AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Constitution Day 2021: ಸಂವಿಧಾನ ದಿನದ ವಿಶೇಷ ಹಾಗೂ ಆಚರಣೆಯ ಉದ್ದೇಶವೇನು?; ಇಲ್ಲಿದೆ ಮಾಹಿತಿ

ಸಂವಿಧಾನ ದಿನ 2021: ಭಾರತವು ಇಂದು ಅಂದರೆ ಶುಕ್ರವಾರ (ನವೆಂಬರ್ 26) ಸಂವಿಧಾನ ದಿನವನ್ನು ಆಚರಿಸುತ್ತಿದೆ. ಸಂವಿಧಾನದ ದಿನವನ್ನು ಏಕೆ ಆಚರಿಸಲಾಗುತ್ತದೆ? ಇದರ ಉದ್ದೇಶವೇನು? ಇಂದು ದೇಶದಲ್ಲಿ ಏನೆಲ್ಲಾ ಕಾರ್ಯಕ್ರಮಗಳು ನಡೆಯುತ್ತಿವೆ? ಈ ಕುರಿತು ಇಲ್ಲಿ ಮಾಹಿತಿ ನೀಡಲಾಗಿದೆ.

Constitution Day 2021: ಸಂವಿಧಾನ ದಿನದ ವಿಶೇಷ ಹಾಗೂ ಆಚರಣೆಯ ಉದ್ದೇಶವೇನು?; ಇಲ್ಲಿದೆ ಮಾಹಿತಿ
ಭಾರತ ಸಂವಿಧಾನ
TV9 Web
| Updated By: shivaprasad.hs|

Updated on:Nov 26, 2021 | 12:25 PM

Share

ಭಾರತವು ಇಂದು ಅಂದರೆ ಶುಕ್ರವಾರ (ನವೆಂಬರ್ 26) ಸಂವಿಧಾನ ದಿನವನ್ನು (Constitution day)  ಆಚರಿಸುತ್ತಿದೆ. ಸಂವಿಧಾನದ ದಿನದ ಮಹತ್ವ, ಆಚರಣೆಯ ಹಿನ್ನೆಲೆ ಮತ್ತು ಉದ್ದೇಶ, ಇಂದು ದೇಶದಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳ ಕುರಿತು ಇಲ್ಲಿ ಮಾಹಿತಿ ನೀಡಲಾಗಿದೆ. ನವೆಂಬರ್ 26, 1949 ರಂದು ಭಾರತದ ಸಂವಿಧಾನ ಸಭೆಯು ಔಪಚಾರಿಕವಾಗಿ ಅತ್ಯುನ್ನತ ಕಾನೂನು ದಾಖಲೆಯಾದ ಸಂವಿಧಾನವನ್ನು ಅಂಗೀಕರಿಸಿತು. ಆದ್ದರಿಂದಲೇ ಪ್ರತಿ ವರ್ಷ ನವೆಂಬರ್ 26 ರಂದು ಸಂವಿಧಾನದ ದಿನವನ್ನು ಆಚರಿಸಲಾಗುತ್ತದೆ. ಸಂವಿಧಾನವು ಅಧಿಕೃತವಾಗಿ ಜಾರಿಗೆ ಬಂದಿದ್ದು, ಜನವರಿ 26, 1950 ರಂದು. ಆ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ.

