AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಕೂಗು ಯೋಜನೆ ವಿರುದ್ಧದ ಪಿಐಎಲ್ ವಜಾ; ಹೈಕೋರ್ಟ್ ವಿಭಾಗೀಯ ಪೀಠದಿಂದ ಆದೇಶ

ಈಗಾಗಲೇ ಅರ್ಜಿದಾರರನ್ನು ಹೈಕೋರ್ಟ್ ಪ್ರಕರಣದಿಂದ ಕೈಬಿಟ್ಟಿದೆ. ಹೀಗಾಗಿ ಅರ್ಜಿದಾರರಿಗೆ ದಂಡ‌ ವಿಧಿಸದೇ ಪಿಐಎಲ್ ವಜಾ ಮಾಡಲಾಗಿದೆ ಎಂದು ಹಂಗಾಮಿ ನ್ಯಾಯಮೂರ್ತಿ ಸಿಜೆ ಸತೀಶ್ ಚಂದ್ರ ಶರ್ಮಾ, ನ್ಯಾಯಾದೀಶರಾದ ಸಚಿನ್ ಶಂಕರ್ ಮಗದುಮ್ ಅವರ ಪೀಠ ಆದೇಶ ಹೊರಡಿಸಿದೆ.

ಕಾವೇರಿ ಕೂಗು ಯೋಜನೆ ವಿರುದ್ಧದ ಪಿಐಎಲ್ ವಜಾ; ಹೈಕೋರ್ಟ್ ವಿಭಾಗೀಯ ಪೀಠದಿಂದ ಆದೇಶ
ಕರ್ನಾಟಕ ಹೈಕೋರ್ಟ್
TV9 Web
| Updated By: preethi shettigar|

Updated on:Sep 07, 2021 | 11:35 AM

Share

ದೆಹಲಿ: ಕಾವೇರಿ ಕೂಗು ಯೋಜನೆ ವಿರುದ್ಧದ ಪಿಐಎಲ್ ಅನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ಕಾವೇರಿ ಕೂಗು ಉತ್ತಮವಾದ ಯೋಜನೆ. ಅರಣ್ಯ ಕಡಿಮೆಯಾಗುತ್ತಿರುವ ಸಮಯದಲ್ಲಿ ಮರ ಬೆಳೆಸುವ ಅಗತ್ಯವಿದೆ. ಅರಣ್ಯ ಭೂಮಿಯಲ್ಲಿ ಮರ ಬೆಳೆಸಬಾರದೆಂಬ ನಿರ್ಬಂಧವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.

ಖಾಸಗಿಯವರಿಗೆ ನಿರ್ಬಂಧವಿರುವ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಿಲ್ಲ. ಮರ ಬೆಳೆಸುವ ಯೋಜನೆಯನ್ನು ಪ್ರೋತ್ಸಾಹಿಸಬೇಕಿದೆ. ಅಲ್ಲದೆ ಈಶಾ ಔಟ್ ರೀಚ್ ಸಂಸ್ಥೆಯ ಕ್ರಮ ಶ್ಲಾಘನೀಯ. ದಂಡ ವಿಧಿಸಿ ಈ ಪಿಐಎಲ್ ವಜಾಗೊಳಿಸಬೇಕಿತ್ತು. ಆದರೆ ಈಗಾಗಲೇ ಅರ್ಜಿದಾರರನ್ನು ಹೈಕೋರ್ಟ್ ಪ್ರಕರಣದಿಂದ ಕೈಬಿಟ್ಟಿದೆ. ಹೀಗಾಗಿ ಅರ್ಜಿದಾರರಿಗೆ ದಂಡ‌ ವಿಧಿಸದೇ ಪಿಐಎಲ್ ವಜಾ ಮಾಡಲಾಗಿದೆ ಎಂದು ಹಂಗಾಮಿ ನ್ಯಾಯಮೂರ್ತಿ ಸಿಜೆ ಸತೀಶ್ ಚಂದ್ರ ಶರ್ಮಾ, ನ್ಯಾಯಾದೀಶರಾದ ಸಚಿನ್ ಶಂಕರ್ ಮಗದುಮ್ ಅವರ ಪೀಠ ಆದೇಶ ಹೊರಡಿಸಿದೆ.

