AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Violence: ಮಣಿಪುರದಲ್ಲಿ ಸೀಮಿತ ಇಂಟರ್ನೆಟ್ ಸೇವೆ ಒದಗಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದ ಹೈಕೋರ್ಟ್​

ಮಣಿಪುರದಲ್ಲಿ ಸೀಮಿತ ಇಂಟರ್ನೆಟ್ ಸೇವೆಗಳನ್ನು ಒದಗಿಸುವಂತೆ ಮಣಿಪುರ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

Manipur Violence: ಮಣಿಪುರದಲ್ಲಿ ಸೀಮಿತ ಇಂಟರ್ನೆಟ್ ಸೇವೆ ಒದಗಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದ ಹೈಕೋರ್ಟ್​
ಮಣಿಪುರ ಹೈಕೋರ್ಟ್
ಅಕ್ಷಯ್​ ಪಲ್ಲಮಜಲು​​
|

Updated on:Jun 20, 2023 | 12:47 PM

Share

ಇಂಫಾಲ್: ಮಣಿಪುರದ ಹಿಂಸಾಚಾರದಿಂದ (Manipur Violence) ಸರ್ಕಾರ ರಾಜ್ಯದಲ್ಲಿ ಇಂಟರ್ನೆಟ್​​ನ್ನು ಕಡಿತಗೊಳಿಸಿತ್ತು. ಆದರೆ ಇದೀಗ ಸೀಮಿತ ಇಂಟರ್ನೆಟ್ ಸೇವೆಗಳನ್ನು ಒದಗಿಸುವಂತೆ ಮಣಿಪುರ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳನ್ನು ಹಾಗೂ ಪ್ರಚೋದಿತ ಸುದ್ದಿಗಳನ್ನು ಹರಡುವ ಕೆಲಸ ನಡೆಯುತ್ತಿದೆ ಎಂದು ರಾಜ್ಯ ಸರ್ಕಾರ ಇಂಟರ್ನೆಟ್​​ನ್ನು ಸಂಪೂರ್ಣ ಸ್ಥಗಿತಗೊಳಿಸಿತ್ತು. ಸರ್ಕಾರ ಕೆಲಸಕ್ಕೆ ಹೊರತುಪಡಿಸಿ, ಮತ್ತೆಲ್ಲ ವಿಚಾರಗಳಿಗೆ ಇಂಟರ್ನೆಟ್ ಸ್ಥಗಿತಗೊಳಿಸಲಾಗಿತ್ತು.

ಅನೇಕರು ರಾಜ್ಯದಲ್ಲಿ ಇಂಟರ್ನೆಟ್ ತುಂಬಾ ಅಗತ್ಯ ಇದೆ ಎಂದು ಸಲ್ಲಿಸಿದ ಮನವಿಗಳ ನಂತರ, ಮಣಿಪುರ ಹೈಕೋರ್ಟ್ ಇಂದು ಮಧ್ಯಂತರ ಆದೇಶದಲ್ಲಿ ತಮ್ಮ ನಿಯಂತ್ರಣದಲ್ಲಿರುವ ಕೆಲವು ಗೊತ್ತುಪಡಿಸಿದ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಸೀಮಿತ ಇಂಟರ್ನೆಟ್ ಸೇವೆಗಳನ್ನು ಒದಗಿಸುವಂತೆ ರಾಜ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಹೈಕೋರ್ಟ್ ಜೂನ್ 23 ರಂದು ಮತ್ತೆ ಈ ಪ್ರಕರಣದ ವಿಚಾರಣೆ ನಡೆಸಲಿದೆ.

ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳನ್ನು, ವಿಶೇಷವಾಗಿ ವಿದ್ಯಾರ್ಥಿಗಳು ಪರೀಕ್ಷೆ ಹಾಗೂ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತ್ತು ಸಾರ್ವಜನಿಕರು ತಮ್ಮ ತುರ್ತು ಮತ್ತು ಅಗತ್ಯ ಸೇವೆಗಳಿಗಾಗಿ ಸೀಮಿತ ಇಂಟರ್ನೆಟ್ ನೀಡಬೇಕು ಎಂದು ಹೈಕೋರ್ಟ್ ಹೇಳಿದೆ. ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಘರ್ಷಣೆಗಳು ಭುಗಿಲೆದ್ದ ಕಾರಣ ಮಣಿಪುರವು ಮೇ 4ರಿಂದ ಇಂಟರ್ನೆಟ್ ನಿಷೇಧ ಮಾಡಲಾಗಿತ್ತು.

ಇದನ್ನೂ ಓದಿ: Manipur violence: ತುರ್ತು ವಿಚಾರಣೆ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ

ಸಾಮಾಜಿಕ ಮಾಧ್ಯಮ ವೆಬ್‌ಸೈಟ್​​ನ್ನು ನಿರ್ಬಂಧಿಸುವ ಮೂಲಕ ಮತ್ತು ರಾಜ್ಯ ಸರ್ಕಾರದ ಕಾಳಜಿಯನ್ನು ಕಾಪಾಡುವ ಮೂಲಕ ಸಾರ್ವಜನಿಕರಿಗೆ ಸೀಮಿತ ಇಂಟರ್ನೆಟ್ ಸೇವೆಗಳನ್ನು ಒದಗಿಸುವ ಯಾವುದೇ ಕಾರ್ಯಸಾಧ್ಯತೆ ಇದೆಯೇ ಎಂಬುದನ್ನು ವಿವರಿಸುವ ಕಿರು ಅಫಿಡವಿಟ್ ಸಲ್ಲಿಸುವಂತೆ ವೊಡಾಫೋನ್, ಐಡಿಯಾ, ಜಿಯೋ, ಬಿಎಸ್‌ಎನ್‌ಎಲ್ ಮತ್ತು ಏರ್‌ಟೆಲ್‌ಗೆ ನ್ಯಾಯಾಲಯ ಸೂಚಿಸಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಂತೆ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:37 pm, Tue, 20 June 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