ದೇಶದ ಯುವಜನರಿಗೆ ಸಂವಿಧಾನದ ಮೌಲ್ಯಗಳನ್ನು ತಿಳಿಸುವ ಉದ್ದೇಶದಿಂದ ಸಂವಿಧಾನ ದಿನವನ್ನು ಆಚರಿಸಲಾಗುತ್ತದೆ. ಸಂವಿಧಾನ ಶಿಲ್ಪಿ ಡಾ. ಭೀಮರಾವ್ ಅಂಬೇಡ್ಕರ್ ಅವರು ಭಾರತೀಯ ನಾಗರಿಕರಿಗೆ ಸಂಬಂಧಿಸಿದ ಹಕ್ಕುಗಳು ಮತ್ತು ಕಾನೂನುಗಳನ್ನು ವಿವರಿಸುವ ಕಾನೂನು ದಾಖಲೆಯ ತಯಾರಿಕೆಯಲ್ಲಿ ಪ್ರಮುಖ ಪಾತ್ರವನ್ನು ಹೊಂದಿದ್ದರಿಂದ, ಈ ಆಚರಣೆಯನ್ನು ಅವರ ಪರಂಪರೆಗೆ ಗೌರವ ಸಲ್ಲಿಸುವಂತೆಯೂ ಕಾಣಬಹುದಾಗಿದೆ.

mygov.in ಸಂವಿಧಾನ ದಿನದ ಉದ್ದೇಶವನ್ನು ಮತ್ತಷ್ಟು ವಿವರಿಸುತ್ತಾ, “ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು 19 ನವೆಂಬರ್ 2015 ರಂದು ಸಂವಿಧಾನದ ಮೌಲ್ಯಗಳನ್ನು ಪ್ರಜೆಗಳಿಗೆ ಮತ್ತಷ್ಟು ಪ್ರಚುರಪಡಿಸಲು ಪ್ರತಿ ವರ್ಷ ನವೆಂಬರ್ 26 ನೇ ತಾರೀಕಿನಂದು ‘ಸಂವಿಧಾನ ದಿನ’ ಎಂದು ಆಚರಿಸಲು ಭಾರತ ಸರ್ಕಾರಕ್ಕೆ ಸೂಚಿಸಿದೆ” ಎಂದು ಹೇಳಿದೆ.

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ದೇಶವನ್ನುದ್ದೇಶಿಸಿ, ಸಂವಿಧಾನ ದಿನದಂದು ಮಾತನಾಡಿದ್ದಾರೆ. ಆ ಕಾರ್ಯಕ್ರಮದ ಲೈವ್ ಇಲ್ಲಿ ಲಭ್ಯವಿದೆ.

ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರೊಂದಿಗೆ ಸಂವಿಧಾನ ಓದಿನ ಕಾರ್ಯಕ್ರಮ ನಡೆಯುತ್ತಿದ್ದು, 23 ಭಾಷೆಗಳಲ್ಲಿ ಸರ್ಕಾರಿ ವೆಬ್​ಸೈಟ್​ನಲ್ಲಿ ಸಂವಿಧಾನ ಲಭ್ಯವಾಗುವಂತೆ ಮಾಡಲಾಗಿದೆ. ಇದರೊಂದಿಗೆ ರಸಪ್ರಶ್ನೆ ಕಾರ್ಯಕ್ರಮವನ್ನೂ ಆಯೋಜಿಸಲಾಗಿದ್ದು, ಜನರು ಭಾಗವಹಿಸಬಹುದು. ಕಾರ್ಯಕ್ರಮದಲ್ಲಿ ಭಾಗಿಯಾದವರಿಗೆ ಡಿಜಿಟಲ್ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ.

ಇದನ್ನೂ ಓದಿ:

Constitution Day 2021: ಸಂಸತ್​ ಭಾಷಣದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ; ಸಂವಿಧಾನ ಆಧುನಿಕ ಭಗವದ್ಗೀತೆ ಎಂದ ಓಂ ಬಿರ್ಲಾ

Wedding Card: ಸಂವಿಧಾನ ಥೀಮ್​ನೊಂದಿಗೆ ವಕೀಲರ ವಿಶಿಷ್ಟ ವೆಡ್ಡಿಂಗ್ ಕಾರ್ಡ್​​; ಅಪರೂಪದ ಲಗ್ನ ಪತ್ರಿಕೆ ಇಲ್ಲಿದೆ ನೋಡಿ

Published On - 12:20 pm, Fri, 26 November 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