ಬೆಂಗಳೂರು ಗ್ರಾ. ಸೇರಿ 7 ಜಿಲ್ಲೆಯಲ್ಲಿ ಕಾವೇರಿ ಕೂಗು ಗ್ರಾಮ ಸಂಪರ್ಕ ಅಭಿಯಾನ ಕಾವೇರಿ ನದಿ ಉಳಿವಿಗಾಗಿ ಈಶಾ ಫಂಡೇಶನ್​ ಹಮ್ಮಿಕೊಂಡಿರುವ ಕಾವೇರಿ ಕೂಗು ಗ್ರಾಮ ಸಂಪರ್ಕ ಅಭಿಯಾನವನ್ನು ಜಿಲ್ಲೆಯಾದ್ಯಂತ ನಡೆಸಲಾಗುವುದು. ಕಾವೇರಿ ಕೂಗು ಯೋಜನೆಯ ಭಾಗವಾಗಿ ಕಾವೇರಿ ನದಿ ಹರಿಯುವ ಭಾಗಗಳಲ್ಲಿ ಗಿಡಗಳನ್ನು ನೆಟ್ಟು ಬೆಳೆಸುವುದರಿಂದ ನದಿ ಸಂರಕ್ಷಣೆ, ಅಂತರ್ಜಲ ಹೆಚ್ಚಳ ಹಾಗೂ ರೈತರಿಗೂ ಆದಾಯ ತರುವ ಕಾರ್ಯಕ್ರಮವಾಗಿದೆ ಎಂದು ಈಶಾ ಫೌಂಡೇಶನ್​  (Isha foundation) ಸ್ವಯಂ ಸೇವಕರಾದ ತೀರ್ಥನ್​ ಮತ್ತು ಸಂಭವ್ ಸುದ್ದಿಗೋಷ್ಠಿಯಲ್ಲಿ​ ತಿಳಿಸಿದ್ದಾರೆ. ಈಗಾಗಲೇ ಈ ಅಭಿಯಾನ ಆರಂಭವಾಗಿದ್ದು, 215 ಗ್ರಾಮ ಪಂಚಾಯತ್​​​ಗಳಿಗೆ ಭೇಟಿ ಕಾರ್ಯಕ್ರಮ ನಡೆಸಲಾಗಿದೆ. ಸೆಪ್ಟೆಂಬರ್​​ವರೆಗೂ ಈ ಅಭಿಯಾನ ನಡೆಯಲಿದೆ.

ಕಾವೇರಿ ನದಿ ಉಳಿವಿಗಾಗಿ ಕಾವೇರಿ ಕೂಗು ಯೋಜನೆ (Cauvery Calling) ನಡೆಸಲಾಗುತ್ತಿದೆ. ಕಾರ್ಯಕ್ರಮದ ಅಂಗವಾಗಿ ರೈತರಿಂದ ಗಿಡಗಳಿಗಾಗಿ ಬೇಡಿಕೆ ಪಡೆಯುವ ಉದ್ದೇಶದಿಂದ ಕಾವೇರಿ ಕೂಗು (cauvery koogu) ಗ್ರಾಮ ಸಂಪರ್ಕ ಅಭಿಯಾನಕ್ಕೆ ಆಗಸ್ಟ್​ 2 ರಂದು ಚಾಲನೆ ದೊರೆತಿದೆ. ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ 1785 ಪಂಚಾಯತ್​​ಗಳಲ್ಲಿ ಈ ಅಭಿಯಾನ ನಡೆಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​​ ರಾಜ್​ ಇಲಾಖೆ, ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ ಸಹಯೋಗದಲ್ಲಿ ಕಾವೇರಿ ಕೊಳ್ಳದ ಜಿಲ್ಲೆಗಳ ಪ್ರತಿ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್​ ಮತ್ತು ಜಿಲ್ಲಾ ಪಂಚಾಯತ್​​ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಮುಂದಿನ 8 ವಾರಗಳಲ್ಲಿ 1,800 ಪ್ರಚಾರ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಈಶಾ ಸ್ವಯಂ ಸೇವಕರಾದ ತೀರ್ಥನ್​ ಮತ್ತು ಸಂಭವ್ ತಿಳಿಸಿದ್ದಾರೆ.

ರೈತರಿಗೆ ಯಾವ ರೀತಿಯ ಗಿಡಗಳು ಬೇಕು ಎಂಬ ಮಾಹಿತಿ ಪಡೆಯುವ ಉದ್ದೇಶದಿಂದ ಕಾವೇರಿ ಕೂಗು ಗ್ರಾಮ ಸಂಪರ್ಕ ಅಭಿಯಾನ ತಂಡವು ಎಲ್ಲ 1785 ಪಂಚಾಯತ್​ಗಳಲ್ಲಿಯೂ (Cauvery basin) ‘ಮರ ಮಿತ್ರ’ ಎಂಬ ಹಸರಿನಲ್ಲಿ ಸಂಯೋಜಕರನ್ನು ನೇಮಿಸಿಕೊಳ್ಳಲಾಗುವುದು. ಮರ ಮಿತ್ರರು (mara mitra) ಮರ ಆಧಾರಿತ ಕೃಷಿ, ಅರಣ್ಯ ಕೃಷಿ ಬಗ್ಗೆ ರೈತರಲ್ಲಿ ಅರಿವು ಮೂಡಿಸಿ, ರೈತ ಸಮುದಾಯವನ್ನು ಸಂಘಟಿಸಿ, ಅವರಿಂದ ಮರಗಳ ಬೇಡಿಕೆ ಪಡೆಯುತ್ತಾರೆ ಎಂದು ಅವರು ವಿವರಿಸಿದರು. ಇದನ್ನೂ ಓದಿ:

ಕರ್ನಾಟಕ ಹೈಕೋರ್ಟ್​ಗೆ ಹಂಗಾಮಿ ನ್ಯಾಯಮೂರ್ತಿ ಆಗಿ ಸತೀಶ್ ಚಂದ್ರಶರ್ಮಾ ನೇಮಕ

ಶಾಲಾ ಮಕ್ಕಳಿಗೆ 20 ದಿನಗಳಲ್ಲಿ ಎಲ್ಲಾ ಪಠ್ಯ ಪುಸ್ತಕ ಪೂರೈಕೆ ಮಾಡಲಾಗುವುದು: ಹೈಕೋರ್ಟ್​ಗೆ ಸರ್ಕಾರದ ಹೇಳಿಕೆ

Published On - 11:25 am, Tue, 7 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