಗೆ ಕೆಲವು ಕುತೂಹಲಕಾರಿ ಸಂಗತಿಗಳು ಇಲ್ಲಿವೆ.

ಆರಂಭಿಕ ಜೀವನ:

ಡಾ. ಪಿ. ವೀರಾ ಮುತ್ತುವೆಲ್ ಅವರು ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯಲ್ಲಿ ಜನಿಸಿದರು. ಇವರ ತಂದೆ ಪಳನಿವೇಲ್ ದಕ್ಷಿಣ ರೈಲ್ವೆಯಲ್ಲಿ ತಂತ್ರಜ್ಞರಾಗಿ ಕೆಲಸ ಮಾಡುತ್ತಿದ್ದಾರೆ. ವಿಲ್ಲುಪುರಂನ ರೈಲ್ವೆ ಸ್ಕೂಲ್​ನಲ್ಲಿ ವಿಧ್ಯಾಭ್ಯಾಸ ಮಾಡಿದ ನಂತರ ಖಾಸಗಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿದರು. ಆದರೆ, ಬಾಹ್ಯಾಕಾಶದ ಮೇಲಿನ ಆಸಕ್ತಿ ಮತ್ತು ಆ ಕ್ಷೇತ್ರದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಹಂಬಲ ಇವರಲ್ಲಿತ್ತು. ಹೀಗಾಗಿ ಮೆಕ್ಯಾನಿಕಲ್ ಎಂಜಿನಿಯರಿಂಗ್‌ ಕೆಲಸವನ್ನು ತೊರೆದು ತಾನು ಅಂದುಕೊಂಡಿದ್ದನ್ನು ಸಾಧಿಸಲು ತಾಂಬರಂನ ಖಾಸಗಿ ಕಾಲೇಜಿನಲ್ಲಿ ಸೇರಿಕೊಂಡರು. ನಂತರ ಉನ್ನತ ವ್ಯಾಸಂಗಕ್ಕಾಗಿ ಐಐಟಿ ಚೆನ್ನೈಗೆ ಸೇರಿಕೊಂಡು ಏರೋಸ್ಪೇಸ್ ಕ್ಷೇತ್ರದಲ್ಲಿ ಪ್ರಮುಖ ಸಂಶೋಧನೆಗಳನ್ನು ನಡೆಸಿದರು.

Chandrayaan 3 Launch Live: ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಇಂದು ಉಡಾವಣೆ

ಇದನ್ನೂ ಓದಿ
Image
ಅಮೆರಿಕದಲ್ಲಿ ಪ್ರಧಾನಿ ಮೋದಿ 30 ವರ್ಷಗಳ ಹಿಂದೆ ಹೀಗಿದ್ದರು, ಅವರ ಜೊತೆ ಕರ್ನಾಟಕದ ಮಾಜಿ ಕೇಂದ್ರ ಸಚಿವರೊಬ್ಬರು ಇದ್ದರು! ಯಾರವರು ನೋಡಿ!
Image
‘ಕೋಟ್ಯಾಂತರ ಹೃದಯಗಳು ನಿಮಗಾಗಿ ಪ್ರಾರ್ಥಿಸುತ್ತಿವೆ’; ‘ಚಂದ್ರಯಾನ-3’ಗೆ ಶುಭಕೋರಿದ ಸೆಲೆಬ್ರಿಟಿಗಳು
Image
Himachal Pradesh Rain: ಹಿಮಾಚಲದಲ್ಲಿ ಭಾರಿ ಮಳೆಯ ಮುನ್ಸೂಚನೆ, ಉತ್ತರ ಭಾರತದಾದ್ಯಂತ ಇದುವರೆಗೆ 145ಕ್ಕೂ ಹೆಚ್ಚು ಮಂದಿ ಸಾವು
Image
Delhi Flood: ದೆಹಲಿಯ ಪ್ರವಾಹ ಸ್ಥಿತಿ ಕುರಿತು ಫ್ರಾನ್ಸ್​ನಿಂದ ಕರೆ ಮಾಡಿ ಅಮಿತ್ ಶಾ ಬಳಿ ಮಾಹಿತಿ ಪಡೆದ ನರೇಂದ್ರ ಮೋದಿ

ಇಸ್ರೋದಲ್ಲಿ ಪಯಣ:

