Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚು ಹೊಗೆ ಬಿಡುವ ವಾಹನಗಳು ಯುಪಿಯಿಂದ ದೆಹಲಿಗೆ ಬರುತ್ತಿದೆ, ತಕ್ಷಣವೇ ನಿಲ್ಲಿಸಿ: ಯೋಗಿಗೆ ದೆಹಲಿ ಸರ್ಕಾರ ಮನವಿ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​​ ಅವರಿಗೆ ದೆಹಲಿಯ ಪರಿಸರ ಸಚಿವ ಗೋಪಾಲ್ ರೈ ಮನವಿಯೊಂದನ್ನು ಮಾಡಿದ್ದಾರೆ. ಉತ್ತರ ಪ್ರದೇಶದಿಂದ ದೆಹಲಿಗೆ ಬರುತ್ತಿರುವ ಬಿಎಸ್ 3 ಪೆಟ್ರೋಲ್ ಮತ್ತು ಬಿಎಸ್ 4 ಡೀಸೆಲ್ ವಾಹನಗಳ ಸೇವೆಯನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಇದನ್ನು ತಡೆಯಲು ಎಲ್ಲ ರೀತಿಯ ಕ್ರಮಗಳನ್ನು ಅನುಸರಿಸಲಾಗಿದೆ ಎಂದು ಹೇಳಿದ್ದಾರೆ.

ಹೆಚ್ಚು ಹೊಗೆ ಬಿಡುವ ವಾಹನಗಳು ಯುಪಿಯಿಂದ ದೆಹಲಿಗೆ ಬರುತ್ತಿದೆ, ತಕ್ಷಣವೇ ನಿಲ್ಲಿಸಿ: ಯೋಗಿಗೆ ದೆಹಲಿ ಸರ್ಕಾರ ಮನವಿ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Nov 04, 2023 | 1:16 PM

ದೆಹಲಿ, ನ.4: ದೆಹಲಿಯಲ್ಲಿ ತೀವ್ರ ವಾಯುಮಾಲಿನ್ಯ (Delhi Pollution Delhi Air Quality) ಉಂಟಾಗಿದ್ದು, ರಾಷ್ಟ್ರ ರಾಜಧಾನಿಯ ಸರ್ಕಾರ ವಾಯುಮಾಲಿನ್ಯ ತಡೆಯಲು ಹಲವು ಕ್ರಮಗಳನ್ನು ತರುತ್ತಿದೆ. ಈಗಾಗಲೇ ದೆಹಲಿಯ ಹಲವು ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ. ಅನಿವಾರ್ಯವಲ್ಲದ ನಿರ್ಮಾಣ ಚಟುವಟಿಕೆಗಳ ಮೇಲೆ ಮತ್ತು ದೆಹಲಿ ಗುರುಗ್ರಾಮ್, ಫರಿದಾಬಾದ್, ಗಾಜಿಯಾಬಾದ್ ಮತ್ತು ಗೌತಮ್ ಬುಧ್ ನಗರದಲ್ಲಿ ಬಿಎಸ್-3 ಪೆಟ್ರೋಲ್ ಮತ್ತು ಬಿಎಸ್-4 ಡೀಸೆಲ್ ಕಾರುಗಳ ಓಡಾಟದ ಮೇಲೆ ನಿಷೇಧ ಹೇರಿದೆ. ಇದರ ನಡುವೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​​ ಅವರಿಗೆ ದೆಹಲಿಯ ಪರಿಸರ ಸಚಿವ ಗೋಪಾಲ್ ರೈ ಮನವಿಯೊಂದನ್ನು ಮಾಡಿದ್ದಾರೆ. ಉತ್ತರ ಪ್ರದೇಶದಿಂದ ದೆಹಲಿಗೆ ಬರುತ್ತಿರುವ ಬಿಎಸ್ 3 ಪೆಟ್ರೋಲ್ ಮತ್ತು ಬಿಎಸ್ 4 ಡೀಸೆಲ್ ವಾಹನಗಳ ಸೇವೆಯನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಇದನ್ನು ತಡೆಯಲು ಎಲ್ಲ ರೀತಿಯ ಕ್ರಮಗಳನ್ನು ಅನುಸರಿಸಲಾಗಿದೆ ಎಂದು ಹೇಳಿದ್ದಾರೆ.

