AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವಿಎಂ ಹೇಗೆ ಕೆಲಸ ಮಾಡುತ್ತೆ? ಸುಪ್ರೀಂಕೋರ್ಟ್​ಗೆ ಮಾಹಿತಿ ಕೊಟ್ಟ ಚುನಾವಣಾ ಆಯೋಗ

Working of EVM: ಎಲೆಕ್ಟ್ರಾನಿಕ್ ವೋಟಿಂಗ್ ಮೆಷೀನ್​ನಲ್ಲಿ ಬಿದ್ದ ವೋಟಿಂಗ್ ಅನ್ನು ವಿವಿಪ್ಯಾಟ್ ಮತದಿಂದ ದೃಢೀಕರಿಸುವ ವ್ಯವಸ್ಥೆ ಆಗಬೇಕು ಎಂದು ಸುಪ್ರೀಂಕೋರ್ಟ್​ನಲ್ಲಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ನಡೆಯುತ್ತಿದೆ. ಇವಿಎಂ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಈ ವೇಳೆ ನ್ಯಾಯಪೀಠದ ಮುಂದೆ ಚುನಾವಣಾ ಆಯೋಗದ ಪ್ರತಿನಿಧಿಗಳು ವಿವರಣೆ ನೀಡಿದ್ದಾರೆ. ಇವಿಎಂನಲ್ಲಿ ಲೋಪವಾಗುವ ಸಾಧ್ಯತೆ ಯಾಕಿರುವುದಿಲ್ಲ ಎಂದು ಸುಪ್ರೀಂಕೋರ್ಟ್​ಗೆ ಮನದಟ್ಟು ಮಾಡಿಕೊಡುವ ಪ್ರಯತ್ನವಾಗಿದೆ.

ಇವಿಎಂ ಹೇಗೆ ಕೆಲಸ ಮಾಡುತ್ತೆ? ಸುಪ್ರೀಂಕೋರ್ಟ್​ಗೆ ಮಾಹಿತಿ ಕೊಟ್ಟ ಚುನಾವಣಾ ಆಯೋಗ
ಇವಿಎಂ ಮೆಷೀನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 18, 2024 | 5:19 PM

Share

ನವದೆಹಲಿ, ಏಪ್ರಿಲ್ 18: ಎಲ್ಲಾ ಇವಿಎಂ ಮೆಷೀನ್​ಗಳನ್ನು (EVM machine) ಪ್ರತಿಯೊಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಅಣಕು ಮತದಾನದ ಮೂಲಕ ಪರಿಶೀಲನೆ ನಡೆಸಲಾಗುತ್ತದೆ ಎಂದು ಚುನಾವಣಾ ಆಯೋಗವು (Election Commission) ಇವಿಎಂ ಮತದಾನ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಸುಪ್ರೀಂಕೋರ್ಟ್​ಗೆ (Supreme Court) ಮಾಹಿತಿ ನೀಡಿದೆ. ಎಲ್ಲಾ ವಿವಿಪ್ಯಾಟ್ ದಾಖಲೆಗಳನ್ನು ಇವಿಎಂನೊಂದಿಗೆ ಪೂರ್ಣವಾಗಿ ತಾಳೆಯಾಗಬೇಕೆಂದು ಕೋರಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಡೆಸುತ್ತಿದೆ. ಈ ವೇಳೆ ಚುನಾವಣಾ ಆಯೋಗವು ಇವಿಎಂ ಮತದಾನ ವ್ಯವಸ್ಥೆ ಬಗ್ಗೆ ಕೋರ್ಟ್​ಗೆ ವಿವರಣೆ ಕೊಟ್ಟಿದೆ.

