AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್​ ಇಸ್ಲಾಂನಲ್ಲಿ ಅತ್ಯಂತ ಮುಖ್ಯವೆಂದು ಕುರಾನ್​ ಹೇಳಿಲ್ಲ, ಸುಮ್ಮನೆ ಹೋಗಿ ವಿದ್ಯೆ ಕಲಿಯಿರಿ: ಕೇರಳ ರಾಜ್ಯಪಾಲ ಆರಿಫ್​ ಮೊಹಮ್ಮದ್ ಖಾನ್

ಎಲ್ಲ ಧರ್ಮಗಳ, ಎಲ್ಲ ಹೆಣ್ಣುಮಕ್ಕಳೂ ಕೂಡ ತಮಗೆ ಬೇಕಾದಂತೆ ವಸ್ತ್ರ ಧರಿಸಬಹುದು. ಆದರೆ ಶಿಕ್ಷಣ ಎಂದು ಬಂದಾಗ, ಅವರು ಓದುತ್ತಿರುವ ಶಿಕ್ಷಣ ಸಂಸ್ಥೆಯ ನಿಯಮಗಳನ್ನು ಪಾಲಿಸಲೇಬೇಕು ಎಂದು ಆರಿಫ್​ ಮೊಹಮ್ಮದ್ ಖಾನ್ ಹೇಳಿದ್ದಾರೆ.

ಹಿಜಾಬ್​ ಇಸ್ಲಾಂನಲ್ಲಿ ಅತ್ಯಂತ ಮುಖ್ಯವೆಂದು ಕುರಾನ್​ ಹೇಳಿಲ್ಲ, ಸುಮ್ಮನೆ ಹೋಗಿ ವಿದ್ಯೆ ಕಲಿಯಿರಿ: ಕೇರಳ ರಾಜ್ಯಪಾಲ ಆರಿಫ್​ ಮೊಹಮ್ಮದ್ ಖಾನ್
ಆರಿಫ್​ ಮೊಹಮದ್​ ಖಾನ್​
TV9 Web
| Edited By: |

Updated on: Feb 13, 2022 | 12:51 PM

Share

ದೆಹಲಿ: ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್​ ವಿವಾದಕ್ಕೆ (Hijab Row) ರಾಷ್ಟ್ರಾದ್ಯಂತ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದರೂ, ಬಹುತೇಕ ಮುಸ್ಲಿಂ ನಾಯಕರೆಲ್ಲ ಹಿಜಾಬ್​ ಪರವಾಗಿಯೇ ಧ್ವನಿ ಎತ್ತಿದ್ದಾರೆ. ಹೀಗಿರುವಾಗ ಕೇರಳದ ರಾಜ್ಯಪಾಲ, ಹಿರಿಯ ಮುಸ್ಲಿಂ ಮುಖಂಡರಾದ ಆರಿಫ್​ ಮೊಹಮ್ಮದ್ ಖಾನ್​ ಅವರೊಂದು ವಿಭಿನ್ನ ಹೇಳಿಕೆ ನೀಡಿದ್ದಾರೆ. ಹಿಜಾಬ್​ ಎಂಬುದು ಇಸ್ಲಾಮ್​ನ ಅವಿಭಾಜ್ಯ ಅಂಗವಲ್ಲ. ಸಿಖ್ಖರಿಗೆ ಟರ್ಬನ್​ ತುಂಬ ಮುಖ್ಯ. ಹಾಗಂತ ಇಸ್ಲಾಂನಲ್ಲಿ ಹಿಜಾಬ್ ಅಷ್ಟೇ ಮುಖ್ಯ ಎಂದು ಭಾವಿಸಬೇಕಿಲ್ಲ ಎಂದು ಹೇಳಿದ್ದಾರೆ.  ಕುರಾನ್​​ನಲ್ಲಿ ಹಿಜಾಬ್​​ನ್ನು ಏಳು ಬಾರಿ ಉಲ್ಲೇಖಿಸಲಾಗಿದೆ. ಆದರೆ ಅದನ್ನೆಲ್ಲೂ ಮುಸ್ಲಿಂ ಮಹಿಳೆಯರ ಉಡುಪು ಸಂಹಿತೆಯಲ್ಲಿ ಕಡ್ಡಾಯ ಎಂದು ಹೇಳಿಲ್ಲ. ಇದು ಪರದಾ ಪದ್ಧತಿಗೆ ಸಂಬಂಧಿಸಿದ ವಿಚಾರ ಎಂದು ಮಾಹಿತಿ ನೀಡಿದ್ದಾರೆ.

