AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೆಗೆ ಪೆಟ್ಟು ಬಿದ್ದ ತಕ್ಷಣ ಹಳೆಯದೆಲ್ಲವೂ ನೆನಪಾಯ್ತು, 45 ವರ್ಷಗಳ ಬಳಿಕ ಊರಿಗೆ ಮರಳಿದ ವ್ಯಕ್ತಿ

ತಲೆಗೆ ಪೆಟ್ಟುಬಿದ್ದು ಸ್ಮರಣಶಕ್ತಿ ಕಳೆದುಕೊಂಡು ನಾಪತ್ತೆಯಾಗಿದ್ದ ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ವ್ಯಕ್ತಿ ರಿಖಿ 45 ವರ್ಷಗಳ ಬಳಿಕ ಕುಟುಂಬವನ್ನು ಸೇರಿದ್ದಾರೆ. ಇದು 1980ರಲ್ಲಿ ನಡೆದ ಘಟನೆ ರಿಖಿಗೆ ಆಗ ಕೇವಲ 16 ವರ್ಷ ವಯಸ್ಸು ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ನೆನಪಿನ ಶಕ್ತಿಯನ್ನು ಕಳೆದುಕೊಂಡಿದ್ದರು. ನಂತರ ಎಲ್ಲೆಲ್ಲೋ ಅಲೆದಾಡಿದರು. ಈಗ ಮತ್ತೆ ತಲೆಗೆ ಪೆಟ್ಟು ಬಿದ್ದ ತಕ್ಷಣ ನೆನಪಿನ ಶಕ್ತಿ ವಾಪಸಾಗಿದ್ದು, 45 ವರ್ಷಗಳ ಬಳಿಕ ತನ್ನ ಮನೆಗೆ ಮರಳಿದ್ದಾರೆ.

ತಲೆಗೆ ಪೆಟ್ಟು ಬಿದ್ದ ತಕ್ಷಣ ಹಳೆಯದೆಲ್ಲವೂ ನೆನಪಾಯ್ತು, 45 ವರ್ಷಗಳ ಬಳಿಕ ಊರಿಗೆ ಮರಳಿದ ವ್ಯಕ್ತಿ
ಹಿಮಾಚಲ ಪ್ರದೇಶ
ನಯನಾ ರಾಜೀವ್
|

Updated on: Nov 22, 2025 | 7:56 AM

Share

ಶಿಮ್ಲಾ, ನವೆಂಬರ್ 22: ತಲೆಗೆ ಪೆಟ್ಟುಬಿದ್ದು ಸ್ಮರಣಶಕ್ತಿ(Memory) ಕಳೆದುಕೊಂಡು ನಾಪತ್ತೆಯಾಗಿದ್ದ ಹಿಮಾಚಲ ಪ್ರದೇಶ(Himachal Pradesh)ದ ಸಿರ್ಮೌರ್ ಜಿಲ್ಲೆಯ ವ್ಯಕ್ತಿ ರಿಖಿ 45 ವರ್ಷಗಳ ಬಳಿಕ ಕುಟುಂಬವನ್ನು ಸೇರಿದ್ದಾರೆ. ಇದು 1980ರಲ್ಲಿ ನಡೆದ ಘಟನೆ ರಿಖಿಗೆ ಆಗ ಕೇವಲ 16 ವರ್ಷ ವಯಸ್ಸು ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ನೆನಪಿನ ಶಕ್ತಿಯನ್ನು ಕಳೆದುಕೊಂಡಿದ್ದರು. ನಂತರ ಎಲ್ಲೆಲ್ಲೋ ಅಲೆದಾಡಿದರು. ಈಗ ಮತ್ತೆ ತಲೆಗೆ ಪೆಟ್ಟು ಬಿದ್ದ ತಕ್ಷಣ ನೆನಪಿನ ಶಕ್ತಿ ವಾಪಸಾಗಿದ್ದು, 45 ವರ್ಷಗಳ ಬಳಿಕ ತನ್ನ ಮನೆಗೆ ಮರಳಿದ್ದಾರೆ.

ರಿಖಿಯನ್ನು ಈಗ ರವಿ ಚೌಧರಿ ಎಂದು ಕರೆಯಲಾಗುತ್ತದೆ.ಕಳೆದ ವಾರ ತನ್ನ ಪತ್ನಿ ಮತ್ತು ಮಕ್ಕಳೊಂದಿಗೆ ನಹಾನ್ ಬಳಿಯ ತನ್ನ ಹುಟ್ಟೂರಿಗೆ ಬಂದಾಗ ಕುಟುಂಬದವರ ಕಣ್ಣಂಚಲ್ಲಿ ನೀರು ತುಂಬಿತ್ತು. ಅವರು ಸತ್ತಿದ್ದಾರೆಂದೇ ಎಲ್ಲರೂ ತಿಳಿದುಕೊಂಡಿದ್ದರು.

