AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಭಾರತದ ಮಾರುಕಟ್ಟೆಯಲ್ಲಿ ಯಾವಾಗ ಸಿಗಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

ಅನೇಕ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ಕೊರೊನಾ ಲಸಿಕೆ ನೀಡಲು ದೊಡ್ಡ ಪ್ರಮಾಣದಲ್ಲಿ ಔಷಧಕ್ಕೆ ಬೇಡಿಕೆ ಇಡುತ್ತಿವೆ. ಇಂಥ ಕಂಪನಿಗಳಿಗೆ ಮಾರ್ಚ್-ಏಪ್ರಿಲ್​​ನಲ್ಲಿ ಔಷಧ ಪೂರೈಕೆ ಮಾಡಲು ಎಸ್ಎಐಐ ನಿರ್ಧರಿಸಿದೆ.

ಕೊರೊನಾ ಲಸಿಕೆ ಭಾರತದ ಮಾರುಕಟ್ಟೆಯಲ್ಲಿ ಯಾವಾಗ ಸಿಗಲಿದೆ ಗೊತ್ತಾ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Skanda
| Edited By: |

Updated on: Dec 03, 2020 | 6:37 PM

Share

ನವದೆಹಲಿ: ವರ್ಷದ ಹಿಂದೆ ಚೀನಾದಲ್ಲಿ ಮೊಟ್ಟ ಮೊದಲ ಬಾರಿಗೆ ಕಾಣಿಸಿಕೊಂಡಿದ್ದ ಕೊರೊನಾ ವೈರಸ್ ಇಂದಿಗೂ ವಿಶ್ವಾದ್ಯಂತ ತನ್ನ ಅಬ್ಬರವನ್ನು ಮುಂದುವರಿಸಿದೆ. ಲಕ್ಷಾಂತರ ಮಂದಿಯನ್ನು ಬಲಿ ಪಡೆದಿರುವ ಕೊರೊನಾ ವೈರಸ್​​ಗೆ ಲಸಿಕೆ ಸಿದ್ಧವಾಗಿದೆ. ಮಾರ್ಚ್ ವೇಳೆಗೆ ಈ ಔಷಧ ಭಾರತದ ಮಾರುಕಟ್ಟೆಯಲ್ಲಿ ಲಭ್ಯವಿರಲಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಕೊವಿಡ್-19ಕ್ಕೆ ಔಷಧ ಕಂಡು ಹಿಡಿಯಲು ಆಕ್ಸ್​ಫರ್ಡ್ ವಿಶ್ವವಿದ್ಯಾಲಯ ಮತ್ತು ಅಸ್ಟ್ರಾಜೆನೆಕಾ ಸಂಸ್ಥೆಗೆ ಭಾರತದ ಸಂಶೋಧನಾ ಸಂಸ್ಥೆ ಸೆರಮ್ ಇನ್​ಸ್ಟಿಟ್ಯೂಟ್ ಅಫ್ ಇಂಡಿಯಾ (ಎಸ್ಐಐ) ಸಹಕಾರ ನೀಡಿತ್ತು. ಮಾರ್ಚ್ ವೇಳೆಗೆ ಎಸ್ಐಐ ಕೊರೊನಾ ಲಸಿಕೆಯನ್ನು ಭಾರತದಲ್ಲಿ ಮಾರಾಟ ಮಾಡುವ ಸಾಧ್ಯತೆಯಿದೆ.

ಅನೇಕ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ಕೊರೊನಾ ಲಸಿಕೆ ನೀಡಲು ದೊಡ್ಡ ಪ್ರಮಾಣದಲ್ಲಿ ಔಷಧಕ್ಕೆ ಬೇಡಿಕೆ ಇಡುತ್ತಿವೆ. ಇಂಥ ಕಂಪನಿಗಳಿಗೆ ಮಾರ್ಚ್-ಏಪ್ರಿಲ್​​ನಲ್ಲಿ ಔಷಧ ಪೂರೈಕೆ ಮಾಡಲು ಎಸ್ಎಐಐ ನಿರ್ಧರಿಸಿದೆ.

ಕೊರೊನಾ ಲಸಿಕೆ ಮೂರನೇ ಹಂತದ ಪ್ರಯೋಗದಲ್ಲಿದೆ. ಜನವರಿ-ಫೆಬ್ರವರಿ ವೇಳೆಗೆ ಈ ಔಷಧ ಉತ್ಪಾದನೆ ಕಾರ್ಯ ದೊಡ್ಡ ಪ್ರಮಾಣದಲ್ಲಿ ನಡೆಯಲಿದೆ. 500-600 ಕೋಟಿ ರೂಪಾಯಿಗೆ ಈ ಲಸಿಕೆಯನ್ನು ಸರ್ಕಾರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಎಸ್​ಐಐ ಹೇಳಿದೆ.

ಕಳೆದ ವರ್ಷ ನವೆಂಬರ್​ ತಿಂಗಳಲ್ಲಿ ಮೊಟ್ಟ ಮೊದಲ ಬಾರಿಗೆ ಚೀನಾದಲ್ಲಿ ಕೊರೋನಾ ವೈರಸ್​ ಕಾಣಿಸಿಕೊಂಡಿತ್ತು. ಜನವರಿ ವೇಳೆಗೆ ಈ ವೈರಸ್​ ತನ್ನ ರೌದ್ರಾವತಾರ ತೋರಿತ್ತು. ನಂತರ ನಿಧಾನವಾಗಿ ಇತರ ರಾಷ್ಟ್ರಗಳಿಗೂ ಹಬ್ಬಿತ್ತು. ಈಗ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ​ ಅಮೆರಿಕ ಮೊದಲ ಸ್ಥಾನದಲ್ಲಿ, ಭಾರತ ಎರಡನೇ ಸ್ಥಾನದಲ್ಲಿದೆ. ಭಾರತದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ ಒಂದು ಕೋಟಿ ಸಮೀಪಿಸಿದೆ.

ಲಸಿಕೆ ಸಿಗೋ ಮುನ್ನ ಸಜ್ಜಾಗ್ತಿದೆ ‘ಕೊರೊನಾ ಮಾಫಿಯಾ’: ಭಾರತಕ್ಕೆ ಇಂಟರ್‌ಪೋಲ್ ಎಚ್ಚರಿಕೆ

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