AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಸಂಘರ್ಷಕ್ಕೆ ಕಾರಣವಾದ ಸಂದೇಶ್‌ಖಾಲಿ, ನ್ಯಾಯಕ್ಕಾಗಿ ಮಹಿಳೆಯರ ಹೋರಾಟ; ಏನಿದು ಪ್ರಕರಣ?

ಪಶ್ಚಿಮ ಬಂಗಾಳದ ಉತ್ತರ 24-ಪರಗಣ ಜಿಲ್ಲೆಯ ಸಂದೇಶ್​​ಖಾಲಿ ಗ್ರಾಮ ಬಿಜೆಪಿ-ಟಿಎಂಸಿ ರಾಜಕೀಯದ ಕೇಂದ್ರವಾಗಿದೆ. ಟಿಎಂಸಿ ಪ್ರಭಾವಿ ನಾಯಕ ಶೇಖ್ ಶಾಜಹಾನ್ ನಿವಾಸದ ಮೇಲೆ ಇಡಿ ದಾಳಿ ನಡೆಸಲು ಬಂದಾಗ ಆತನ ಸಹಚರರು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಓಡಿಸಿದ್ದರು. ಶಾಜಹಾನ್ ಅಲ್ಲಿನ ಜನರಿಂದ ಭೂಕಬಳಿಕೆ ಮಾಡಿದ್ದಾನೆ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪ ಕೇಳಿಬಂದಾಗಿನಿಂದ ಸಂದೇಶ್​​ಖಾಲಿಯಲ್ಲಿ ಪ್ರತಿಭಟನೆ, ದಂಗೆ ನಡೆದಿದೆ. ಇಲ್ಲಿ ನಡೆದಿದ್ದು ಏನು? ಇಲ್ಲಿದೆ ವರದಿ.

ರಾಜಕೀಯ ಸಂಘರ್ಷಕ್ಕೆ ಕಾರಣವಾದ ಸಂದೇಶ್‌ಖಾಲಿ, ನ್ಯಾಯಕ್ಕಾಗಿ ಮಹಿಳೆಯರ ಹೋರಾಟ; ಏನಿದು ಪ್ರಕರಣ?
ಸಂದೇಶ್​​ಖಾಲಿಯಲ್ಲಿ ಪ್ರತಿಭಟನೆ
ರಶ್ಮಿ ಕಲ್ಲಕಟ್ಟ
|

Updated on: Apr 22, 2024 | 11:43 AM

Share

ಕಳೆದ ಮೂರು ತಿಂಗಳಿನಿಂದ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿ ಎಂಬ ಗ್ರಾಮ ಸುದ್ದಿಯಲ್ಲಿದೆ. ಇಲ್ಲಿನ ಸ್ಥಳೀಯ ಟಿಎಂಸಿ ನಾಯಕ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ವಿರುದ್ಧ ಹಲವಾರು ಮಹಿಳೆಯರು ಆರೋಪ ಮಾಡಿದ್ದಾರೆ. ಈ ಸುದ್ದಿ ಹೊರಬರುತ್ತಿದ್ದಂತೆ ಬಂಗಾಳ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿತ್ತು. ಆರೋಪಿಯನ್ನು ಟಿಎಂಸಿ ಕಾಪಾಡುತ್ತಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳದ ಬಿಜೆಪಿ ಘಟಕ ಪ್ರತಿಭಟನೆಗೆ ಮುಂದಾಯಿತು. ಆದರೆ ಪೊಲೀಸರು ಅವರನ್ನು ಸಂದೇಶ್‌ಖಾಲಿಗೆ ತಲುಪದಂತೆ ತಡೆದರು. ರಾಜಕೀಯ ಚರ್ಚೆ, ವಾಗ್ದಾಳಿ, ಆರೋಪ, ಪ್ರತ್ಯಾರೋಪಗಳ ನಡುವೆಯೇ ಪ್ರಕರಣ ನ್ಯಾಯಾಲಯಕ್ಕೆ ತಲುಪಿತ್ತು. ಏಪ್ರಿಲ್ 4ರಂದು ಇದರ ವಿಚಾರಣೆ ನಡೆಸಿದ ಕಲ್ಕತ್ತಾ ಹೈಕೋರ್ಟ್, ಪಶ್ಚಿಮ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ರಾಜಕೀಯ ಬಿರುಗಾಳಿಗೆ ಕಾರಣವಾದ ಸಂದೇಶ್‌ಖಾಲಿಯಲ್ಲಿ ನಡೆದಿದ್ದೇನು? ಇಲ್ಲಿವರೆಗಿನ ಬೆಳವಣಿಗೆ ಬಗ್ಗೆ ಇಲ್ಲಿದೆ ವಿಸ್ತೃತ ವರದಿ ಇಲ್ಲಿದೆ. ಶುರುವಾಗಿದ್ದು ಇಲ್ಲಿಂದ ಬಹುಕೋಟಿ ಪಡಿತರ ವಿತರಣಾ ಹಗರಣದಲ್ಲಿ ಟಿಎಂಸಿಯ ಪ್ರಬಲ ನಾಯಕ ಶಾಜಹಾನ್ ಶೇಖ್ ನಿವಾಸದ ಮೇಲೆ ಜನವರಿ5 ರಂದು ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿತ್ತು. ಈ ಪ್ರದೇಶದಲ್ಲಿ ಶಾಜಹಾನ್‌ನ ಸಹಚರರು ಇಡಿ ಅಧಿಕಾರಿಗಳನ್ನು ಅವರ ಮನೆಗೆ ಪ್ರವೇಶಿಸುವುದನ್ನು ತಡೆಯುವುದಲ್ಲದೆ, ಕೇಂದ್ರ ತನಿಖಾ ಸಂಸ್ಥೆಯ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದರು. ನಗರದಿಂದ 74 ಕಿಮೀ ದೂರದಲ್ಲಿರುವ ಹಳ್ಳಿಯಿಂದ ತಪ್ಪಿಸಿಕೊಂಡು ಇಡಿ ಅಧಿಕಾರಿಗಳು ಓಡಿ ಹೋಗಿದ್ದರು. ಜಿಲ್ಲೆಯ ಬಸಿರ್‌ಹತ್ ಉಪವಿಭಾಗದ ಸಂದೇಶ್‌ಖಾಲಿಯಲ್ಲಿ ಪ್ರಭಾವಿ, ಜಿಲ್ಲಾ ಪರಿಷತ್ ಸದಸ್ಯರೂ ಆಗಿರುವ ಶಾಜಹಾನ್ ಅಂದಿನಿಂದ ತಲೆಮರೆಸಿಕೊಂಡಿದ್ದರು. ಇಡಿ ಘಟನೆಯ ನಂತರ, ಸ್ಥಳೀಯ ಮಹಿಳೆಯರು ಆರೋಪದೊಂದಿಗೆ ಮುಂದೆ ಬಂದರು. ಅದೇನೆಂದರೆ ಶಾಜಹಾನ್ ಮತ್ತು...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?