ಹಿಜಾಬ್​ ವಿವಾದ ಮಿತಿಮೀರಿದೆ. ಅನೇಕರು ವಿವಿಧ ವಾದವನ್ನು ಮಂಡಿಸುತ್ತಿದ್ದಾರೆ. ಅದರಲ್ಲಿ ಒಂದು ವರ್ಗದ ಜನರು, ಸಿಖ್​ ಸಮುದಾಯದ ವಿದ್ಯಾರ್ಥಿಗಳು ಟರ್ಬನ್​ ಇಟ್ಟುಕೊಂಡೇ ಕ್ಲಾಸ್​ ರೂಮಿಗೆ ಬರುತ್ತಾರೆ. ಆದರೆ ಮುಸ್ಲಿಂ ಹುಡುಗಿಯರಿಗೇಕೆ ಹಿಜಾಬ್​ ಧರಿಸಿ ಬರಲು ಅವಕಾಶ ಕೊಡುತ್ತಿಲ್ಲ ಎಂಬ ಪ್ರಶ್ನೆಯನ್ನು ಎತ್ತಿದ್ದಾರೆ. ಇದು ಸರಿಯಾದ ವಾದವಲ್ಲ. ಸಿಖ್ಖರಿಗೆ ಟರ್ಬನ್​ ಅತ್ಯಂತ ಮುಖ್ಯ. ಆದರೆ ಹಿಜಾಬ್​ನ್ನು ಅದಕ್ಕೆ ಹೋಲಿಸುವಂತಿಲ್ಲ. ಮುಸ್ಲಿಂ ಹುಡುಗಿಯರಿಗೆ ಹಿಜಾಬ್ ಕಡ್ಡಾಯವೆಂದು ಕುರಾನ್​​ನಲ್ಲಿ ಎಲ್ಲಿಯೂ ಉಲ್ಲೇಖವಿಲ್ಲ ಎಂದು ಕೇರಳ ರಾಜ್ಯಪಾಲರು ವಿವರಿಸಿದ್ದಾರೆ.

ಎಲ್ಲ ಧರ್ಮಗಳ, ಎಲ್ಲ ಹೆಣ್ಣುಮಕ್ಕಳೂ ಕೂಡ ತಮಗೆ ಬೇಕಾದಂತೆ ವಸ್ತ್ರ ಧರಿಸಬಹುದು. ಆದರೆ ಶಿಕ್ಷಣ ಎಂದು ಬಂದಾಗ, ಅವರು ಓದುತ್ತಿರುವ ಶಿಕ್ಷಣ ಸಂಸ್ಥೆಯ ನಿಯಮಗಳನ್ನು ಪಾಲಿಸಲೇಬೇಕು. ಆ ಸಂಸ್ಥೆಯಲ್ಲಿ ವಸ್ತ್ರ ಸಂಹಿತೆ ಏನಿದೆಯೋ ಅದರಂತೆ ನಡೆದುಕೊಳ್ಳಬೇಕಾಗುತ್ತದೆ.  ಇದೀಗ ಶುರುವಾಗಿರುವ ಹಿಜಾಬ್​ ವಿವಾದವೆಂಬುದು ಬಹುದೊಡ್ಡ ಪಿತೂರಿ. ಮುಸ್ಲಿಂ ಮಹಿಳೆಯರ ಹಕ್ಕು ರಕ್ಷಣೆ, ಅಭಿವೃದ್ಧಿಯಾಗುತ್ತಿರುವುದನ್ನು ಸಹಿಸಿಕೊಳ್ಳಲು ಸಾಧ್ಯವಾಗದವರು ಮಾಡುತ್ತಿರುವ ಕೆಲಸ ಇದು.  ಇಂಥ ಪಿತೂರಿಗೆಲ್ಲ ಹೆಣ್ಣುಮಕ್ಕಳು ಬಲಿಯಾಗಬಾರದು ಎಂದು ಹೇಳಿದ ಕೇರಳ ರಾಜ್ಯಪಾಲರು, ವಿದ್ಯಾಭ್ಯಾಸ ಬಹಿಷ್ಕರಿಸಿ, ಪ್ರತಿಭಟನೆಗೆ ಇಳಿದಿರುವ ಹಿಜಾಬ್​ ಹೋರಾಟಗಾರ್ತಿಯರಿಗೆ ವಾಪಸ್​ ಕ್ಲಾಸ್​ರೂಮಿಗೆ ಹೋಗಿ, ಶಿಕ್ಷಣ ಕಲಿಯುವಂತೆ ಸಲಹೆ ನೀಡಿದ್ದಾರೆ.

