AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Constitution Day 2021: ಸಂವಿಧಾನ ದಿನದ ವಿಶೇಷ ಹಾಗೂ ಆಚರಣೆಯ ಉದ್ದೇಶವೇನು?; ಇಲ್ಲಿದೆ ಮಾಹಿತಿ

ಸಂವಿಧಾನ ದಿನ 2021: ಭಾರತವು ಇಂದು ಅಂದರೆ ಶುಕ್ರವಾರ (ನವೆಂಬರ್ 26) ಸಂವಿಧಾನ ದಿನವನ್ನು ಆಚರಿಸುತ್ತಿದೆ. ಸಂವಿಧಾನದ ದಿನವನ್ನು ಏಕೆ ಆಚರಿಸಲಾಗುತ್ತದೆ? ಇದರ ಉದ್ದೇಶವೇನು? ಇಂದು ದೇಶದಲ್ಲಿ ಏನೆಲ್ಲಾ ಕಾರ್ಯಕ್ರಮಗಳು ನಡೆಯುತ್ತಿವೆ? ಈ ಕುರಿತು ಇಲ್ಲಿ ಮಾಹಿತಿ ನೀಡಲಾಗಿದೆ.

Constitution Day 2021: ಸಂವಿಧಾನ ದಿನದ ವಿಶೇಷ ಹಾಗೂ ಆಚರಣೆಯ ಉದ್ದೇಶವೇನು?; ಇಲ್ಲಿದೆ ಮಾಹಿತಿ
ಭಾರತ ಸಂವಿಧಾನ
TV9 Web
| Edited By: |

Updated on:Nov 26, 2021 | 12:25 PM

Share

ಭಾರತವು ಇಂದು ಅಂದರೆ ಶುಕ್ರವಾರ (ನವೆಂಬರ್ 26) ಸಂವಿಧಾನ ದಿನವನ್ನು (Constitution day)  ಆಚರಿಸುತ್ತಿದೆ. ಸಂವಿಧಾನದ ದಿನದ ಮಹತ್ವ, ಆಚರಣೆಯ ಹಿನ್ನೆಲೆ ಮತ್ತು ಉದ್ದೇಶ, ಇಂದು ದೇಶದಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳ ಕುರಿತು ಇಲ್ಲಿ ಮಾಹಿತಿ ನೀಡಲಾಗಿದೆ. ನವೆಂಬರ್ 26, 1949 ರಂದು ಭಾರತದ ಸಂವಿಧಾನ ಸಭೆಯು ಔಪಚಾರಿಕವಾಗಿ ಅತ್ಯುನ್ನತ ಕಾನೂನು ದಾಖಲೆಯಾದ ಸಂವಿಧಾನವನ್ನು ಅಂಗೀಕರಿಸಿತು. ಆದ್ದರಿಂದಲೇ ಪ್ರತಿ ವರ್ಷ ನವೆಂಬರ್ 26 ರಂದು ಸಂವಿಧಾನದ ದಿನವನ್ನು ಆಚರಿಸಲಾಗುತ್ತದೆ. ಸಂವಿಧಾನವು ಅಧಿಕೃತವಾಗಿ ಜಾರಿಗೆ ಬಂದಿದ್ದು, ಜನವರಿ 26, 1950 ರಂದು. ಆ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ.