ಇವಿಎಂ ಮೆಷೀನ್​ನಲ್ಲಿ ಯಾವ ಬಟನ್ ಯಾವ ಅಭ್ಯರ್ಥಿಗೆ ಹೋಗುತ್ತದೆ ಎಂಬುದು ಇವಿಎಂ ತಯಾರಕರಿಗೆ ಗೊತ್ತಿರುವುದಿಲ್ಲ. ಯಾವ ಇವಿಎಂ ಯಾವ ರಾಜ್ಯಕ್ಕೆ ಹೋಗುತ್ತದೆ, ಯಾವ ಕ್ಷೇತ್ರಕ್ಕೆ ಹೋಗುತ್ತದೆ ಎಂಬ ಮಾಹಿತಿಯೂ ತಿಳಿದಿರುವುದಿಲ್ಲ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇವಿಎಂ ವೋಟಿಂಗ್ ಯೂನಿಟ್​ನಲ್ಲಿ ಬ್ಯಾಲಟ್ ಯೂನಿಟ್, ಕಂಟ್ರೋಲ್ ಯೂನಿಟ್ ಮತ್ತು ವಿವಿಪ್ಯಾಟ್ ಯೂನಿಟ್ ಎಂಬ ಮೂರು ವಿಭಾಗಗಳಿರುತ್ತವೆ. ಇದರಲ್ಲಿ ವಿವಿಪ್ಯಾಟ್ ಒಂದು ರೀತಿಯಲ್ಲಿ ಪ್ರಿಂಟರ್ ರೀತಿ. ಮತದಾನ ನಡೆಯಲು ಏಳು ಮುಂಚೆ ವಿವಿಪ್ಯಾಟ್ ಮೆಷೀನ್​ನ ಫ್ಲ್ಯಾಷ್ ಮೆಮೋರಿಯಲ್ಲಿ ಅಭ್ಯರ್ಥಿಗಳಿಗೆ ಅಲಾಟ್ ಆದ ಚಿಹ್ನೆಗಳನ್ನು ಅಪ್​ಲೋಡ್ ಮಾಡಲಾಗುತ್ತದೆ. ಇದು ಅಭ್ಯರ್ಥಿಗಳು ಅಥವಾ ಅವರ ಪ್ರತಿನಿಧಿಗಳ ಸಮ್ಮುಖದಲ್ಲೇ ನಡೆಯುತ್ತದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಸುಪ್ರೀಂ ನ್ಯಾಯಪೀಠಕ್ಕೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ಬೇಕಂತಲೇ ಮಾವಿನ ಹಣ್ಣು ತಿನ್ನುತ್ತಿದ್ದಾರೆ: ಇಡಿ ದೂರು

ಬ್ಯಾಲಟ್ ಯೂನಿಟ್​ನಲ್ಲಿ ಮೂಲದಲ್ಲಿ ಕೇವಲ ಬಟನ್​ಗಳು ಇರುತ್ತವೆ. ಇವುಗಳಿಗೆ ಅಭ್ಯರ್ಥಿಗಳ ಚಿಹ್ನೆ ನಂತರದಲ್ಲಿ ನಮೂದಿಸಲಾಗುತ್ತದೆ. ಬಟನ್ ಒತ್ತಿದಾಗ ಬ್ಯಾಲಟ್ ಯೂನಿಟ್​ನಿಂದ ಕಂಟ್ರೋಲ್ ಯೂನಿಟ್​ಗೆ ಸಂದೇಶ ಹೋಗುತ್ತದೆ. ಇದು ವಿವಿಪ್ಯಾಟ್ ಯೂನಿಟ್​ಗೆ ಅಲರ್ಟ್ ಹೊರಡಿಸುತ್ತದೆ. ಒತ್ತಲಾಗಿರುವ ಬಟನ್​ಗೆ ಜೋಡಿತವಾದ ಚಿಹ್ನೆಯನ್ನು ವಿವಿಪ್ಯಾಟ್ ಯೂನಿಟ್ ಪ್ರಿಂಟ್ ಮಾಡುತ್ತದೆ ಎಂದು ಎಲೆಕ್ಷನ್ ಕಮಿಷನ್ ಪ್ರತಿನಿಧಿಗಳು ಕೋರ್ಟ್​ನಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