ಈ ಹಿಂದೆ ತಾಲಿಬಾನಿಗಳ ವಿರುದ್ಧ ಕೂಡ ಆರಿಫ್​ ಮೊಹಮ್ಮದ್ ಖಾನ್ ಕಿಡಿಕಾರಿದ್ದರು. ತಾಲಿಬಾನಿಗಳೇ ರೂಪಿಸಿಕೊಂಡ ಕಾನೂನಿಗೆ ಷರಿಯತ್ ಎಂದು ಕರೆಯಲು ಸಾಧ್ಯವಿಲ್ಲ. ನಿಜಕ್ಕೂ ಕುರಾನ್​ಗೆ ಷರಿಯತ್ ಕಾನೂನು ಎನ್ನಲಾಗುತ್ತದೆ. ಆದರೆ ಈಗೀಗ ಕಂಡವರೆಲ್ಲ ಕಾನೂನು ರಚಿಸಿ, ಅದಕ್ಕೆ ಷರಿಯತ್​ ಎಂದು ನಾಮಕರಣ ಮಾಡುತ್ತಿದ್ದಾರೆ ಎಂದು ಹೇಳಿದ್ದರು. ಅಷ್ಟೇ ಅಲ್ಲ, ದೇಶದಲ್ಲಿ ಮುಸ್ಲಿಂ ನಾಯಕತ್ವವನ್ನು ಮುಂಚೂಣಿಗೆ ತರಲು ಪ್ರಯತ್ನ ಮಾಡುತ್ತಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ವಿರುದ್ಧ ವಾಗ್ದಾಳಿ ನಡೆಸಿದ್ದ ಆರೀಫ್​ ಮೊಹಮ್ಮದ್​ ಖಾನ್​, ಈ ಜನರು ತಮಗೆ ಪ್ರತ್ಯೇಕ ಗುರುತು ಬೇಕು ಎಂಬ ಬಗ್ಗೆ ಮಾತನಾಡುವುದನ್ನು ನಿಲ್ಲಿಸಬೇಕು. ನಾನೊಬ್ಬ ಭಾರತೀಯ ಎಂಬುದೇ ಪ್ರತಿಯೊಬ್ಬನ ಗುರುತಾಗಿರಬೇಕು ಎಂದಿದ್ದರು.

ಇದನ್ನೂ ಓದಿ: Valentine’s Day 2022 : ವ್ಯಾಲೆಂಟೈನ್ಸ್‌ ಡೇ ಇತಿಹಾಸ ಹೇಗಿದೆ ಗೊತ್ತಾ? “ಲುಪರ್ಕಾಲಿಯಾ” ಹಬ್ಬವೇ ವ್ಯಾಲೆಂಟೈನ್ಸ್‌ ಡೇ

ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