ಹಾರ್ಡ್‌ವೇರ್ ಕೆಲಸದಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುವ ವೀರ ಮುತ್ತುವೇಲ್ ಅವರಿಗೆ 1989 ರಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ದಲ್ಲಿ ವಿಜ್ಞಾನಿಯಾಗುವ ಅವಕಾಶ ಒದಗಿಬಂತು. ಚಿನ್ನದಂತಹ ಅವಕಾಶವನ್ನು ಕೈಬಿಡದ ಮುತ್ತುವೇಲ್ ಇಸ್ರೋ ಸೇರಿದರು. ನಂತರ ಬಂದ ಅವಕಾಶಗಳನ್ನು ಹಿಂತಿರುಗಿ ನೋಡಲೇ ಇಲ್ಲ. ದೇಶ ಮತ್ತು ವಿದೇಶದ ಅನೇಕ ಸಂಸ್ಥೆಗಳ ಜೊತೆಗೆ ಇಸ್ರೋದಲ್ಲಿ ಕೆಲಸ ಮಾಡುವ ಕನಸನ್ನು ನನಸು ಮಾಡಿಕೊಂಡರು.

ಮೆಚ್ಚುಗೆ ಪಡೆದ ಸಂಶೋಧನೆ:

2016 ರಲ್ಲಿ, ಬಾಹ್ಯಾಕಾಶ ನೌಕೆಯ ಎಲೆಕ್ಟ್ರಾನಿಕ್ ಪ್ಯಾಕೇಜ್‌ನಲ್ಲಿ ಕಂಪನ ನಿಯಂತ್ರಣ ವ್ಯವಸ್ಥೆಯ ಕುರಿತು ಸಂಶೋಧನಾ ಪ್ರಬಂಧವನ್ನು ಸಲ್ಲಿಸಿದರು. ಅಷ್ಟೇ ಅಲ್ಲದೆ ಬೆಂಗಳೂರಿನ ಯುಆರ್ ರಾವ್ ಉಪಗ್ರಹ ಕೇಂದ್ರದಲ್ಲಿ ಇದಕ್ಕೆ ಸಂಬಂಧಿಸಿದಂತೆ ಪ್ರಯೋಗಗಳನ್ನು ನಡೆಸಲಾಯಿತು. ಇದರಿಂದ ಬಾಹ್ಯಾಕಾಶ ನೌಕೆಯ ಲ್ಯಾಂಡರ್ ಅನ್ನು ಚಂದ್ರನ ಮೇಲೆ ಇಳಿಸಲು ಮತ್ತು ಬಾಹ್ಯಾಕಾಶ ನೌಕೆಯ ರೋವರ್ ಭಾಗಕ್ಕೆ ಶಕ್ತಿ ತುಂಬಲು ಸಹಾಯ ಮಾಡುತ್ತದೆ ಎಂಬುದು ತಿಳಿಯಿತು. ಈ ಸಂಶೋಧನಾ ಪ್ರಬಂಧವನ್ನು ನೋಡಿ ಅಚ್ಚರಿಗೊಂಡ ಇಸ್ರೋ ವೀರ ಮುತ್ತುವೇಲ್ ಅವರನ್ನು ಪ್ರಶಂಸೆಯ ಸುರಿಮಳೆಗೈದಿದೆ.

ಚಂದ್ರಯಾನ 3 ಯೋಜನೆಯ ನಿರ್ದೇಶಕ:

ಇಸ್ರೋದಲ್ಲಿ ಅನೇಕ ಯೋಜನೆಗಳು ಮತ್ತು ವಿವಿಧ ಜವಾಬ್ದಾರಿಗಳಲ್ಲಿ ಕೆಲಸ ಮಾಡಿದ 30 ವರ್ಷಗಳ ಅನುಭವದ ನಂತರ, ವಿಜ್ಞಾನಿ ಕವಿತಾ ಅವರ ಬದಲಿಗೆ 2019 ರಲ್ಲಿ ವೀರ ಮುತ್ತುವೇಲ್ ಅವರನ್ನು ಚಂದ್ರಯಾನ 3 ರ ನಿರ್ದೇಶಕರಾಗಿ ನೇಮಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:39 am, Fri, 14 July 23

ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್