ದೀಪಾವಳಿ ಹಿನ್ನೆಲೆ ರೈಲುಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ, ಎಲ್ಲಾ ವಲಯಗಳಲ್ಲಿ ಈ 3 ಕ್ರಮಗಳನ್ನು ಕೈಗೊಳ್ಳಲು ಆದೇಶ

ದೀಪಾವಳಿ ಹಬ್ಬ ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಪಘಾತ ಸಂಭವಿಸದಂತೆ ನಿಗಾ ಇರಿಸಿರುವ ರೈಲ್ವೆ ಮಂಡಳಿಯು ಎಲ್ಲಾ ವಲಯಗಳಿಗೆ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದೆ. ಮಂಡಳಿಯು ಅಗ್ನಿ ಸುರಕ್ಷತಾ ಅಭಿಯಾನವನ್ನು ಪ್ರಾರಂಭಿಸಲು ಎಲ್ಲಾ ವಲಯಗಳ ಜನರಲ್ ಮ್ಯಾನೇಜರ್‌ಗಳಿಗೆ ಆದೇಶಿಸಿದ್ದು, ಇದಕ್ಕಾಗಿ 3 ಕ್ರಮಗಳನ್ನು ತೆಗೆದುಕೊಳ್ಳುವಂತೆ ತಿಳಿಸಲಾಗಿದೆ.

ದೀಪಾವಳಿ ಹಿನ್ನೆಲೆ ರೈಲುಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ, ಎಲ್ಲಾ ವಲಯಗಳಲ್ಲಿ ಈ 3 ಕ್ರಮಗಳನ್ನು ಕೈಗೊಳ್ಳಲು ಆದೇಶ
ರೈಲು

Updated on: Nov 02, 2023 | 12:24 PM

ದೀಪಾವಳಿ(Deepavali) ಹಬ್ಬ ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಪಘಾತ ಸಂಭವಿಸದಂತೆ ನಿಗಾ ಇರಿಸಿರುವ ರೈಲ್ವೆ ಮಂಡಳಿಯು ಎಲ್ಲಾ ವಲಯಗಳಿಗೆ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದೆ. ಮಂಡಳಿಯು ಅಗ್ನಿ ಸುರಕ್ಷತಾ ಅಭಿಯಾನವನ್ನು ಪ್ರಾರಂಭಿಸಲು ಎಲ್ಲಾ ವಲಯಗಳ ಜನರಲ್ ಮ್ಯಾನೇಜರ್‌ಗಳಿಗೆ ಆದೇಶಿಸಿದ್ದು, ಇದಕ್ಕಾಗಿ 3 ಕ್ರಮಗಳನ್ನು ತೆಗೆದುಕೊಳ್ಳುವಂತೆ ತಿಳಿಸಲಾಗಿದೆ.

ಇದರ ಅಡಿಯಲ್ಲಿ ರೈಲ್ವೆಯ ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಅಗ್ನಿ ಸುರಕ್ಷತೆಗಾಗಿ ಸಮಗ್ರ ಅಭಿಯಾನವನ್ನು ಪ್ರಾರಂಭಿಸಲು ಸೂಚಿಸಲಾಗಿದೆ. ಮಂಡಳಿಯ ಪ್ರಕಾರ, ನವೆಂಬರ್ 1 ರಿಂದ ನವೆಂಬರ್ 7 ರವರೆಗೆ ಇಲಾಖೆಗಳು ರೈಲ್ವೆಯ ಎಲ್ಲಾ ಬೋಗಿಗಳಲ್ಲಿ ಅಳವಡಿಸಲಾಗಿರುವ ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆಯೇ ಅಥವಾ ಇಲ್ಲವೇ ಎಂಬುದನ್ನು ಸಂಪೂರ್ಣವಾಗಿ ಪರಿಶೀಲಿಸಬೇಕು.

ಇದರೊಂದಿಗೆ ರೈಲ್ವೆ ಪಾರ್ಸೆಲ್ ವ್ಯಾನ್‌ನಲ್ಲಿ ಯಾವುದೇ ದಹನಕಾರಿ ವಸ್ತುಗಳನ್ನು ಸಾಗಿಸದಂತೆ ನೋಡಿಕೊಳ್ಳಲು ಸೂಚನೆಗಳನ್ನು ನೀಡಲಾಗಿದೆ.