ಕುಟುಂಬವು ಹಾಡು, ನೃತ್ಯಗಳೊಂದಿಗೆ ಅವರನ್ನು ಸ್ವಾಗತಿಸಿತ್ತು,ಸಹೋದರರಾದ ದುರ್ಗಾ ರಾಮ್, ಚಂದರ್ ಮೋಹನ್, ಸಹೋದರಿಯರಾದ ಚಂದ್ರಮಣಿ, ಕೌಶಲ್ಯ ದೇವಿ, ಕಲಾ ದೇವಿ ಮತ್ತು ಸುಮಿತ್ರಾ ದೇವಿ ಅವರೊಂದಿಗೆ ಮತ್ತೆ ಒಂದಾದಾಗ ಅವರ ಸಂತೋಷಕ್ಕೆ ಪಾರವೇ ಇರಲಿಲ್ಲ.

ಮತ್ತಷ್ಟು ಓದಿ: ಮಕ್ಕಳಲ್ಲಿ ನೆನಪಿನ ಶಕ್ತಿ ಹೆಚ್ಚಿಸುವುದು ಹೇಗೆ? ಇಲ್ಲಿವೆ ಸರಳ ಟಿಪ್ಸ್​!

1980 ರಲ್ಲಿ ಅಂಬಾಲಕ್ಕೆ ಪ್ರಯಾಣಿಸುತ್ತಿದ್ದಾಗ ಸಂಭವಿಸಿದ ದೊಡ್ಡ ರಸ್ತೆ ಅಪಘಾತದಲ್ಲಿ ತಲೆಗೆ ಪೆಟ್ಟಾಗಿತ್ತು. ಬಳಿಕ ಎಲ್ಲಿಗೆ ಹೋಗಬೇಕೆಂದು ತೋಚದೆ ಹರಿಯಾಣದ ಯಮುನಾನಗರದ ಹೋಟೆಲ್‌ನಲ್ಲಿ ಕೆಲಸ ಮಾಡಲು ಶುರು ಮಾಡಿದ್ದರು. ಆಗ ಅವರ ಸ್ನೇಹಿತರು ಅವರಿಗೆ ರವಿ ಚೌಧರಿ ಎಂದು ಹೆಸರಿಟ್ಟಿದ್ದರು.ಬಳಿಕ ಮುಂಬೈಗೆ ತೆರಳಿದ್ದರು, ಅಲ್ಲಿ ಸಣ್ಣ ಪುಟ್ಟ ಕೆಲಸಗಳನ್ನು ಮಾಡಿಕೊಂಡಿದ್ದರು.

ನಂತರ ಕಾಲೇಜಿನಲ್ಲಿ ಕೆಲಸ ಸಿಕ್ಕ ನಂತರ ಮಹಾರಾಷ್ಟ್ರದ ನಾಂದೇಡ್‌ನಲ್ಲಿ ವಾಸವಿದ್ದರು.ಅಲ್ಲಿ ಅವರು ಮೂರು ಮಕ್ಕಳಿರುವ ಸಂತೋಷಿ ಎಂಬ ಮಹಿಳೆಯನ್ನು ವಿವಾಹವಾದರು. ಕೆಲವು ತಿಂಗಳ ಹಿಂದೆ ತಲೆಗೆ ಮತ್ತೆ ಪೆಟ್ಟು ಬಿದ್ದಾಗ ನೆನಪು ವಾಪಸಾಗಿತ್ತು.ಹುಟ್ಟೂರಿನಲ್ಲಿರುವ ನದಿ, ಮನೆಯ ಅಂಗಳ ಇವೆಲ್ಲಾ ನೆನಪಾಗಲು ಶುರುವಾಗಿತ್ತು.

ಅವು ಕನಸುಗಳಲ್ಲ ತನ್ನ ಹುಟ್ಟೂರು ಎಂಬುದನ್ನು ಅವರು ಅರಿತುಕೊಂಡರು. ಕಾಲೇಜು ವಿದ್ಯಾರ್ಥಿಯೊಬ್ಬನ ಸಹಾಯದಿಂದ ರಿಖಿ ಸತೌನ್ ಪತ್ತೆ ಹಚ್ಚಿ ಆ ಹಳ್ಳಿಯನ್ನು ಪತ್ತೆಹಚ್ಚಿದ್ದರು.ಇಂತಹ ಪ್ರಕರಣಗಳು ಅಪರೂಪ ಮತ್ತು ಮೆದುಳಿನ ವೈದ್ಯಕೀಯ ಪರೀಕ್ಷೆಯ ನಂತರವೇ ನಿಖರವಾದ ಕಾರಣ ತಿಳಿಯುತ್ತದೆ ಎಂದು ಮಾನಸಿಕ ತಜ್ಞ ಡಾ. ಆದಿತ್ಯ ಶರ್ಮಾ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು