AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗ್ಪುರದಲ್ಲಿರುವ ಆರ್​ಎಸ್​ಎಸ್​ ಪ್ರಧಾನ ಕಚೇರಿ ಸುತ್ತಲಿನ ಪ್ರದೇಶ ಪರಿಶೀಲನೆ ನಡೆಸಿರುವ ಭಯೋತ್ಪಾದಕರು; ಸ್ಥಳದಲ್ಲಿ ಹೈಅಲರ್ಟ್​, ಬಿಗಿ ಭದ್ರತೆ

ಸದ್ಯ ಆರ್​ಎಸ್​ಎಸ್​ ಪ್ರಧಾನ ಕಚೇರಿ, ರೇಷಿಮ್​ಬಾಗ್​ನಲ್ಲಿರುವ ಹೆಡ್ಗೆವಾರ್​ ಭವನ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಭದ್ರತೆ ಪ್ರಮಾಣ ಹೆಚ್ಚಿಸಲಾಗಿದೆ. ಈ ಮಾರ್ಗವಾಗಿ ಚಲಿಸುವ ಪ್ರತಿಯೊಂದು ವಾಹನ, ವ್ಯಕ್ತಿಗಳನ್ನೂ ತಪಾಸಣೆಗೆ ಒಳಪಡಿಸಲಾಗುವುದು ಎಂದು ಅಮಿತೇಶ್​ಕುಮಾರ್​ ತಿಳಿಸಿದ್ದಾರೆ.

ನಾಗ್ಪುರದಲ್ಲಿರುವ ಆರ್​ಎಸ್​ಎಸ್​ ಪ್ರಧಾನ ಕಚೇರಿ ಸುತ್ತಲಿನ ಪ್ರದೇಶ ಪರಿಶೀಲನೆ ನಡೆಸಿರುವ ಭಯೋತ್ಪಾದಕರು; ಸ್ಥಳದಲ್ಲಿ ಹೈಅಲರ್ಟ್​, ಬಿಗಿ ಭದ್ರತೆ
ಆರ್​ಎಸ್​ಎಸ್​ ಪ್ರಧಾನ ಕಚೇರಿ
TV9 Web
| Edited By: |

Updated on:Jan 08, 2022 | 9:41 AM

Share

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಆರ್​ಎಸ್​ಎಸ್​ (ರಾಷ್ಟ್ರೀಯ ಸ್ವಯಂ ಸೇವಕ ಸಂಘ-RSS)ನ ಪ್ರಧಾನ ಕಚೇರಿ ಮತ್ತು ಹೆಡ್ಗೆವಾರ್ ಭವನಗಳ ಸುತ್ತಲಿನ ಪ್ರದೇಶಗಳಲ್ಲಿ ಜೈಷ್​ ಇ ಮೊಹಮ್ಮದ್(Jaish-e-Mohammed)​ ಭಯೋತ್ಪಾದಕರು ಭೂಪರಿಶೀಲನೆ ಮಾಡಿದ್ದಾರೆ ಎಂದು ನಾಗ್ಪುರ ಪೊಲೀಸ್ ಆಯುಕ್ತ ಅಮಿತೇಶ್​ ಕುಮಾರ್​ ಶುಕ್ರವಾರ ತಿಳಿಸಿದ್ದಾರೆ. ಅದರ ಬೆನ್ನಲ್ಲೇ ಆರ್​ಎಸ್​ಎಸ್​ ಪ್ರಧಾನ ಕಚೇರಿ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಶುಕ್ರವಾರ ಹೈಅಲರ್ಟ್​ ಘೋಷಿಸಲಾಗಿದೆ. ಈ ಪ್ರದೇಶಗಳ ಆಸುಪಾಸು ಡ್ರೋನ್​ ಹಾರಾಟವನ್ನೂ ಕೂಡ ನಿಷೇಧಿಸಿ ನಾಗ್ಪುರ ಪೊಲೀಸ್ ಉನ್ನತ ಅಧಿಕಾರಿ ಆದೇಶ ಹೊರಡಿಸಿದ್ದಾರೆ. ಭದ್ರತೆ ಹೆಚ್ಚಿಸಲಾಗಿದೆ. 

ಇತ್ತೀಚೆಗೆ ಕಾಶ್ಮೀರದಲ್ಲಿ ಉಗ್ರನೊಬ್ಬನನ್ನು ಬಂಧಿಸಲಾಗಿತ್ತು. ಈತ ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಜೈಷ್​ ಇ ಮೊಹಮ್ಮದ್​ಗೆ ಸೇರಿದಾತ ಎಂದು ಹೇಳಲಾಗಿದೆ. ಅವನನ್ನು ವಿಚಾರಣೆ ನಡೆಸುವಾಗ ಸತ್ಯ ಬಾಯ್ಬಿಟ್ಟಿದ್ದ. ನಮ್ಮ ಸಂಘಟನೆಯ ಕೆಲವು ಸದಸ್ಯರು ನಾಗ್ಪುರದ ಆರ್​ಎಸ್​ಎಸ್​ ಕಚೇರಿ ಸಮೀಪ ಭೂಸಮೀಕ್ಷೆ ನಡೆಸಿದ್ದಾಗಿ ಹೇಳಿದ್ದಾನೆ. ಉಗ್ರ ಈ ವಿಚಾರ ತಿಳಿಸಿದ ಬೆನ್ನಲ್ಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ನಾಗ್ಪುರ ಪೊಲೀಸ್ ಆಯುಕ್ತ ಅಮಿತೇಶ್​ ಕುಮಾರ್, ಇತರ ಪೊಲೀಸ್​ ಸಿಬ್ಬಂದಿಯೊಂದಿಗೆ ಆರ್​ಎಸ್​ಎಸ್ ಪ್ರಧಾನ ಕಚೇರಿಗೆ ಭೇಟಿ ಕೊಟ್ಟು ಅಲ್ಲಿನ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಸದ್ಯ ಆರ್​ಎಸ್​ಎಸ್​ ಪ್ರಧಾನ ಕಚೇರಿ, ರೇಷಿಮ್​ಬಾಗ್​ನಲ್ಲಿರುವ ಹೆಡ್ಗೆವಾರ್​ ಭವನ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಭದ್ರತೆ ಪ್ರಮಾಣ ಹೆಚ್ಚಿಸಲಾಗಿದೆ. ಈ ಮಾರ್ಗವಾಗಿ ಚಲಿಸುವ ಪ್ರತಿಯೊಂದು ವಾಹನ, ವ್ಯಕ್ತಿಗಳನ್ನೂ ಸಂಪೂರ್ಣವಾಗಿ ತಪಾಸಣೆಗೆ ಒಳಪಡಿಸಲಾಗುವುದು ಎಂದು ಅಮಿತೇಶ್​ಕುಮಾರ್​ ತಿಳಿಸಿದ್ದಾರೆ. ಆದರೆ ಬೇರೆ ಯಾವುದೇ ಮಾಹಿತಿ ನೀಡಲು ನಿರಾಕರಿಸಿರುವ ಅವರು, ಇದೊಂದು ತುಂಬ ಸೂಕ್ಷ್ಮ ವಿಚಾರ ಎಂದಿದ್ದಾರೆ. ಇನ್ನು ಹೆಸರು ಹೇಳಲು ಇಚ್ಛಿಸದ ಪೊಲೀಸ್ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದು, ಡಿಸೆಂಬರ್​​ನಲ್ಲಿ ಕೆಲವು ದಿನಗಳ ಕಾಲ ನಾಗ್ಪುರದಲ್ಲಿ ಒಂದಷ್ಟು ಭಯೋತ್ಪಾದಕರು ತಂಗಿದ್ದರು ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಅದಕ್ಕೆ ಸಂಬಂಧಪಟ್ಟಂತೆ ಪ್ರಕರಣ ಕೂಡ ದಾಖಲಾಗಿದೆ. ತನಿಖೆಗಾಗಿ ನಾಗ್ಪುರ ಕ್ರೈಂ ಬ್ರ್ಯಾಂಚ್​​ನಿಂದ ತಂಡವನ್ನೂ ರಚಿಸಲಾಗಿದೆ. ಇದೀಗ ಮಾಹಿತಿ ನೀಡಿರುವ ಬಂಧಿತ ಉಗ್ರನೂ ಕೂಡ ಇಲ್ಲಿನ ಆರ್​ಎಸ್​ಎಸ್​ ಪ್ರಧಾನ ಕಚೇರಿ ಸರ್ವೇ ನಡೆಸಿದ್ದ. ಆದರೆ 2021ರ ಜುಲೈಗೂ ಮೊದಲು ನಡೆಸಿದ ಭೂ ಸಮೀಕ್ಷೆಯಲ್ಲಿ ಆತ ಪಾಲ್ಗೊಂಡಿದ್ದ ಎಂದು ಮಾಹಿತಿ ನೀಡಿದ್ದಾರೆ.  ಗಣರಾಜ್ಯೋತ್ಸವ ಸಮೀಪಿಸುತ್ತಿರುವ ಬೆನ್ನಲ್ಲೇ ಭಯೋತ್ಪಾದಕರ ದಾಳಿಯ ಆತಂಕವೂ ಹೆಚ್ಚುತ್ತಿದೆ.

2006ರಲ್ಲಿ ನಾಗ್ಪುರದ ಆರ್​ಎಸ್​ಎಸ್​ ಪ್ರಧಾನ ಕಚೇರಿಯ ಮೇಲೆ ದಾಳಿಗೆ ಸಂಚು ಹಾಕಿ, ಎಕೆ-47  ಮತ್ತು ಹ್ಯಾಂಡ್ ಗ್ರೆನೇಡ್​ಗಳೊಂದಿಗೆ ಸಜ್ಜಾಗಿದ್ದ ಮೂವರು, ಜೈಷ್ ಇ ಮೊಹಮ್ಮದ್​ ಸಂಘಟನೆಯ ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದವು.  ಇದೀಗ ಮತ್ತೊಮ್ಮೆ ದಾಳಿಯ ಆತಂಕ ಶುರುವಾಗಿದ್ದು, ಅಲ್ಲಿ ಆರ್​ಎಸ್​ಎಸ್​ ಪ್ರಧಾನ ಕಚೇರಿ ಮೇಲ್ಭಾಗದಲ್ಲಿ ಡ್ರೋನ್​ ಹಾರಾಡುವುದನ್ನು, ಅಲ್ಲಿನ ಫೋಟೋ ತೆಗೆಯುವುದನ್ನೂ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: Video: ಛತ್ತೀಸ್​ಗಢ್​​ನ ಹಳ್ಳಿಯೊಂದರಲ್ಲಿ ವಿವಾದಿತ ಪ್ರತಿಜ್ಞಾ ವಿಧಿ ಸ್ವೀಕಾರ; ಕಾರ್ಯಕ್ರಮ ಆಯೋಜಕರನ್ನು ಹುಡುಕುತ್ತಿರುವ ಪೊಲೀಸರು !

Published On - 9:05 am, Sat, 8 January 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್