AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಖು ಸರ್ಕಾರ ವಿದ್ಯುತ್ ಬಾಕಿ ಪಾವತಿಸದಿದ್ದರೆ ಹಿಮಾಚಲ ಭವನ ಮಾರಾಟ ಮಾಡಿ

ಕಾಂಗ್ರೆಸ್ ನೇತೃತ್ವದ ಸುಖವಿಂದರ್ ಸಿಂಗ್ ಸುಖು ಸರ್ಕಾರವು ವಿದ್ಯುತ್ ಬಾಕಿಯನ್ನು ಪಾವತಿಸಲು ವಿಫಲವಾದರೆ ದೆಹಲಿಯಲ್ಲಿರುವ ಹಿಮಾಚಲ ಭವನವನ್ನು ಮಾರಾಟ ಮಾಡುವಂತೆ ಹಿಮಾಚಲ ಪ್ರದೇಶ ಹೈಕೋರ್ಟ್ ಸೂಚನೆ ನೀಡಿದೆ. ಹಿಮಾಚಲ ಭವನವು ರಾಷ್ಟ್ರ ರಾಜಧಾನಿಯ ಮಂಡಿ ಹೌಸ್‌ನಲ್ಲಿದೆ. ಈ ಪರಿಸ್ಥಿತಿಗೆ ಕಾರಣವಾದ ನಿರ್ಲಕ್ಷ್ಯಕ್ಕೆ ಕಾರಣರಾದ ಅಧಿಕಾರಿಗಳನ್ನು ಗುರುತಿಸಲು ಸತ್ಯಶೋಧನಾ ತನಿಖೆ ನಡೆಸುವಂತೆ ನ್ಯಾಯಾಲಯವು ವಿದ್ಯುತ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದೆ.

ಸುಖು ಸರ್ಕಾರ ವಿದ್ಯುತ್ ಬಾಕಿ ಪಾವತಿಸದಿದ್ದರೆ ಹಿಮಾಚಲ ಭವನ ಮಾರಾಟ ಮಾಡಿ
ಹಿಮಾಚಲ ಭವನ
ನಯನಾ ರಾಜೀವ್
|

Updated on: Nov 19, 2024 | 2:22 PM

Share

ಕಾಂಗ್ರೆಸ್ ನೇತೃತ್ವದ ಸುಖವಿಂದರ್ ಸಿಂಗ್ ಸುಖು ಸರ್ಕಾರವು ವಿದ್ಯುತ್ ಬಾಕಿಯನ್ನು ಪಾವತಿಸಲು ವಿಫಲವಾದರೆ ದೆಹಲಿಯಲ್ಲಿರುವ ಹಿಮಾಚಲ ಭವನವನ್ನು ಮಾರಾಟ ಮಾಡುವಂತೆ ಹಿಮಾಚಲ ಪ್ರದೇಶ ಹೈಕೋರ್ಟ್ ಸೂಚನೆ ನೀಡಿದೆ. ಹಿಮಾಚಲ ಭವನವು ರಾಷ್ಟ್ರ ರಾಜಧಾನಿಯ ಮಂಡಿ ಹೌಸ್‌ನಲ್ಲಿದೆ. ಈ ಪರಿಸ್ಥಿತಿಗೆ ಕಾರಣವಾದ ನಿರ್ಲಕ್ಷ್ಯಕ್ಕೆ ಕಾರಣರಾದ ಅಧಿಕಾರಿಗಳನ್ನು ಗುರುತಿಸಲು ಸತ್ಯಶೋಧನಾ ತನಿಖೆ ನಡೆಸುವಂತೆ ನ್ಯಾಯಾಲಯವು ವಿದ್ಯುತ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದೆ.

64 ಕೋಟಿ ಮರುಪಾವತಿ ಮಾಡುವಂತೆ ಈ ಹಿಂದೆ ನೀಡಿದ್ದ ಆದೇಶಗಳನ್ನು ನಿರ್ಲಕ್ಷಿಸಿದ ಸುಖು ಸರಕಾರವು ಈಗ ಬಡ್ಡಿಯ ಕಾರಣದಿಂದ ಸುಮಾರು 150 ಕೋಟಿ ರೂ.ಗೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ತೀರ್ಪು ನೀಡಿದೆ. ಈ ಪ್ರಕರಣವು ಲಾಹೌಲ್-ಸ್ಪಿಟಿಯಲ್ಲಿ ಚೆನಾಬ್ ನದಿಯ ಮೇಲೆ 400 ಮೆಗಾವ್ಯಾಟ್ ಸೆಲಿ ಹೈಡ್ರೋ ಯೋಜನೆಗೆ ಸಂಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.

ಕಂಪನಿಯು ಠೇವಣಿ ಇರಿಸಿದ್ದ 64 ಕೋಟಿ ರೂಪಾಯಿಗಳನ್ನು ಮತ್ತು ಶೇಕಡಾ 7 ರ ಬಡ್ಡಿಯನ್ನು ಹಿಂದಿರುಗಿಸಲು ಸರ್ಕಾರಕ್ಕೆ ಆದೇಶಿಸಲಾಯಿತು.ಬಾಕಿ ಮರುಪಾವತಿ ಮಾಡದಿದ್ದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ನ್ಯಾಯಾಲಯ ಈ ಹಿಂದೆ ಸರ್ಕಾರಕ್ಕೆ ಎಚ್ಚರಿಕೆ ನೀಡಿತ್ತು. ಬಾಕಿ ಮೊತ್ತವನ್ನು ವಸೂಲಿ ಮಾಡಲು ಹಿಮಾಚಲ ಭವನವನ್ನು ಹರಾಜು ಮಾಡಲು ನ್ಯಾಯಾಲಯವು ಕಂಪನಿಗೆ ಅನುಮತಿ ನೀಡಿದೆ.

ಯಾರೂ ನನಗೆ ರಾಜೀನಾಮೆ ನೀಡುವಂತೆ ಕೇಳಿಲ್ಲ, ನಾನೂ ಕೊಟ್ಟಿಲ್ಲ: ಹಿಮಾಚಲ ಸಿಎಂ ಸುಖು

2009 ರಲ್ಲಿ, ಸರ್ಕಾರವು 320ಎಂವಿ ವಿದ್ಯುತ್ ಯೋಜನೆಯನ್ನು ಕಂಪನಿಗೆ ಮಂಜೂರು ಮಾಡಿತ್ತು. ಈ ಯೋಜನೆಯನ್ನು ಲಾಹೌಲ್ ಸ್ಪಿತಿಯಲ್ಲಿ ಸ್ಥಾಪಿಸಬೇಕಿತ್ತು. ಯೋಜನೆಯನ್ನು ಸ್ಥಾಪಿಸಲು ಮೂಲ ಸೌಕರ್ಯಗಳ ಕೊರತೆಯಿಂದಾಗಿ ಯೋಜನೆಯನ್ನು ಮುಚ್ಚಿ ಸರ್ಕಾರಕ್ಕೆ ವಾಪಸ್ ನೀಡಬೇಕಾಯಿತು.

ಆದರೆ ಸರ್ಕಾರವು ಮುಂಗಡ ಪ್ರೀಮಿಯಂ ಅನ್ನು ಮುಟ್ಟುಗೋಲು ಹಾಕಿಕೊಂಡಿತು. ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಲಯವು ಸೆಲ್ ಕಂಪನಿಗೆ ಮುಂಗಡವಾಗಿ 64 ಕೋಟಿ ರೂ.ಗಳನ್ನು ಪಾವತಿಸುವಂತೆ ಸರ್ಕಾರಕ್ಕೆ ಆದೇಶಿಸಿತು. 7 ರಷ್ಟು ಬಡ್ಡಿಯೊಂದಿಗೆ ಮುಂದಿನ ವಿಚಾರಣೆಯಲ್ಲಿ ಅಂದರೆ ಡಿಸೆಂಬರ್ 6 ರಂದು ಬಡ್ಡಿಯ ಮೊತ್ತವನ್ನು ಪಾವತಿಸಬೇಕು ಎಂದು ನ್ಯಾಯಾಲಯವು ವಿಚಾರಣೆಯ ಸಂದರ್ಭದಲ್ಲಿ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್