ದೇಶದ ಯುವಜನರಿಗೆ ಸಂವಿಧಾನದ ಮೌಲ್ಯಗಳನ್ನು ತಿಳಿಸುವ ಉದ್ದೇಶದಿಂದ ಸಂವಿಧಾನ ದಿನವನ್ನು ಆಚರಿಸಲಾಗುತ್ತದೆ. ಸಂವಿಧಾನ ಶಿಲ್ಪಿ ಡಾ. ಭೀಮರಾವ್ ಅಂಬೇಡ್ಕರ್ ಅವರು ಭಾರತೀಯ ನಾಗರಿಕರಿಗೆ ಸಂಬಂಧಿಸಿದ ಹಕ್ಕುಗಳು ಮತ್ತು ಕಾನೂನುಗಳನ್ನು ವಿವರಿಸುವ ಕಾನೂನು ದಾಖಲೆಯ ತಯಾರಿಕೆಯಲ್ಲಿ ಪ್ರಮುಖ ಪಾತ್ರವನ್ನು ಹೊಂದಿದ್ದರಿಂದ, ಈ ಆಚರಣೆಯನ್ನು ಅವರ ಪರಂಪರೆಗೆ ಗೌರವ ಸಲ್ಲಿಸುವಂತೆಯೂ ಕಾಣಬಹುದಾಗಿದೆ.

mygov.in ಸಂವಿಧಾನ ದಿನದ ಉದ್ದೇಶವನ್ನು ಮತ್ತಷ್ಟು ವಿವರಿಸುತ್ತಾ, “ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು 19 ನವೆಂಬರ್ 2015 ರಂದು ಸಂವಿಧಾನದ ಮೌಲ್ಯಗಳನ್ನು ಪ್ರಜೆಗಳಿಗೆ ಮತ್ತಷ್ಟು ಪ್ರಚುರಪಡಿಸಲು ಪ್ರತಿ ವರ್ಷ ನವೆಂಬರ್ 26 ನೇ ತಾರೀಕಿನಂದು ‘ಸಂವಿಧಾನ ದಿನ’ ಎಂದು ಆಚರಿಸಲು ಭಾರತ ಸರ್ಕಾರಕ್ಕೆ ಸೂಚಿಸಿದೆ” ಎಂದು ಹೇಳಿದೆ.

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ದೇಶವನ್ನುದ್ದೇಶಿಸಿ, ಸಂವಿಧಾನ ದಿನದಂದು ಮಾತನಾಡಿದ್ದಾರೆ. ಆ ಕಾರ್ಯಕ್ರಮದ ಲೈವ್ ಇಲ್ಲಿ ಲಭ್ಯವಿದೆ.

ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರೊಂದಿಗೆ ಸಂವಿಧಾನ ಓದಿನ ಕಾರ್ಯಕ್ರಮ ನಡೆಯುತ್ತಿದ್ದು, 23 ಭಾಷೆಗಳಲ್ಲಿ ಸರ್ಕಾರಿ ವೆಬ್​ಸೈಟ್​ನಲ್ಲಿ ಸಂವಿಧಾನ ಲಭ್ಯವಾಗುವಂತೆ ಮಾಡಲಾಗಿದೆ. ಇದರೊಂದಿಗೆ ರಸಪ್ರಶ್ನೆ ಕಾರ್ಯಕ್ರಮವನ್ನೂ ಆಯೋಜಿಸಲಾಗಿದ್ದು, ಜನರು ಭಾಗವಹಿಸಬಹುದು. ಕಾರ್ಯಕ್ರಮದಲ್ಲಿ ಭಾಗಿಯಾದವರಿಗೆ ಡಿಜಿಟಲ್ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ.

ಇದನ್ನೂ ಓದಿ:

Constitution Day 2021: ಸಂಸತ್​ ಭಾಷಣದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ; ಸಂವಿಧಾನ ಆಧುನಿಕ ಭಗವದ್ಗೀತೆ ಎಂದ ಓಂ ಬಿರ್ಲಾ

Wedding Card: ಸಂವಿಧಾನ ಥೀಮ್​ನೊಂದಿಗೆ ವಕೀಲರ ವಿಶಿಷ್ಟ ವೆಡ್ಡಿಂಗ್ ಕಾರ್ಡ್​​; ಅಪರೂಪದ ಲಗ್ನ ಪತ್ರಿಕೆ ಇಲ್ಲಿದೆ ನೋಡಿ

Published On - 12:20 pm, Fri, 26 November 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್