ಆನಂದ್ ವಿಹಾರ್‌ನ ವಾಯು ಗುಣಮಟ್ಟ ಸೂಚ್ಯಂಕವು ಅಪಾಯಕಾರಿಯಾಗಿದ್ದು, ಈ ಕಾರಣಕ್ಕೆ ಆನಂದ್ ವಿಹಾರ್‌ದ ಬಸ್ ಡಿಪೋವನ್ನು ಸಚಿವ ಗೋಪಾಲ್ ರೈ ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ 3 ಪೆಟ್ರೋಲ್ ಮತ್ತು ಬಿಎಸ್ 4 ಡೀಸೆಲ್ ಬಸ್ಸುಗಳು ಇಲ್ಲಿಗೆ ಬಂದಿದೆ ಎಂಬುದನ್ನು ಪತ್ತೆ ಮಾಡಿದ್ದಾರೆ. ದೆಹಲಿ ಈಗಾಗಲೇ ಎಲೆಕ್ಟ್ರಿಕ್ ಬಸ್‌ಗಳು ಮತ್ತು ಸಿಎನ್‌ಜಿ ಬಸ್‌ಗಳು ಮಾತ್ರ ಓಡಾಡುವಂತೆ ಆದೇಶವನ್ನು ನೀಡಲಾಗಿದೆ. ಆದರೆ ಉತ್ತರಪಪ್ರದೇಶದಿಂದ ದೆಹಲಿಗೆ ಬಿಎಸ್ 3 ಪೆಟ್ರೋಲ್ ಮತ್ತು ಬಿಎಸ್ 4 ಡೀಸೆಲ್ ಬಸ್ಸುಗಳು ಬರುತ್ತಿದೆ ಎಂದು ಹೇಳಿದ್ದಾರೆ.

ಹೆಚ್ಚು ಹೊಗೆ ಬಿಡುವ ವಾಹನಗಳನ್ನು ಕಳುಹಿಸುವುದನ್ನು ನಿಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸಚಿವ ಗೋಪಾಲ್ ರೈ ಮನವಿ ಮಾಡಿದ್ದಾರೆ. ಈಗಾಗಲೇ ನಾವು ದೆಹಲಿಯಲ್ಲಿ ವಾಯುಮಾಲಿನ್ಯವನ್ನು ಎದುರಿಸುತ್ತಿದ್ದೇವೆ. ಪರಿಸ್ಥಿತಿಯನ್ನು ನಿಯಂತ್ರಿಸಲು BS3 ಮತ್ತು BS4 ವಾಹನಗಳನ್ನು ನಿಷೇಧಿಸಲಾಗಿದೆ. ಇದರಿಂದ ವಿಪರೀತ ಹೊಗೆ ಬರುತ್ತಿದೆ. ಹಾಗಾಗಿ ಉತ್ತರಪ್ರದೇಶದಿಂದ ಬರುತ್ತಿರುವ BS3 ಮತ್ತು BS4 ವಾಹನಗಳನ್ನು ನಿಲ್ಲಿಸುವಂತೆ ಯೋಗಿ ಅವರಲ್ಲಿ ನಾನು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ವಾಯುಮಾಲಿನ್ಯ: ದೆಹಲಿಯ ಪ್ರಾಥಮಿಕ ಶಾಲೆಗಳಿಗೆ ನವೆಂಬರ್ 3,4 ರಂದು ರಜೆ

ದೆಹಲಿಯಲ್ಲಿ ಮಾಲಿನ್ಯವನ್ನು ಕಡಿಮೆ ಮಾಡಲು ದೆಹಲಿ ಸರ್ಕಾರವು ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಆದರೆ ಇಂದು ಬೆಳಿಗ್ಗೆಯಿಂದ ಆನಂದ್ ವಿಹಾರ್ ಅತ್ಯಧಿಕ ವಾಯು ಗುಣಮಟ್ಟ ಸೂಚ್ಯಂಕ (Air Quality Index)ನ್ನು ಹೊಂದಿದ್ದೇವೆ. ಇದರಿಂದ ದೆಹಲಿಯ ಹಲವು ಭಾಗದಲ್ಲಿ ಗಾಳಿ ಮಟ್ಟ ಕಡಿಮೆಯಾಗಿದೆ. ಇದರಿಂದ ಅಲ್ಲಿನ ಜನರಲ್ಲಿ ಉಸಿರಾಟದ ತೊಂದರೆ ಹಾಗೂ ಕಣ್ಣು ನೋವಿನ ಸಮಸ್ಯೆ ಉಂಟಾಗಿದೆ.

ದೆಹಲಿಯ ಹವಮಾನ ಹಿಂದಿನ ಸ್ಥಿತಿಗೆ ಬರುವವರೆಗೆ ಬಿಎಸ್ 3 ಪೆಟ್ರೋಲ್ ಮತ್ತು ಬಿಎಸ್ 4 ಡೀಸೆಲ್ ಕಾರುಗಳ ಓಡಾಟವನ್ನು ನಿಷೇಧಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ.ಯಾವುದೇ ವಾಹನಗಳು ದೆಹಲಿ ಬೀದಿಗಳಲ್ಲಿ ಓಡುವುದು ಕಂಡುಬಂದರೆ ಇಪ್ಪತ್ತು ಸಾವಿರ ದಂಡವನ್ನು ವಿಧಿಸಲಾಗುವುದು ಎಂದು ಸರ್ಕಾರ ಹೇಳಿದೆ. ಈ ವ್ಯವಸ್ಥೆಯನ್ನು ಹಾಗೂ ವಾಯುಮಾಲಿನ್ಯದ ಮಾಹಿತಿಯನ್ನು ತಿಳಿಸಲು ದೆಹಲಿ ಸರ್ಕಾರ ಸಮಿತಿಯನ್ನು ರಚನೆ ಮಾಡಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:16 pm, Sat, 4 November 23

ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು