AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸಿದರೆ ನಮ್ಮ ಮಕ್ಕಳೂ ಲೆಹೆಂಗಾ ಧರಿಸಿ ಶಾಲೆಗೆ ಬರ್ತಾರೆ: ಬಿಜೆಪಿ ಶಾಸಕ

ಶಾಲೆಗೆ ಪ್ರತಿ ವಿದ್ಯಾರ್ಥಿಗಳು ಸಮವಸ್ತ್ರದಲ್ಲಿಯೇ ಬರಬೇಕು, ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್(Hijab) ಅಥವಾ ಬುರ್ಖಾ ಧರಿಸಿದರೆ ನಾಳೆ ನಮ್ಮ ಮಕ್ಕಳೂ ಲೆಹೆಂಗಾ ಧರಿಸಿ ಬರುತ್ತಾರೆ ಎಂದು ರಾಜಸ್ಥಾನ ಬಿಜೆಪಿ ಶಾಸಕ ಬಾಲ್​ ಮುಕುಂದ ಆಚಾರ್ಯ ಹೇಳಿದ್ದಾರೆ. ಹಿಜಾಬ್ ವಿವಾದದ ಕುರಿತು ಶಾಸಕರು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಜೈಪುರದಲ್ಲಿ ಸೋಮವಾರ ಸರ್ಕಾರಿ ಶಾಲೆಯ ಮುಸ್ಲಿಂ ವಿದ್ಯಾರ್ಥಿಗಳು ಸುಭಾಷ್ ಚೌಕ್ ಪೊಲೀಸ್ ಠಾಣೆಯಲ್ಲಿ ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ ರಸ್ತೆ ತಡೆ ನಡೆಸಿದರು.

ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸಿದರೆ ನಮ್ಮ ಮಕ್ಕಳೂ ಲೆಹೆಂಗಾ ಧರಿಸಿ ಶಾಲೆಗೆ ಬರ್ತಾರೆ: ಬಿಜೆಪಿ ಶಾಸಕ
Image Credit source: NDTV
ನಯನಾ ರಾಜೀವ್
|

Updated on:Jan 30, 2024 | 9:31 AM

Share

ಶಾಲೆಗೆ ಪ್ರತಿ ವಿದ್ಯಾರ್ಥಿಗಳು ಸಮವಸ್ತ್ರದಲ್ಲಿಯೇ ಬರಬೇಕು, ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್(Hijab) ಅಥವಾ ಬುರ್ಖಾ ಧರಿಸಿದರೆ ನಾಳೆ ನಮ್ಮ ಮಕ್ಕಳೂ ಲೆಹೆಂಗಾ ಧರಿಸಿ ಬರುತ್ತಾರೆ ಎಂದು ರಾಜಸ್ಥಾನ ಬಿಜೆಪಿ ಶಾಸಕ ಬಾಲ್​ ಮುಕುಂದ ಆಚಾರ್ಯ ಹೇಳಿದ್ದಾರೆ. ಹಿಜಾಬ್ ವಿವಾದದ ಕುರಿತು ಶಾಸಕರು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಜೈಪುರದಲ್ಲಿ ಸೋಮವಾರ ಸರ್ಕಾರಿ ಶಾಲೆಯ ಮುಸ್ಲಿಂ ವಿದ್ಯಾರ್ಥಿಗಳು ಸುಭಾಷ್ ಚೌಕ್ ಪೊಲೀಸ್ ಠಾಣೆಯಲ್ಲಿ ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ ರಸ್ತೆ ತಡೆ ನಡೆಸಿದರು.

ಸುಮಾರು ಆರು ಗಂಟೆಗಳ ಕಾಲ ಪ್ರತಿಭಟನೆ ಮುಂದುವರೆಯಿತು. ನಂತರ ಪೊಲೀಸ್ ಅಧಿಕಾರಿಗಳು ಶಾಸಕ ರಫೀಕ್ ಖಾನ್ ಮತ್ತು ಅಮೀನ್ ಕಗ್ಜಿ ಅವರೊಂದಿಗೆ ಮಾತುಕತೆ ನಡೆಸಿ ಸಮಾಧಾನಪಡಿಸಿದರು. ಮಾಹಿತಿ ಪ್ರಕಾರ, ಜನವರಿ 27 ರಂದು ಬಾಲ್​ ಮುಕುಂದ ಆಚಾರ್ಯ ಅವರು ಗಂಗಾಪೋಲ್‌ನಲ್ಲಿರುವ ಸರ್ಕಾರಿ ಶಾಲೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಇಲ್ಲಿ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿರುವುದನ್ನು ನೋಡಿದ ಶಾಸಕರು ಪ್ರಾಂಶುಪಾಲರೊಂದಿಗೆ ಮಾತನಾಡಿದ್ದರು.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. ಸಭೆಯಲ್ಲಿ ಜೈ ಸಿಯಾರಾಮ್ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಿದ್ದಾರೆ. ಅದಕ್ಕೆ ಶಾಸಕರು ವಿಡಿಯೋ ಬಿಡುಗಡೆ ಮಾಡಿದ್ದು, ನನ್ನ ನೆಚ್ಚಿನ ಪ್ರಭುಗಳು ರಾಮ ಮತ್ತು ಹನುಮಂತ, ಯಾರಿಗಾದರೂ ಶುಭಾಶಯ ಹೇಳುವಾಗ ಅಥವಾ ಸಂಬೋಧಿಸುವಾಗ ನಾನು ದೇವರ ಹೆಸರನ್ನು ತೆಗೆದುಕೊಳ್ಳುತ್ತೇನೆ. ಇದಕ್ಕೆ ಯಾರೂ ಆಕ್ಷೇಪ ವ್ಯಕ್ತಪಡಿಸುವಂತಿಲ್ಲ.

ಶಿಕ್ಷಕರ ಬಳಿ ಶಾಲೆಯಲ್ಲಿ ಎರಡು ತರಹದ ವಸ್ತ್ರಗಳನ್ನು ತೊಡಲು ಅವಕಾಶವಿದೆಯೇ ಎಂದು ನಾನು ಕೇಳಿದ್ದೆ, ಸಣ್ಣ ಮಕ್ಕಳು ಹಿಜಾಬ್, ಬುರ್ಖಾದಲ್ಲಿದ್ದರು. ಎಲ್ಲರಿಗೂ ಶಾಲೆಯಲ್ಲಿ ಒಂದೇ ನಿಯಮವಿಬೇಕು. ಇಲ್ಲವಾದಲ್ಲಿ ನಮ್ಮ ಮಕ್ಕಳು ಕೂಡ ಲೆಹೆಂಗಾ ಇನ್ನಿತರೆ ಉಡುಪು ಧರಿಸಿ ಬರುತ್ತಾರೆ.

ಮತ್ತಷ್ಟು ಓದಿ: ಹಿಜಾಬ್ ನಿಯಮ ವಾಪಸ್ ಪಡೆಯಲು SYS ಸಮ್ಮೇಳನದಲ್ಲಿ ಸರ್ಕಾರಕ್ಕೆ ಹಕ್ಕೊತ್ತಾಯ

ನಾನು ಮದರಸಾಗಳಿಗೆ ಹೋಗಿ ವಸ್ತ್ರ ಬದಲಾವಣೆ ಮಾಡಿ ಎಂದು ಕೇಳಿಲ್ಲ, ಆದರೆ ಸರ್ಕಾರಿ ಶಾಲೆಗಳಿಲ್ಲ ಇರುವ ನಿಯಮವನ್ನು ಪ್ರತಿಯೊಬ್ಬರೂ ಪಾಲಿಸಬೇಕೆಂದು ಹೇಳಿದ್ದಾರೆ.

ಶಾಸಕರ ಹೇಳಿಕೆ ಬಳಿಕ ಸಚಿವ ಕಿರೋರಿ ಲಾಲ್ ಕೂಡ ಈ ಕುರಿತು ಹೇಳಿಕೆ ನೀಡಿದ್ದಾರೆ, ರಾಜಸ್ಥಾನದಲ್ಲಿ ಹಿಜಾಬ್ ನಿಷೇಧಿಸಬೇಕು, ಎಲ್ಲರೂ ಒಂದೇ ಬಗೆಯ ವಸ್ತ್ರಗಳನ್ನು ಧರಿಸಬೇಕು. ಅನೇಕ ದೇಶಗಳಲ್ಲಿ ಹಿಜಾಬ್ ನಿಷೇಧಿಸಲಾಗಿದೆ. ಕರ್ನಾಟಕದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಣ್ಣುಮಕ್ಕಳು ಹಿಜಾಬ್ ಧರಿಸಿ ಶಾಲೆಗೆ ಹೋಗುವಂತಿಲ್ಲ ಎಂದು ಹೇಳಲಾಗಿತ್ತು.

ಅದರಿಂದ ಗದ್ದಲ ಎದ್ದಿತ್ತು. ಡಿಸೆಂಬರ್ 2023ರಲ್ಲಿ ಸಿದ್ದರಾಮಯ್ಯ ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರ್ಧರಿಸಿದರು. ಬಟ್ಟೆ, ಆಹಾರ ಅವರ ವೈಯಕ್ತಿಕ ವಿಚಾರ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:30 am, Tue, 30 January 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?