AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಭಾರತದ ಮಾರುಕಟ್ಟೆಯಲ್ಲಿ ಯಾವಾಗ ಸಿಗಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

ಅನೇಕ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ಕೊರೊನಾ ಲಸಿಕೆ ನೀಡಲು ದೊಡ್ಡ ಪ್ರಮಾಣದಲ್ಲಿ ಔಷಧಕ್ಕೆ ಬೇಡಿಕೆ ಇಡುತ್ತಿವೆ. ಇಂಥ ಕಂಪನಿಗಳಿಗೆ ಮಾರ್ಚ್-ಏಪ್ರಿಲ್​​ನಲ್ಲಿ ಔಷಧ ಪೂರೈಕೆ ಮಾಡಲು ಎಸ್ಎಐಐ ನಿರ್ಧರಿಸಿದೆ.

ಕೊರೊನಾ ಲಸಿಕೆ ಭಾರತದ ಮಾರುಕಟ್ಟೆಯಲ್ಲಿ ಯಾವಾಗ ಸಿಗಲಿದೆ ಗೊತ್ತಾ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Skanda
| Edited By: |

Updated on: Dec 03, 2020 | 6:37 PM

Share

ನವದೆಹಲಿ: ವರ್ಷದ ಹಿಂದೆ ಚೀನಾದಲ್ಲಿ ಮೊಟ್ಟ ಮೊದಲ ಬಾರಿಗೆ ಕಾಣಿಸಿಕೊಂಡಿದ್ದ ಕೊರೊನಾ ವೈರಸ್ ಇಂದಿಗೂ ವಿಶ್ವಾದ್ಯಂತ ತನ್ನ ಅಬ್ಬರವನ್ನು ಮುಂದುವರಿಸಿದೆ. ಲಕ್ಷಾಂತರ ಮಂದಿಯನ್ನು ಬಲಿ ಪಡೆದಿರುವ ಕೊರೊನಾ ವೈರಸ್​​ಗೆ ಲಸಿಕೆ ಸಿದ್ಧವಾಗಿದೆ. ಮಾರ್ಚ್ ವೇಳೆಗೆ ಈ ಔಷಧ ಭಾರತದ ಮಾರುಕಟ್ಟೆಯಲ್ಲಿ ಲಭ್ಯವಿರಲಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಕೊವಿಡ್-19ಕ್ಕೆ ಔಷಧ ಕಂಡು ಹಿಡಿಯಲು ಆಕ್ಸ್​ಫರ್ಡ್ ವಿಶ್ವವಿದ್ಯಾಲಯ ಮತ್ತು ಅಸ್ಟ್ರಾಜೆನೆಕಾ ಸಂಸ್ಥೆಗೆ ಭಾರತದ ಸಂಶೋಧನಾ ಸಂಸ್ಥೆ ಸೆರಮ್ ಇನ್​ಸ್ಟಿಟ್ಯೂಟ್ ಅಫ್ ಇಂಡಿಯಾ (ಎಸ್ಐಐ) ಸಹಕಾರ ನೀಡಿತ್ತು. ಮಾರ್ಚ್ ವೇಳೆಗೆ ಎಸ್ಐಐ ಕೊರೊನಾ ಲಸಿಕೆಯನ್ನು ಭಾರತದಲ್ಲಿ ಮಾರಾಟ ಮಾಡುವ ಸಾಧ್ಯತೆಯಿದೆ.

ಅನೇಕ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ಕೊರೊನಾ ಲಸಿಕೆ ನೀಡಲು ದೊಡ್ಡ ಪ್ರಮಾಣದಲ್ಲಿ ಔಷಧಕ್ಕೆ ಬೇಡಿಕೆ ಇಡುತ್ತಿವೆ. ಇಂಥ ಕಂಪನಿಗಳಿಗೆ ಮಾರ್ಚ್-ಏಪ್ರಿಲ್​​ನಲ್ಲಿ ಔಷಧ ಪೂರೈಕೆ ಮಾಡಲು ಎಸ್ಎಐಐ ನಿರ್ಧರಿಸಿದೆ.

ಕೊರೊನಾ ಲಸಿಕೆ ಮೂರನೇ ಹಂತದ ಪ್ರಯೋಗದಲ್ಲಿದೆ. ಜನವರಿ-ಫೆಬ್ರವರಿ ವೇಳೆಗೆ ಈ ಔಷಧ ಉತ್ಪಾದನೆ ಕಾರ್ಯ ದೊಡ್ಡ ಪ್ರಮಾಣದಲ್ಲಿ ನಡೆಯಲಿದೆ. 500-600 ಕೋಟಿ ರೂಪಾಯಿಗೆ ಈ ಲಸಿಕೆಯನ್ನು ಸರ್ಕಾರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಎಸ್​ಐಐ ಹೇಳಿದೆ.

ಕಳೆದ ವರ್ಷ ನವೆಂಬರ್​ ತಿಂಗಳಲ್ಲಿ ಮೊಟ್ಟ ಮೊದಲ ಬಾರಿಗೆ ಚೀನಾದಲ್ಲಿ ಕೊರೋನಾ ವೈರಸ್​ ಕಾಣಿಸಿಕೊಂಡಿತ್ತು. ಜನವರಿ ವೇಳೆಗೆ ಈ ವೈರಸ್​ ತನ್ನ ರೌದ್ರಾವತಾರ ತೋರಿತ್ತು. ನಂತರ ನಿಧಾನವಾಗಿ ಇತರ ರಾಷ್ಟ್ರಗಳಿಗೂ ಹಬ್ಬಿತ್ತು. ಈಗ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ​ ಅಮೆರಿಕ ಮೊದಲ ಸ್ಥಾನದಲ್ಲಿ, ಭಾರತ ಎರಡನೇ ಸ್ಥಾನದಲ್ಲಿದೆ. ಭಾರತದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ ಒಂದು ಕೋಟಿ ಸಮೀಪಿಸಿದೆ.

ಲಸಿಕೆ ಸಿಗೋ ಮುನ್ನ ಸಜ್ಜಾಗ್ತಿದೆ ‘ಕೊರೊನಾ ಮಾಫಿಯಾ’: ಭಾರತಕ್ಕೆ ಇಂಟರ್‌ಪೋಲ್ ಎಚ್ಚರಿಕೆ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!