ರೈಲು ಪಾರ್ಸೆಲ್ ವ್ಯಾನ್ ತಪಾಸಣೆಗೆ ಆದೇಶ
ನವೆಂಬರ್ 1 ರಿಂದ ನವೆಂಬರ್ 14 ರವರೆಗೆ ಎಲ್ಲಾ ರೈಲುಗಳ ಪಾರ್ಸೆಲ್ ವ್ಯಾನ್‌ಗಳನ್ನು ಸಂಪೂರ್ಣವಾಗಿ ಪರಿಶೀಲಿಸಲು ರೈಲ್ವೆ ಮಂಡಳಿ ಆದೇಶಿಸಿದೆ.

ರೈಲ್ವೆ ಮಂಡಳಿಯ ಅಧಿಕಾರಿಯ ಪ್ರಕಾರ, ನವೆಂಬರ್ 14ರಂದು ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತಿದೆ. ಆದ್ದರಿಂದ ಯಾವುದೇ ಪಟಾಕಿ ಅಥವಾ ಯಾವುದೇ ದಹಿಸುವ ವಸ್ತುಗಳನ್ನು ರೈಲ್ವೆ ಪಾರ್ಸೆಲ್ ಸಾಗಿಸದಂತೆ ಎಚ್ಚರವಹಿಸಬೇಕು.

ಮತ್ತಷ್ಟು ಓದಿ: ರೈಲ್ವೆ ಎಂಜಿನ್​ನಲ್ಲಿ ಕಾಣಿಸಿಕೊಂಡ ಬೆಂಕಿ, ಗೇಟ್​ಮ್ಯಾನ್ ಯಶ್​ಪಾಲ್​ ಸಮಯ ಪ್ರಜ್ಞೆಯಿಂದ ನಾರಾರು ಜೀವಗಳು ಅಪಾಯದಿಂದ ಪಾರು

ರೈಲುಗಳಲ್ಲಿನ ಎಲ್ಲಾ ಡಸ್ಟ್‌ಬಿನ್‌ಗಳನ್ನು ಪರಿಶೀಲಿಸಲು ಆದೇಶ
ಪಾರ್ಸೆಲ್ ವ್ಯಾನ್‌ಗಳ ಜೊತೆಗೆ ರೈಲುಗಳ ಎಲ್ಲಾ ಡಸ್ಟ್‌ಬಿನ್‌ಗಳನ್ನು ಪರಿಶೀಲಿಸಲು ಸೂಚನೆಗಳನ್ನು ನೀಡಲಾಗಿದೆ ಎಂದು ಅಧಿಕಾರಿ ಹೇಳುತ್ತಾರೆ. ಇದರಿಂದ ಬೀಡಿ, ಸಿಗರೇಟ್, ಬೆಂಕಿಪೆಟ್ಟಿಗೆಯಂತಹ ಯಾವುದೇ ದಹನಕಾರಿ ವಸ್ತುಗಳನ್ನು ತೆಗೆಯಬಹುದು. ರೈಲ್ವೇ ಮಂಡಳಿಯ ಈ ಸೂಚನೆಯ ನಂತರ ಎಲ್ಲ ವಲಯಗಳು ಕೂಡಲೇ ಅನುಷ್ಠಾನಗೊಳಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚನೆ ನೀಡಿದೆ.

ರೈಲುಗಳಲ್ಲಿ ಬೆಂಕಿ ಕಾಣಿಸಿಕೊಂಡು ಹಲವು ಅಪಘಾತಗಳು ಸಂಭವಿಸಿವೆ
ಇತ್ತೀಚಿನ ತಿಂಗಳುಗಳಲ್ಲಿ, ರೈಲುಗಳಲ್ಲಿ ಬೆಂಕಿಯ ಅನೇಕ ಘಟನೆಗಳು ಬೆಳಕಿಗೆ ಬಂದಿವೆ. ಅಕ್ಟೋಬರ್ 25 ರಂದು, ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯಲ್ಲಿ ಪಾತಾಳಕೋಟ್ ಎಕ್ಸ್‌ಪ್ರೆಸ್‌ನ ಕೆಲವು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡರೆ, ಅಕ್ಟೋಬರ್ 16 ರಂದು ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯಲ್ಲಿ ಪ್ಯಾಸೆಂಜರ್ ರೈಲಿನ ಐದು ಬೋಗಿಗಳು ಸುಟ್ಟು ಬೂದಿಯಾಗಿದ್ದವು.
ಇದಲ್ಲದೆ, ಆಗಸ್ಟ್‌ನಲ್ಲಿ ಬೆಂಗಳೂರು ಸಿಟಿ ರೈಲು ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಉದ್ಯಾನ್ ಎಕ್ಸ್‌ಪ್ರೆಸ್‌ನ ಎರಡು ಹವಾನಿಯಂತ್ರಿತ ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡ ಪ್ರಕರಣವೂ ನಡೆದಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us